AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಲ್ಲಿ ಪಾಲ್ಗೊಳ್ಳಲು ಬಂದ ಐಶ್ವರ್ಯಾ ರೈ ಕುಟುಂಬ; ಭರ್ಜರಿ ಡಾನ್ಸ್​ ವಿಡಿಯೋ ವೈರಲ್

ಐಶ್ವರ್ಯಾ ರೈ ತಾಯಿ ಕೂಡ ಈ ಮದುವೆಯಲ್ಲಿ ಪಾಲ್ಗೊಂಡಿದ್ದರು. ಇದು ತುಂಬಾನೇ ಖಾಸಗಿಯಾಗಿ ನಡೆದ ಕಾರ್ಯಕ್ರಮ ಆಗಿದ್ದರಿಂದ ಕೇವಲ ಆಪ್ತರು ಮಾತ್ರ ಭಾಗಿಯಾಗಿದ್ದರು.

ಮದುವೆಯಲ್ಲಿ ಪಾಲ್ಗೊಳ್ಳಲು ಬಂದ ಐಶ್ವರ್ಯಾ ರೈ ಕುಟುಂಬ; ಭರ್ಜರಿ ಡಾನ್ಸ್​ ವಿಡಿಯೋ ವೈರಲ್
ಐಶ್ವರ್ಯಾ ರೈ
ರಾಜೇಶ್ ದುಗ್ಗುಮನೆ
| Edited By: |

Updated on: Feb 26, 2021 | 5:41 PM

Share

ನಟಿ ಐಶ್ವರ್ಯಾ ರೈ ಮಂಗಳೂರು ಮೂಲದವರು. ಅವರು ಮುಂಬೈನಲ್ಲೇ ಸೆಟಲ್​ ಆದರೂ ಕರ್ನಾಟಕಕ್ಕೆ ಆಗಾಗ ಭೇಟಿ ನೀಡುತ್ತಿರುತ್ತಾರೆ. ಕೆಲವೊಮ್ಮೆ ಅವರು ಮಂಗಳೂರಿನ ದೇವಾಲಯಕ್ಕೆ ಭೇಟಿ ನೀಡಿದ ಉದಾಹರಣೆ ಕೂಡ ಇದೆ. ಈಗ ಅವರು ಸಂಬಂಧಿಯೊಬ್ಬರ ಮದುವೆಗಾಗಿ ಕುಟುಂಬ ಸಮೇತವಾಗಿ ಬೆಂಗಳೂರಿಗೆ ಬಂದಿದ್ದರು. ಪತಿ ಅಭಿಷೇಕ್​ ಬಚ್ಚನ್​ ಹಾಗೂ ಮಗಳು ಆರಾಧ್ಯ ಕೂಡ ಐಶ್ವರ್ಯಾಗೆ ಕಂಪನಿ ನೀಡಿದ್ದರು. ಈ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಐಶ್ವರ್ಯಾ ರೈ ತಾಯಿ ಕೂಡ ಈ ಮದುವೆಯಲ್ಲಿ ಪಾಲ್ಗೊಂಡಿದ್ದರು. ಇದು ತುಂಬಾನೇ ಖಾಸಗಿಯಾಗಿ ನಡೆದ ಕಾರ್ಯಕ್ರಮ ಆಗಿದ್ದರಿಂದ ಕೇವಲ ಆಪ್ತರು ಮಾತ್ರ ಭಾಗಿಯಾಗಿದ್ದರು. ಕೆಲವರು ಸೆಲ್ಫಿ ತೆಗೆದುಕೊಂಡು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇನ್ನು, ಐಶ್ವರ್ಯಾ ರೈ ಅಭಿಮಾನಿಗಳು ಈ ಫೋಟೋಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಸದ್ಯ, ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. ಇನ್ನು, ಐಶ್ವರ್ಯಾ ಹಾಗೂ ಅಭಿಷೇಕ್​ ಬಚ್ಚನ್​ ಹಿಂದಿ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ ಆರಾಧ್ಯ ಹುಟ್ಟಿದ ನಂತರ ಐಶ್ವರ್ಯಾ ಸಿನಿಮಾ ರಂಗದಿಂದ ದೂರವೇ ಉಳಿದಿದ್ದಾರೆ. ತಮಿಳಿನ ಪೊನ್ನಿಯಿನ್ ಸೆಲ್ವನ್ ಸಿನಿಮಾದಲ್ಲಿ ಐಶ್ವರ್ಯಾ ನಟಿಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಅಭಿಷೇಕ್ ಬಚ್ಚನ್ ಜತೆಗಿನ ‘ಗುರು’ ನೆನಪು ಹಂಚಿಕೊಂಡ ಐಶ್ವರ್ಯಾ ರೈ

Follow Us
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು