AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ತಡರಾತ್ರಿಯವರೆಗೂ ಜಾರಕಿಹೊಳಿ ಸಹೋದರರ ಮಾತುಕತೆ.. SITಯಿಂದ ಮತ್ತೊಮ್ಮೆ ಭವಿತ್ ವಿಚಾರಣೆ

ಸಿಎಂ ಭೇಟಿ ಮಾಡಿದ ಬಳಿಕ ನೇರವಾಗಿ ರಮೇಶ್ ಜಾರಕಿಹೊಳಿ‌ ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ‌, ಎಸ್ ಐಟಿ ತನಿಖಾ ಹಾದಿಯ ಬಗ್ಗೆ ಚರ್ಚಿಸಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ತಡರಾತ್ರಿಯವರೆಗೂ ಜಾರಕಿಹೊಳಿ ಸಹೋದರರ ಮಾತುಕತೆ.. SITಯಿಂದ ಮತ್ತೊಮ್ಮೆ ಭವಿತ್ ವಿಚಾರಣೆ
ರಮೇಶ್​ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ
ಪೃಥ್ವಿಶಂಕರ
|

Updated on: Mar 20, 2021 | 8:18 AM

Share

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಡರಾತ್ರಿವರೆಗೂ ಬೆಂಗಳೂರಿನಲ್ಲಿ ಜಾರಕಿಹೊಳಿ‌ ಸಹೋದರರ ಚರ್ಚೆ ನಡೆಸಿದ್ದಾರೆ. ಸಿಎಂ ಭೇಟಿ ಮಾಡಿದ ಬಳಿಕ ನೇರವಾಗಿ ರಮೇಶ್ ಜಾರಕಿಹೊಳಿ‌ ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ‌, ಎಸ್ ಐಟಿ ತನಿಖಾ ಹಾದಿಯ ಬಗ್ಗೆ ಚರ್ಚಿಸಿದ್ದಾರೆ.

ಮತ್ತೊಮ್ಮೆ ಗೃಹಸಚಿವರನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೇನೆ.. ಖಾಸಗಿ ಏಜೆನ್ಸಿ ಮೂಲಕ ಸಂಗ್ರಹಿಸಿರುವ ದಾಖಲೆಗಳನ್ನು ಅಗತ್ಯ ಸಂದರ್ಭದಲ್ಲಿ ಬಳಸಬಹುದು, ಸಿಡಿಯಲ್ಲಿರುವ ಯುವತಿ ವ್ಯತಿರಿಕ್ತ ಹೇಳಿಕೆ ಬಿಡುಗಡೆ ಮಾಡಿದರೂ ಧೃತಿಗೆಡಬೇಕಾಗಿಲ್ಲ, ನಮ್ಮ ಬಳಿ ಇರುವ ದಾಖಲೆಗಳ ಮೂಲಕವೇ ಪ್ರಕರಣವನ್ನು ಎದುರಿಸಬಹುದು, ನಾನು ಮತ್ತೊಮ್ಮೆ ಗೃಹಸಚಿವರನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೇನೆ ಎಂದು ರಮೇಶ್ ಜಾರಕಿಹೊಳಿ‌ಗೆ ಧೈರ್ಯ ತುಂಬಿದ್ದಾರೆ. ಭಾನುವಾರ ಸಂಜೆ ವೇಳೆಗೆ ಮತ್ತೊಮ್ಮೆ ಗೃಹಸಚಿವ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಚರ್ಚೆ ‌ನಡೆಸಲು ಜಾರಕಿಹೊಳಿ‌ ಸಹೋದರರು ತೀರ್ಮಾನ ಮಾಡಿದ್ದಾರೆ.

ಎಸ್‌ಐಟಿ ಅಧಿಕಾರಿಗಳಿಂದ ಮತ್ತೊಮ್ಮೆ ಭವಿತ್ ವಿಚಾರಣೆ ವಿಡಿಯೋದಲ್ಲಿ ಹಿನ್ನೆಲೆ ಧ್ವನಿ ಸಂಬಂಧ ಭವಿತ್ ವಿಚಾರಣೆ ಮಾಡಲಾಗಿದೆ. ಇದಕ್ಕೂ ಮುನ್ನ ಒಮ್ಮೆ SIT ಅಧಿಕಾರಿಗಳಿಂದ ಭವಿತ್​ನನ್ನು ವಿಚಾರಣೆ ನಡೆಸಲಾಗಿತ್ತು. SIT ವಿಚಾರಣೆಯ ಬಳಿಕ ಭವಿತ್ ವಿಡಿಯೋ ಮಾಡಿ ಹರಿಬಿಟ್ಟಿದ್ದ. ವಿಡಿಯೋ ಬಗ್ಗೆ ಮಾನಿಟರ್ ಮಾಡಿದ್ದ SIT ಅಧಿಕಾರಿಗಳು, ವಿಡಿಯೋದಲ್ಲಿ ಉಲ್ಲೇಖಿಸಿದ ಅಂಶಗಳ ಆಧಾರದಲ್ಲಿ‌ ವಿಚಾರಣೆ ನಡೆಸಿದ್ದಾರೆ.

ಸ್ವಯಂಪ್ರೇರಿತ ಹೇಳಿಕೆ ವಿಡಿಯೋ ವೈರಲ್ ಆಗಿದ್ದು ಹೇಗೆ? ಹ್ಯಾಕರ್ ಬಿಟ್ಟು ಬೇಱರು ಟೆಕ್ನಿಕಲ್ ಸಾಥ್ ನೀಡ್ತಿರೋದು? ಯಾರ ಮೂಲಕ ವಿಡಿಯೋ ಮಾಡಿಸಲಾಗಿದೆ ಎಂದು ಪ್ರಶ್ನೆ ಮಾಡಿರುವ ಎಸ್‌ಐಟಿ ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಸತತ 3 ಗಂಟೆಗಳ ಕಾಲ ಎಸ್‌ಐಟಿಯಿಂದ ವಿಚಾರಣೆ ಮಾಡಲಾಗಿದ್ದು, ವಿಚಾರಣೆ ಬಳಿಕ ಭವಿತ್‌ನನ್ನು ಎಸ್‌ಐಟಿ ಅಧಿಕಾರಿಗಳು ಬಿಟ್ಟು ಕಳಿಸಿದ್ದಾರೆ.

ಇದನ್ನೂ ಓದಿ:ಸಿಡಿಯಲ್ಲಿರುವ ಯುವತಿ ನಿಮಗೆ ಪರಿಚಯವೇ? -ರಮೇಶ್ ಜಾರಕಿಹೊಳಿಗೆ SIT ಅಧಿಕಾರಿಗಳ ನೇರ ಪ್ರಶ್ನೆ

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!