AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ಸಂಘಟನೆಗಳು ಮಧ್ಯರಾತ್ರಿ ಮಾತುಕತೆಗೆ ಬಂದರೂ ಸರ್ಕಾರ ಸಿದ್ಧವಿದೆ: ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್

ಕಳೆದ ನವೆಂಬರ್ ತಿಂಗಳಿಂದ ದೆಹಲಿಯ ಗಡಿ ಭಾಗದಲ್ಲಿ ನಡೆಸುತ್ತಿರುವ ಮುಷ್ಕರದಲ್ಲಿ ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ರೈತರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೊಸ ಕೃಷಿ ಕಾನೂನುಗಳನ್ನು ವಾಪಸ್ಸು ತೆಗೆದುಕೊಳ್ಳುವ ಜೊತೆಗೆ ಕಾನೂನು ಬೆಂಬಲಿತ ಕನಿಷ್ಟ ಬೆಂಬಲ ಬೆಲೆಯನ್ನು (ಎಮ್​ಎಸ್​ಪಿ) ರೈತರು ಆಗ್ರಹಿಸುತ್ತಿದ್ದಾರೆ.

ರೈತ ಸಂಘಟನೆಗಳು ಮಧ್ಯರಾತ್ರಿ ಮಾತುಕತೆಗೆ ಬಂದರೂ ಸರ್ಕಾರ ಸಿದ್ಧವಿದೆ: ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್
ದೆಹಲಿಯಲ್ಲಿ ರೈತರ ಪ್ರತಿಭಟನೆ
ಅರುಣ್​ ಕುಮಾರ್​ ಬೆಳ್ಳಿ
|

Updated on: Jun 18, 2021 | 10:06 PM

Share

ನವದೆಹಲಿ: ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಹಲವು ತಿಂಗಳುಗಳಿಂದ ಮುಷ್ಕರ ನಡೆಸುತ್ತಿರುವ ರೈತ ಒಕ್ಕೂಟಗಳೊಂದಿಗೆ ಮಾತುಕತೆಗಳನ್ನು ಪುನರಾರಂಭಿಸಲು ಕೇಂದ್ರ ಸಿದ್ಧವಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಶುಕ್ರವಾರ ಹೇಳಿದರಾದರೂ ಅವುಗಳನ್ನು ಹಿಂಪಡೆಯುವ ಸಾಧ್ಯತೆಯನ್ನು ಅಲ್ಲಗಳೆದರು. ‘ಹೊಸ ಕೃಷಿ ಕಾಯ್ದೆಯ ಪ್ರಯೋಜನಗಳ ಬಗ್ಗೆ ಯಾವುದೇ ರೈತ ಸಂಘಟನೆಯೊಂದಿಗೆ ಚರ್ಚಿಸಲು ಭಾರತ ಸರ್ಕಾರ ತಯಾರಿದೆ, ಮಾತುಕತೆಗೆ ನಾವು ಅವರನ್ನು ಸ್ವಾಗತಿಸುತ್ತೇವೆ,’ ಎಂದು ಹಿಂದಿ ಭಾಷೆಯಲ್ಲಿ ಟ್ವೀಟ್​ ಮಾಡಿರುವ ತೋಮರ್ ಹೇಳಿದ್ದಾರೆ.

‘ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಮಾತನ್ನು ಬಿಟ್ಟು ಅದರ ಪ್ರಯೋಜನಗಳ ಕುರಿತು ಮಾತಾಡಲು ಮಧ್ಯರಾತ್ರಿ ಸಮಯದಲ್ಲಿ ಯಾವುದಾದರು ರೈತ ಸಂಘಟನೆ ಬಂದರೂ ನಾವು ಸಿದ್ಧರಿದ್ದೇವೆ,’ ಎಂದು ತೋಮರ್ ತಮ್ಮ ಟ್ವೀಟ್​ಗೆ ಅಟ್ಯಾಚ್​ ಮಾಡಿರುವ ವಿಡಿಯೋ ಕ್ಲಿಪ್ಪಿಂಗ್​ನಲ್ಲಿ ಹೇಳಿದ್ದಾರೆ. ವಿಡಿಯೋನಲ್ಲಿ ಅವರು ಒಬ್ಬ ವರದಿಗಾರ ಕೇಳಿರುವ ಪ್ರಶ್ನೆಗೆ ಉತ್ತರಿಸುತ್ತಿದ್ದಾರೆ.

ಜನವರಿ 22 ರಂದು ಎರಡು ಪಕ್ಷಗಳ ನಡುವೆ ಮಾತುಕತೆ ನಡೆದ ನಂತರ ಅದು ಸ್ಥಗಿತಗೊಂಡಿದೆ. ಕೇಂದ್ರ ಮತ್ತು ರೈತ ಸಂಘಟನೆಗಳ ನಡುವೆ ಇದುವರಗೆ 11 ಬಾರಿ ಮಾತುಕತೆಗಳು ನಡೆದಿವೆ. ಜನೆವರಿ 22ರಂದ ನಡೆದ ಸಭೆಯಲ್ಲಿ ಸರ್ಕಾರವು ಹೊಸ ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆಯುವ ಬದಲು, 18 ತಿಂಗಳ ಅವಧಿಯವರೆಗೆ ಹಿಡಿದಿಡುವ ಕುರಿತು ಮಾಡಿದ ಪ್ರಸ್ತಾವವನೆಯನ್ನು ರೈತ ಸಂಘಟನೆಗಳು ತಿಸ್ಕರಿಸಿದವು. ಅವುಗಳನ್ನು ಸಂಪೂರ್ಣವಾಗಿ ಹಿಂಪಡೆಯಬೇಕೆಂದು ಅವು ಪಟ್ಟು ಹಿಡಿದವು. ಕಾಯ್ದೆಗಳನ್ನು ತಡೆಹಿಡಿಯುವ ಪ್ರಸ್ತಾವನೆಯನ್ನು ಸರ್ಕಾರ 10 ನೇ ಸುತ್ತಿನ ಮತುಕತೆಯಿಂದ ಮಾಡುತ್ತಿದೆ. ಅದರೆ ಅವುಗಳನ್ನು ರೋಲ್​ಬ್ಯಾಕ್​ ಮಾಡುವುದು ಸಾಧ್ಯವೇ ಇಲ್ಲವೆಂದು ಪದೇಪದೆ ಹೇಳುತ್ತಿದೆ.

ಅದಕ್ಕೆ ಮೊದಲು, ಸರ್ವೋಚ್ಛ ನ್ಯಾಯಾಲಯವು ತನ್ನ ಮುಂದಿನ ಆದೇಶದವರೆಗೆ ಹೊಸ ಕೃಷಿ ಕಾಯ್ದೆಗಳನ್ನು ಜಾರಿಗೆ ತರಬಾರದೆಂದು ಹೇಳಿ ಅವುಗಳನ್ನು ತಡೆಹಿಡಿದಿದೆ.

ಕಳೆದ ನವೆಂಬರ್ ತಿಂಗಳಿಂದ ದೆಹಲಿಯ ಗಡಿ ಭಾಗದಲ್ಲಿ ನಡೆಸುತ್ತಿರುವ ಮುಷ್ಕರದಲ್ಲಿ ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ರೈತರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೊಸ ಕೃಷಿ ಕಾನೂನುಗಳನ್ನು ವಾಪಸ್ಸು ತೆಗೆದುಕೊಳ್ಳುವ ಜೊತೆಗೆ ಕಾನೂನು ಬೆಂಬಲಿತ ಕನಿಷ್ಟ ಬೆಂಬಲ ಬೆಲೆಯನ್ನು (ಎಮ್​ಎಸ್​ಪಿ) ರೈತರು ಆಗ್ರಹಿಸುತ್ತಿದ್ದಾರೆ.

ರೈತರ ವ್ಯಾಪಕ ವಿರೋಧದ ನಡುವೆ ಕೇಂದ್ರವು ಬೆಲೆ ಖಾತರಿ ಮತ್ತು ಕೃಷಿ ಸೇವೆಗಳಿಗೆ ರೈತರ (ಸಬಲೀಕರಣ ಮತ್ತು ರಕ್ಷಣೆ) ಒಪ್ಪಿಗೆ ಕಾಯ್ದೆ 2020, ಕೃಷಿ ಉತ್ಪನ್ನಗಳ ವ್ಯಾಪಾರ ಮತ್ತು ಮಾರಾಟ (ಉತ್ತೇಜನ ಮತ್ತು ನೆರವು) ಕಾಯ್ದೆ 2020 ಮತ್ತು ಅಗತ್ಯ ವಸ್ತುಗಳ (ತಿದ್ದುಪಡಿ) ಕಾಯ್ದೆ 2020- ಈ ಮೂರು ವಿಧೇಯಕಗಳನ್ನು ಕಳೆದ ಸೆಪ್ಟಂಬರ್​ನಲ್ಲಿ ಸಂಸತ್ತಿನಲ್ಲಿ ಪಾಸು ಮಾಡಿತು. ಈ ಕಾಯ್ದೆಗಳು ಎಪಿಎಮ್​ಸಿ ವ್ಯವಸ್ಥೆ ಮತ್ತು ರೈತರು ತಮ್ಮ ಬೆಳೆಗಳಿಗೆ ಪಡೆಯುವ ಕನಿಷ್ಟ ಬೆಂಬಲ ಬೆಲೆ ಪದ್ಧತಿಯನ್ನು ಕೊನೆಗೊಳಿಸುತ್ತವೆ ಮತ್ತು ತಮ್ಮನ್ನು ದೊಡ್ಡ ಕಾರ್ಪೋರೇಟ್​ಗಳ ದಯಾಭಿಕ್ಷೆಗೆ ಈಡು ಮಾಡಲಿವೆ ಎಂದು ರೈತರು ಆರೋಪಿಸುತ್ತಿದ್ದಾರೆ. ಆದರೆ, ರೈತರ ಆತಂಕ ಆಧಾರರಹಿತವಾದದ್ದು ಎಂದು ಸರ್ಕಾರ ಹೇಳುತ್ತಿದೆ.

ಜನೆವರಿ 26 ಗಣರಾಜ್ಯೋತ್ಸವ ದಿನದಂದು ರೈತರು ನವದೆಹಲಿಯಲ್ಲಿ ಟ್ರ್ಯಾಕ್ಟರ್ ಱಲಿ ಆಯೋಜಿಸಿದಾಗ ಅವರ ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿತ್ತು.

ಇದನ್ನೂ ಓದಿ: Farmers Protest: ಕೇಂದ್ರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಲು ನಿರ್ಧಾರ; ಇಂದು ಮಮತಾ ಬ್ಯಾನರ್ಜಿಯನ್ನು ಭೇಟಿ ಮಾಡಲಿರುವ ರಾಕೇಶ್​ ಟಿಕಾಯತ್​

ಇದನ್ನೂ ಓದಿ: Farmers Protest: ಜೂನ್​ 26ರಂದು ದೇಶಾದ್ಯಂತ ರೈತರ ಪ್ರತಿಭಟನೆ; ರಾಜಭವನದ ಮುಂದೆ ಕಪ್ಪು ಬಾವುಟ ಹಿಡಿದು ಧರಣಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ