AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಗಾರು ಆರಂಭಕ್ಕೆ ಮುನ್ನ.. ಧಾರವಾಡದಲ್ಲಿ NDRF ಯೋಧರಿಗೆ ದಿಢೀರನೆ ಏನಾಯ್ತು?

ಧಾರವಾಡ: ಎಲ್ಲೆಡೆ ಈಗ ಮುಂಗಾರು ಶುರುವಾಗಿದೆ. ಮಳೆ ಹೆಚ್ಚು ಸುರಿದರೆ ಪ್ರವಾಹದ ಆತಂಕವೂ ಶುರುವಾಗಲಿದೆ. ಕಳೆದ ವರ್ಷದ ಪ್ರಕೃತಿಯ ರೌದ್ರಾವತಾರ ಇನ್ನೂ ಮಾಸದೇ ನೆನಪಲ್ಲಿಯೇ ಇದೆ. ಹೌದು ಉತ್ತರ ಕರ್ನಾಟಕದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕಳೆದ ವರ್ಷ ಭಾರೀ ಪ್ರವಾಹ ಉಂಟಾಗಿತ್ತು. ಅನೇಕರು ಮೃತಪಟ್ಟು, ಸಾವಿರಾರು ಜನರು ಮನೆ, ಬೆಳೆ, ಆಸ್ತಿ ಕಳೆದುಕೊಂಡಿದ್ದರು. ಆದರೆ ಈ ಬಾರಿ ಹಾಗಾಗದಂತೆ ರಾಜ್ಯ ಸರಕಾರ ಮುನ್ನೆಚ್ಚರಿಕೆ ಕ್ರಮಗಳಿಗೆ ಮುಂದಾಗಿದೆ. ಧಾರವಾಡದಲ್ಲಿ ಎನ್‌ಡಿಆರ್‌ಎಫ್‌‌ ಬಟಾಲಿಯನ್‌ ಮಳೆಗಾಲದಲ್ಲಿ ಆಗಬಹುದಾದ ತೊಂದರೆಗಳನ್ನು ನಿರ್ವಹಿಸಲು ಧಾರವಾಡ […]

ಮುಂಗಾರು ಆರಂಭಕ್ಕೆ ಮುನ್ನ.. ಧಾರವಾಡದಲ್ಲಿ NDRF ಯೋಧರಿಗೆ ದಿಢೀರನೆ ಏನಾಯ್ತು?
ಸಾಧು ಶ್ರೀನಾಥ್​
| Edited By: |

Updated on:Jun 15, 2020 | 11:08 AM

Share

ಧಾರವಾಡ: ಎಲ್ಲೆಡೆ ಈಗ ಮುಂಗಾರು ಶುರುವಾಗಿದೆ. ಮಳೆ ಹೆಚ್ಚು ಸುರಿದರೆ ಪ್ರವಾಹದ ಆತಂಕವೂ ಶುರುವಾಗಲಿದೆ. ಕಳೆದ ವರ್ಷದ ಪ್ರಕೃತಿಯ ರೌದ್ರಾವತಾರ ಇನ್ನೂ ಮಾಸದೇ ನೆನಪಲ್ಲಿಯೇ ಇದೆ. ಹೌದು ಉತ್ತರ ಕರ್ನಾಟಕದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕಳೆದ ವರ್ಷ ಭಾರೀ ಪ್ರವಾಹ ಉಂಟಾಗಿತ್ತು. ಅನೇಕರು ಮೃತಪಟ್ಟು, ಸಾವಿರಾರು ಜನರು ಮನೆ, ಬೆಳೆ, ಆಸ್ತಿ ಕಳೆದುಕೊಂಡಿದ್ದರು. ಆದರೆ ಈ ಬಾರಿ ಹಾಗಾಗದಂತೆ ರಾಜ್ಯ ಸರಕಾರ ಮುನ್ನೆಚ್ಚರಿಕೆ ಕ್ರಮಗಳಿಗೆ ಮುಂದಾಗಿದೆ.

ಧಾರವಾಡದಲ್ಲಿ ಎನ್‌ಡಿಆರ್‌ಎಫ್‌‌ ಬಟಾಲಿಯನ್‌ ಮಳೆಗಾಲದಲ್ಲಿ ಆಗಬಹುದಾದ ತೊಂದರೆಗಳನ್ನು ನಿರ್ವಹಿಸಲು ಧಾರವಾಡ ಜಿಲ್ಲಾಡಳಿತ  ಧಾರವಾಡಕ್ಕೆ  ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯನ್ನು ಕರೆಯಿಸಿಕೊಂಡಿದೆ. ವಿಜಯವಾಡದಿಂದ ಬಂದಿರುವ ಎನ್.ಡಿ.ಆರ್.ಎಫ್. 10ನೇ ಬಟಾಲಿಯನ್‌ನ 21 ಯೋಧರು ಇದೀಗ ಯಾವುದೇ ವಿಪತ್ತು ಸಂಭವಿಸಿದರೂ ಜನರನ್ನು ರಕ್ಷಣೆ ಮಾಡಲು ಸನ್ನದ್ಧರಾಗಿ ನಿಂತಿದ್ದಾರೆ.

ಜನರೊಂದಿಗೆ ತಾವಿದ್ದೇವೆ ಅನ್ನೋದರ ಬಗ್ಗೆ ಜಾಗೃತಿ ಮೂಡಿಸಲು ಧಾರವಾಡದಲ್ಲಿ ಈ ಯೋಧರು ನೀರಿನಲ್ಲಿ ಜೀವರಕ್ಷಣಾ ಕಾರ್ಯದ ಪ್ರಾತ್ಯಕ್ಷಿಕೆ ನೀಡಿ ಜನರಲ್ಲಿ ಅರಿವು ಮೂಡಿಸಿದರು. ನಗರದ ಕೆಲಗೇರಿ ಕೆರೆಯಲ್ಲಿ ವಿಹಾರಕ್ಕೆ ಆಗಮಿಸಿದ ಪ್ರವಾಸಿಗರು ಆಕಸ್ಮಿಕವಾಗಿ ಬೋಟಿನಿಂದ ಕೆರೆಯ ಮಧ್ಯದ ನೀರಿನಲ್ಲಿ ಬಿದ್ದು, ಮುಳುಗಲು ಆರಂಭಿಸಿದಾಗ ಮತ್ತೊಂದು ಮೂಲೆಯಲ್ಲಿದ್ದ ಎನ್.ಡಿ.ಆರ್.ಎಫ್. ಯೋಧರು ಮುಳುಗುತ್ತಿದ್ದ ಪ್ರವಾಸಿಗರನ್ನು ರಕ್ಷಿಸುವ ಪ್ರಾತ್ಯಕ್ಷಿಕೆ ನೀಡಿದರು. ಈ ಬಾರಿಯೂ ಹೆಚ್ಚು ಮಳೆ: ಹವಾಮಾನ ಇಲಾಖೆ ಈ ವರ್ಷವೂ ಸಹ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಒಂದು ವೇಳೆ ಅಪಾರ ಮಳೆ ಬಂದರೆ ಜನ, ಜಾನುವಾರು, ಸಾರ್ವಜನಿಕ ಆಸ್ತಿಗಳನ್ನು ರಕ್ಷಿಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಳ್ಳುತಿದೆ. ಈ ಸಂಬಂಧ ಜಿಲ್ಲಾಧಿಕಾರಿ ದೀಪಾ ಚೋಳನ್, ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ, ತಹಸಿಲ್ದಾರ ಡಾ.ಸಂತೋಷ ಬಿರಾದಾರ ಸೇರಿದಂತೆ ವಿವಿಧ ಅಧಿಕಾರಿಗಳು ಸಭೆ ನಡೆಸಿದ್ದಾರೆ.

Published On - 6:25 pm, Sun, 14 June 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?