AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತ್ತು 6 ತಿಂಗಳ ಬಳಿಕ ಮಲೇಷ್ಯಾದಿಂದ ಹುಟ್ಟೂರು ಪಿರಿಯಾಪಟ್ಟಣಕ್ಕೆ ಬಂತು ಮೃತದೇಹ!

ಮೈಸೂರು: ಆತ ಚೆನ್ನಾಗಿ ದುಡಿಬೇಕು ಅಂತ ಕೆಲಸಕ್ಕಾಗಿ ಮಲೇಷ್ಯಾಗೆ ಹೋಗಿದ್ದ. 35 ಸಾವಿರ ಸಂಬಳದ ಆಸೆ ಹುಸಿಯಾಗಿ 18 ಸಾವಿರ ಸಂಬಳದ ಕೆಲಸ ಸಿಕ್ಕಿತ್ತು. ನೊಂದ ಯುವಕ ವಾಪಸ್ ಮನೆಗೆ ಬರೋದಾಗಿ ತಾಯಿಗೆ ಕರೆ ಮಾಡಿ ಹೇಳಿದ್ದ ಆದ್ರೆ ಹುಟ್ಟೂರಿಗೆ ಬರುವ ಮೊದಲೆ ಅವನ ನಿಗೂಢ ಸಾವಾಗಿತ್ತು. ಡಿಸೆಂಬರ್‌ನಲ್ಲಿ ಮೃತಪಟ್ಟ ಯುವಕನ ಮೃತ ದೇಹ ಇಂದು ಹುಟ್ಟೂರಿಗೆ ತಲುಪಿದೆ. ಸುಮಂತ್(22) ಪಿರಿಯಾಪಟ್ಟಣದ ನಿವಾಸಿ. ಕೆಲಸಕ್ಕಾಗಿ ಮಲೇಷಿಯಾಗೆ ತೆರಳಿದ್ದ. 35 ಸಾವಿರ ರೂ. ಸಂಬಳ ಕೊಡಿಸುವುದಾಗಿ ನಂಬಿಸಿ ಮಧ್ಯವರ್ತಿಯೊಬ್ಬ […]

ಸತ್ತು 6 ತಿಂಗಳ ಬಳಿಕ ಮಲೇಷ್ಯಾದಿಂದ ಹುಟ್ಟೂರು ಪಿರಿಯಾಪಟ್ಟಣಕ್ಕೆ ಬಂತು ಮೃತದೇಹ!
ಆಯೇಷಾ ಬಾನು
| Edited By: |

Updated on:Jul 08, 2020 | 1:09 PM

Share

ಮೈಸೂರು: ಆತ ಚೆನ್ನಾಗಿ ದುಡಿಬೇಕು ಅಂತ ಕೆಲಸಕ್ಕಾಗಿ ಮಲೇಷ್ಯಾಗೆ ಹೋಗಿದ್ದ. 35 ಸಾವಿರ ಸಂಬಳದ ಆಸೆ ಹುಸಿಯಾಗಿ 18 ಸಾವಿರ ಸಂಬಳದ ಕೆಲಸ ಸಿಕ್ಕಿತ್ತು. ನೊಂದ ಯುವಕ ವಾಪಸ್ ಮನೆಗೆ ಬರೋದಾಗಿ ತಾಯಿಗೆ ಕರೆ ಮಾಡಿ ಹೇಳಿದ್ದ ಆದ್ರೆ ಹುಟ್ಟೂರಿಗೆ ಬರುವ ಮೊದಲೆ ಅವನ ನಿಗೂಢ ಸಾವಾಗಿತ್ತು. ಡಿಸೆಂಬರ್‌ನಲ್ಲಿ ಮೃತಪಟ್ಟ ಯುವಕನ ಮೃತ ದೇಹ ಇಂದು ಹುಟ್ಟೂರಿಗೆ ತಲುಪಿದೆ.

ಸುಮಂತ್(22) ಪಿರಿಯಾಪಟ್ಟಣದ ನಿವಾಸಿ. ಕೆಲಸಕ್ಕಾಗಿ ಮಲೇಷಿಯಾಗೆ ತೆರಳಿದ್ದ. 35 ಸಾವಿರ ರೂ. ಸಂಬಳ ಕೊಡಿಸುವುದಾಗಿ ನಂಬಿಸಿ ಮಧ್ಯವರ್ತಿಯೊಬ್ಬ ಆತನನ್ನು ಕರೆದೊಯ್ದಿದ್ದ. ಆದರೆ ಅಲ್ಲಿ ಅವನಿಗೆ ಕೇವಲ 18 ಸಾವಿರ ರೂ. ಕೆಲಸ ಕೊಡಿಸಿ ವಂಚನೆ ಮಾಡಿದ್ದಾನೆ. ಇದರಿಂದ ಮನನೊಂದ ಯುವಕ ವಾಪಸ್ಸು ಬರುವುದಾಗಿ ತಾಯಿಗೆ ಹೇಳಿಕೊಂಡಿದ್ದ.

ಅಷ್ಟರಲ್ಲೇ ಸುಮಂತ್ ಮಲೇಷಿಯಾದಲ್ಲಿ ಡಿಸೆಂಬರ್ ತಿಂಗಳಲ್ಲಿ ನಿಗೂಢವಾಗಿ ಮೃತಪಟ್ಟಿದ್ದ. ಈ ವಿಷಯವನ್ನು ಸುಮಂತ್ ಸಹೋದ್ಯೋಗಿಗಳು ಮನೆಯವರಿಗೆ ಮಾಹಿತಿ ತಿಳಿಸಿದ್ದರು. ಸಾವಿನ ತನಿಖೆ ಹಾಗೂ ಶವ ತರಿಸಿಕೊಳ್ಳಲು ಸಂಸದ ಪ್ರತಾಪ್‌ ಸಿಂಹ‌ಗೆ ಪೋಷಕರು ಮನವಿ ಮಾಡಿದ್ದರು.

ಭಾರತದ ರಾಯಭಾರಿ ಕಚೇರಿಗೆ ಮಾಹಿತಿ ನೀಡಿ ಶವ ತರಿಸುವುದಾಗಿ ಸಂಸದ ಪ್ರತಾಪ್‌ ಸಿಂಹ ಭರವಸೆ ನೀಡಿದ್ದರು. ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ 6 ತಿಂಗಳ ಬಳಿಕ ತಡವಾಗಿ ಸುಮಂತ್ ಮೃತದೇಹ ಹುಟ್ಟೂರಿಗೆ ಆಗಮಿಸಿದೆ. ಕೊನೆಗೂ ಅಂತ್ಯಕ್ರಿಯೆ ನೆರವೇರಿಸಿ ಕುಟುಂಬಸ್ಥರು ಸಮಾಧಾನಪಟ್ಟಿದ್ದಾರೆ.

Published On - 9:06 am, Wed, 8 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ