AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ತಡರಾತ್ರಿಯವರೆಗೂ ಜಾರಕಿಹೊಳಿ ಸಹೋದರರ ಮಾತುಕತೆ.. SITಯಿಂದ ಮತ್ತೊಮ್ಮೆ ಭವಿತ್ ವಿಚಾರಣೆ

ಸಿಎಂ ಭೇಟಿ ಮಾಡಿದ ಬಳಿಕ ನೇರವಾಗಿ ರಮೇಶ್ ಜಾರಕಿಹೊಳಿ‌ ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ‌, ಎಸ್ ಐಟಿ ತನಿಖಾ ಹಾದಿಯ ಬಗ್ಗೆ ಚರ್ಚಿಸಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ತಡರಾತ್ರಿಯವರೆಗೂ ಜಾರಕಿಹೊಳಿ ಸಹೋದರರ ಮಾತುಕತೆ.. SITಯಿಂದ ಮತ್ತೊಮ್ಮೆ ಭವಿತ್ ವಿಚಾರಣೆ
ರಮೇಶ್​ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ
ಪೃಥ್ವಿಶಂಕರ
|

Updated on: Mar 20, 2021 | 8:18 AM

Share

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಡರಾತ್ರಿವರೆಗೂ ಬೆಂಗಳೂರಿನಲ್ಲಿ ಜಾರಕಿಹೊಳಿ‌ ಸಹೋದರರ ಚರ್ಚೆ ನಡೆಸಿದ್ದಾರೆ. ಸಿಎಂ ಭೇಟಿ ಮಾಡಿದ ಬಳಿಕ ನೇರವಾಗಿ ರಮೇಶ್ ಜಾರಕಿಹೊಳಿ‌ ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ‌, ಎಸ್ ಐಟಿ ತನಿಖಾ ಹಾದಿಯ ಬಗ್ಗೆ ಚರ್ಚಿಸಿದ್ದಾರೆ.

ಮತ್ತೊಮ್ಮೆ ಗೃಹಸಚಿವರನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೇನೆ.. ಖಾಸಗಿ ಏಜೆನ್ಸಿ ಮೂಲಕ ಸಂಗ್ರಹಿಸಿರುವ ದಾಖಲೆಗಳನ್ನು ಅಗತ್ಯ ಸಂದರ್ಭದಲ್ಲಿ ಬಳಸಬಹುದು, ಸಿಡಿಯಲ್ಲಿರುವ ಯುವತಿ ವ್ಯತಿರಿಕ್ತ ಹೇಳಿಕೆ ಬಿಡುಗಡೆ ಮಾಡಿದರೂ ಧೃತಿಗೆಡಬೇಕಾಗಿಲ್ಲ, ನಮ್ಮ ಬಳಿ ಇರುವ ದಾಖಲೆಗಳ ಮೂಲಕವೇ ಪ್ರಕರಣವನ್ನು ಎದುರಿಸಬಹುದು, ನಾನು ಮತ್ತೊಮ್ಮೆ ಗೃಹಸಚಿವರನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೇನೆ ಎಂದು ರಮೇಶ್ ಜಾರಕಿಹೊಳಿ‌ಗೆ ಧೈರ್ಯ ತುಂಬಿದ್ದಾರೆ. ಭಾನುವಾರ ಸಂಜೆ ವೇಳೆಗೆ ಮತ್ತೊಮ್ಮೆ ಗೃಹಸಚಿವ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಚರ್ಚೆ ‌ನಡೆಸಲು ಜಾರಕಿಹೊಳಿ‌ ಸಹೋದರರು ತೀರ್ಮಾನ ಮಾಡಿದ್ದಾರೆ.

ಎಸ್‌ಐಟಿ ಅಧಿಕಾರಿಗಳಿಂದ ಮತ್ತೊಮ್ಮೆ ಭವಿತ್ ವಿಚಾರಣೆ ವಿಡಿಯೋದಲ್ಲಿ ಹಿನ್ನೆಲೆ ಧ್ವನಿ ಸಂಬಂಧ ಭವಿತ್ ವಿಚಾರಣೆ ಮಾಡಲಾಗಿದೆ. ಇದಕ್ಕೂ ಮುನ್ನ ಒಮ್ಮೆ SIT ಅಧಿಕಾರಿಗಳಿಂದ ಭವಿತ್​ನನ್ನು ವಿಚಾರಣೆ ನಡೆಸಲಾಗಿತ್ತು. SIT ವಿಚಾರಣೆಯ ಬಳಿಕ ಭವಿತ್ ವಿಡಿಯೋ ಮಾಡಿ ಹರಿಬಿಟ್ಟಿದ್ದ. ವಿಡಿಯೋ ಬಗ್ಗೆ ಮಾನಿಟರ್ ಮಾಡಿದ್ದ SIT ಅಧಿಕಾರಿಗಳು, ವಿಡಿಯೋದಲ್ಲಿ ಉಲ್ಲೇಖಿಸಿದ ಅಂಶಗಳ ಆಧಾರದಲ್ಲಿ‌ ವಿಚಾರಣೆ ನಡೆಸಿದ್ದಾರೆ.

ಸ್ವಯಂಪ್ರೇರಿತ ಹೇಳಿಕೆ ವಿಡಿಯೋ ವೈರಲ್ ಆಗಿದ್ದು ಹೇಗೆ? ಹ್ಯಾಕರ್ ಬಿಟ್ಟು ಬೇಱರು ಟೆಕ್ನಿಕಲ್ ಸಾಥ್ ನೀಡ್ತಿರೋದು? ಯಾರ ಮೂಲಕ ವಿಡಿಯೋ ಮಾಡಿಸಲಾಗಿದೆ ಎಂದು ಪ್ರಶ್ನೆ ಮಾಡಿರುವ ಎಸ್‌ಐಟಿ ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಸತತ 3 ಗಂಟೆಗಳ ಕಾಲ ಎಸ್‌ಐಟಿಯಿಂದ ವಿಚಾರಣೆ ಮಾಡಲಾಗಿದ್ದು, ವಿಚಾರಣೆ ಬಳಿಕ ಭವಿತ್‌ನನ್ನು ಎಸ್‌ಐಟಿ ಅಧಿಕಾರಿಗಳು ಬಿಟ್ಟು ಕಳಿಸಿದ್ದಾರೆ.

ಇದನ್ನೂ ಓದಿ:ಸಿಡಿಯಲ್ಲಿರುವ ಯುವತಿ ನಿಮಗೆ ಪರಿಚಯವೇ? -ರಮೇಶ್ ಜಾರಕಿಹೊಳಿಗೆ SIT ಅಧಿಕಾರಿಗಳ ನೇರ ಪ್ರಶ್ನೆ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?