AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ಕೋಟಿ ಪಡೆಯುವ ಶಾರುಖ್​ ಖಾನ್​ರನ್ನೂ ಮೀರಿಸಿದ ಅಜಯ್​ ದೇವಗನ್​; ಹಾಗಾದ್ರೆ ಅವರ ಸಂಭಾವನೆ ಎಷ್ಟು?

ಶಾರುಖ್​ ಖಾನ್​ ಬಾಲಿವುಡ್​ನಲ್ಲಿ ಸತತ ಸೋಲು ಕಂಡಿದ್ದಾರೆ. ಆದಾಗ್ಯೂ, ಮುಂದಿನ ಚಿತ್ರಕ್ಕೆ ಅವರು 100 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿತ್ತು. ಇದು ಅನೇಕರಲ್ಲಿ ಅಚ್ಚರಿ ಮೂಡಿಸಿತ್ತು. ಈಗ ಈ ಸಂಭಾವನೆಯನ್ನೂ ಮೀರಿಸಿ ಅಜಯ್​ ದೇವಗನ್​ ಅಚ್ಚರಿ ಮೂಡಿಸಿದ್ದಾರೆ. ಇವರು ಒಟಿಟಿಗೆ ಕಾಲಿಡುತ್ತಿರುವುದಕ್ಕೆ ಬರೋಬ್ಬರಿ 125 ಕೋಟಿ ರೂ ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಹೌದು, ಅಜಯ್​ ದೇವಗನ್​ ‘ರುದ್ರ’ ಹೆಸರಿನ ವೆಬ್​ ಸೀರಿಸ್​ನಲ್ಲಿ ನಟಿಸುತ್ತಿದ್ದಾರೆ. ಇದು ಬ್ರಿಟಿಷ್ ವೆಬ್ ಸಿರೀಸ್ ‘ಲೂಥರ್​’ನ ಹಿಂದಿ ರಿಮೇಕ್ ಆಗಿರಲಿದೆ. ಇದರಲ್ಲಿ […]

100 ಕೋಟಿ ಪಡೆಯುವ ಶಾರುಖ್​ ಖಾನ್​ರನ್ನೂ ಮೀರಿಸಿದ ಅಜಯ್​ ದೇವಗನ್​; ಹಾಗಾದ್ರೆ ಅವರ ಸಂಭಾವನೆ ಎಷ್ಟು?
ರುದ್ರ ವೆಬ್​ ಸರಣಿಯಲ್ಲಿ ಅಜಯ್​ ದೇವಗನ್​
ರಾಜೇಶ್ ದುಗ್ಗುಮನೆ
|

Updated on: Jun 18, 2021 | 6:31 PM

Share

ಶಾರುಖ್​ ಖಾನ್​ ಬಾಲಿವುಡ್​ನಲ್ಲಿ ಸತತ ಸೋಲು ಕಂಡಿದ್ದಾರೆ. ಆದಾಗ್ಯೂ, ಮುಂದಿನ ಚಿತ್ರಕ್ಕೆ ಅವರು 100 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿತ್ತು. ಇದು ಅನೇಕರಲ್ಲಿ ಅಚ್ಚರಿ ಮೂಡಿಸಿತ್ತು. ಈಗ ಈ ಸಂಭಾವನೆಯನ್ನೂ ಮೀರಿಸಿ ಅಜಯ್​ ದೇವಗನ್​ ಅಚ್ಚರಿ ಮೂಡಿಸಿದ್ದಾರೆ. ಇವರು ಒಟಿಟಿಗೆ ಕಾಲಿಡುತ್ತಿರುವುದಕ್ಕೆ ಬರೋಬ್ಬರಿ 125 ಕೋಟಿ ರೂ ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಹೌದು, ಅಜಯ್​ ದೇವಗನ್​ ‘ರುದ್ರ’ ಹೆಸರಿನ ವೆಬ್​ ಸೀರಿಸ್​ನಲ್ಲಿ ನಟಿಸುತ್ತಿದ್ದಾರೆ. ಇದು ಬ್ರಿಟಿಷ್ ವೆಬ್ ಸಿರೀಸ್ ‘ಲೂಥರ್​’ನ ಹಿಂದಿ ರಿಮೇಕ್ ಆಗಿರಲಿದೆ. ಇದರಲ್ಲಿ ಅಜಯ್ ದೇವಗನ್ ಪೊಲೀಸ್ ಅಧಿಕಾರಿ ಪಾತ್ರ ಮಾಡಲಿದ್ದಾರೆ. ಈ ವೆಬ್​ ಸೀರಿಸ್​ ಶೂಟಿಂಗ್​ ಮುಂದಿನ ತಿಂಗಳಿಂದ ಆರಂಭಗೊಳ್ಳಲಿದೆ.

ಅಂದಹಾಗೆ, ಈ ವೆಬ್​ ಸೀರಿಸ್​ ಶೂಟಿಂಗ್​ ಸತತ ಎರಡು ತಿಂಗಳ ಕಾಲ ನಡೆಯಲಿದೆ. ಕೇವಲ 60 ದಿನಗಳಲ್ಲಿ ಇದರ ಶೂಟಿಂಗ್​ ಪೂರ್ಣಗೊಳಿಸಬೇಕು ಎಂಬುದು ಚಿತ್ರತಂಡದ ನಿರ್ಧಾರ. ಕೇವಲ ಎರಡು ತಿಂಗಳಿಗೆ ಅಜಯ್​ ಈ ಮಟ್ಟದ ಗಳಿಕೆ ಮಾಡಿಕೊಳ್ಳುತ್ತಿರುವುದು ಅಚ್ಚರಿ ಮೂಡಿಸಿದೆ.

ಅಜಯ್​ ದೇವಗನ್​ ‘ತಾನ್ಹಾಜಿ’ ಸಿನಿಮಾದ ಯಶಸ್ಸಿನಲ್ಲಿ ತೇಲುತ್ತಿದ್ದಾರೆ. ಅವರು ಪ್ರತಿ ಸಿನಿಮಾಗೂ ಕಥೆ ಭಿನ್ನವಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಈಗ ಒಟಿಟಿಗೆ ಕಾಲಿಡುತ್ತಿರುವ ಅವರು ಅತಿ ಹೆಚ್ಚು ಸಂಭಾವನೆ ಪಡೆಯುವ ನಟರ ಸಾಲಿನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇಷ್ಟು ದೊಡ್ಡ ಮೊತ್ತದ ಹಣ ಕೊಡ್ತಿರೋದು ಕೇವಲ ಶೂಟಿಂಗ್​ಗಾಗಿ ಮಾತ್ರವಲ್ಲ. ವೆಬ್​ ಸೀರಿಸ್​ ಪ್ರಚಾರಕ್ಕೆ, ಸೋಶಿಯಲ್​ ಮೀಡಿಯಾ ಪ್ರಮೋಷನ್​, ರಿಯಾಲಿಟಿ ಶೋಗಳಲ್ಲಿ ಪಾಲ್ಗೊಳ್ಳೋದು ಕೂಡ ಆಗಿದೆ ಎನ್ನಲಾಗಿದೆ.

ರಾಜೇಶ್​ ಮಪುಸ್ಕರ್​ ರುದ್ರ ವೆಬ್​ ಸೀರಿಸ್​ ನಿರ್ದೇಶನ ಮಾಡಲಿದ್ದಾರೆ. ಅಪ್ಲಾಸ್​ ಎಂಟರ್​ಟೇನ್​ಮೆಂಟ್​ ಮತ್ತು ಬಿಬಿಸಿ ಸ್ಟುಡಿಯೂ ಇಂಡಿಯಾ ಜೊತೆಯಾಗಿ ಇದನ್ನು ನಿರ್ಮಾಣ ಮಾಡಲಿವೆ. ‘ಬೇಗ ಶೂಟಿಂಗ್​ ಶುರುವಾಗಲಿ ಎಂದು ನಾನು ಕಾಯುತ್ತಿದ್ದೇನೆ. ಪೊಲೀಸ್​ ಪಾತ್ರ ಮಾಡುವುದು ನನಗೆ ಹೊಸದೇನೂ ಅಲ್ಲ. ಆದರೆ ಈ ಬಾರಿ ನಾನು ಮಾಡುತ್ತಿರುವ ಪಾತ್ರ ಹೆಚ್ಚು ತೀಕ್ಷ್ಣ, ಕಠಿಣ ಮತ್ತು ಗಾಢವಾಗಿದೆ’ ಎಂದು ತಮ್ಮ ಪಾತ್ರದ ಬಗ್ಗೆ ಅಜಯ್​ ದೇವಗನ್​ ಬರೆದುಕೊಂಡಿದ್ದರು.

ಇದನ್ನೂ ಓದಿ: ಬಾಲಿವುಡ್​ ಮಂದಿಗೆ ಬಂಗಲೆ ಖರೀದಿಸೋ ಕ್ರೇಜ್​; 60 ಕೋಟಿ ಕೊಟ್ಟು ಅಜಯ್​ ದೇವಗನ್​ ಮನೆ ಖರೀದಿ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್