AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕ ಆತ್ಮಹತ್ಯೆ: ಕೆಂಪೇಗೌಡ ಅಂ. ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಸೇವೆ ದಿಢೀರ್​ ಸ್ಥಗಿತ, ಪ್ರಯಾಣಿಕರ ಪರದಾಟ

ಟ್ಯಾಕ್ಸಿಗಳು ಬೆಳಗ್ಗೆಯಿಂದಲೂ ವಿಮಾನ ನಿಲ್ದಾಣಕ್ಕೆ ಬಾರದೆ, ಟ್ಯಾಕ್ಸಿಗಳ ಸ್ಥಗಿತದಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಟ್ಯಾಕ್ಸಿಗಳು ಬಾರದ ಹಿನ್ನೆಲೆ ವಿಮಾನ ನಿಲ್ದಾಣದಲ್ಲಿ ವಾಯುವಜ್ರ ಬಸ್ ಗಳ ಹೆಚ್ಚುವರಿ ನಿಯೋಜನೆ ಮಾಡಲಾಗಿದೆ. ಟ್ಯಾಕ್ಸಿ ಸ್ಟಾಂಡ್ ನಿಂದಲೇ ಪ್ರಯಾಣಿಕರ ಅನುಕೂಲಕ್ಕೆ ಬಸ್ ಗಳ ನಿಯೋಜನೆ ಮಾಡಲಾಗಿದೆ. ಆದರೆ ಬಸ್ ಗಳಲ್ಲಿ ತೆರಳಲು ಕೆಲ ಪ್ರಯಾಣಿಕರು ಹಿಂದೇಟು ಹಾಕುತ್ತಿರುವ ಬೆಳವಣಿಗೆಗಳೂ ಕಂಡುಬಂದಿವೆ.

ಚಾಲಕ ಆತ್ಮಹತ್ಯೆ: ಕೆಂಪೇಗೌಡ ಅಂ. ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಸೇವೆ ದಿಢೀರ್​ ಸ್ಥಗಿತ, ಪ್ರಯಾಣಿಕರ ಪರದಾಟ
ಏರ್ಪೋರ್ಟ್ ಟ್ಯಾಕ್ಸಿ
ಸಾಧು ಶ್ರೀನಾಥ್​
| Edited By: |

Updated on: Mar 31, 2021 | 11:15 AM

Share

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ ಸಂಜೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕ್ಯಾಬ್ ಚಾಲಕ ಪ್ರತಾಪ್ ಇಂದು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕೋಪೋದ್ರಿಕ್ತಗೊಂಡ ಇತರೆ ಟ್ಯಾಕ್ಸಿ ಚಾಲಕರು ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಚಾಲನೆ ಸ್ಥಗಿತಗೊಳಿಸಿದ್ದಾರೆ.

ಟ್ಯಾಕ್ಸಿಗಳು ಬೆಳಗ್ಗೆಯಿಂದಲೂ ವಿಮಾನ ನಿಲ್ದಾಣಕ್ಕೆ ಬಾರದೆ, ಟ್ಯಾಕ್ಸಿಗಳ ಸ್ಥಗಿತದಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಟ್ಯಾಕ್ಸಿಗಳು ಬಾರದ ಹಿನ್ನೆಲೆ ವಿಮಾನ ನಿಲ್ದಾಣದಲ್ಲಿ ವಾಯುವಜ್ರ ಬಸ್ ಗಳ ಹೆಚ್ಚುವರಿ ನಿಯೋಜನೆ ಮಾಡಲಾಗಿದೆ. ಟ್ಯಾಕ್ಸಿ ಸ್ಟಾಂಡ್ ನಿಂದಲೇ ಪ್ರಯಾಣಿಕರ ಅನುಕೂಲಕ್ಕೆ ಬಸ್ ಗಳ ನಿಯೋಜನೆ ಮಾಡಲಾಗಿದೆ. ಆದರೆ ಬಸ್ ಗಳಲ್ಲಿ ತೆರಳಲು ಕೆಲ ಪ್ರಯಾಣಿಕರು ಹಿಂದೇಟು ಹಾಕುತ್ತಿರುವ ಬೆಳವಣಿಗೆಗಳೂ ಕಂಡುಬಂದಿವೆ.

ತಮ್ಮ ಬೇಡಿಕೆಗಳನ್ನ ಈಡೇರಿಸುವವರೆಗೂ ಟ್ಯಾಕ್ಸಿಗಳನ್ನ ಓಡಿಸದೇ ಇರಲು ಚಾಲಕ ಸಂಘ ನಿರ್ಧಾರ ಮಾಡಿದೆ. ಟ್ಯಾಕ್ಸಿ ಚಾಲಕರ ನಿರ್ಧಾರದಿಂದ ಪ್ರಯಾಣಿಕರಿಗೆ ನಗರದ ವಿವಿಧ ಭಾಗಗಳಿಗೆ ತೆರಳಲು ಅನಾಣುಕೂಲವಾಗಿದೆ. ಮಧ್ಯಾಹ್ನದ ನಂತರ ಟ್ಯಾಕ್ಸಿ ಚಾಲಕರಿಂದ ಪ್ರತಿಭಟನೆ ತೀವ್ರಗೊಳ್ಳುವ ಸಾಧ್ಯತೆಯಿದೆ. ಒಂದು ಕಿ.ಮೀ.ಗೆ 24 ರೂ ದರ ನಿಗದಿ ಮಾಡಿ ಚಾಲಕರ ಜೀವನ ಉಳಿಸಿ ಎಂದು ಪ್ರತಿಭಟನೆ ನಡೆಸುವುದಾಗಿ ಟ್ಯಾಕ್ಸಿ ಚಾಲಕರ ಸಂಘ ಪ್ರಕಟಿಸಿದೆ.

ಇದನ್ನೂ ಓದಿ: ಏರ್‌ಪೋರ್ಟ್ ಕ್ಯಾಬ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕ ಆಸ್ಪತ್ರೆಯಲ್ಲಿ ಸಾವು

ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ