AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲವ್​ ಯೂ ರಚ್ಚು’ ಸಿನಿಮಾ ಶೂಟಿಂಗ್​ ಸಕಲೇಶಪುರದಲ್ಲಿ ಪ್ರಾರಂಭ; ಫುಲ್​ ಹ್ಯಾಪಿ ಮೂಡ್​ನಲ್ಲಿದ್ದಾರೆ ಅಜಯ್​ ರಾವ್, ರಚಿತಾ ರಾಮ್​

ನಟ ಅಜಯ್​ ರಾವ್ (Ajay Rao) ​ ಮತ್ತು ರಚಿತಾ ರಾಮ್ (Rachita Ram)​ ತುಂಬ ಎಕ್ಸೈಟ್​ ಆಗಿದ್ದು love you racchu ಶೂಟಿಂಗ್ ನಡೆಯುತ್ತಿರುವ ಸಕಲೇಶಪುರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

‘ಲವ್​ ಯೂ ರಚ್ಚು’ ಸಿನಿಮಾ ಶೂಟಿಂಗ್​ ಸಕಲೇಶಪುರದಲ್ಲಿ ಪ್ರಾರಂಭ; ಫುಲ್​ ಹ್ಯಾಪಿ ಮೂಡ್​ನಲ್ಲಿದ್ದಾರೆ ಅಜಯ್​ ರಾವ್, ರಚಿತಾ ರಾಮ್​
ಲವ್​ ಯೂ ರಚ್ಚು ಸಿನಿಮಾದಲ್ಲಿ ನಟಿಸುತ್ತಿರುವ ರಚಿತಾ ರಾಮ್​, ಅಜಯ್​ ರಾವ್​
Lakshmi Hegde
| Edited By: |

Updated on: Feb 10, 2021 | 7:33 PM

Share

ಗುಳಿಕೆನ್ನೆ ಚೆಲುವೆ ರಚಿತಾ ರಾಮ್​, ನಟ ಅಜಯ್​ ರಾವ್​ ಜತೆ ಒಂದು ಸಿನಿಮಾ ಮಾಡುತ್ತಿದ್ದಾರೆ ಎಂಬ ವಿಷಯ ಹಿಂದೆಯೇ ಬಹಿರಂಗವಾಗಿದೆ. ಆ ಸಿನಿಮಾದ ಹೆಸರು ಲವ್​ ಯೂ ರಚ್ಚು (love you racchu) ಎಂಬುದು ವಿಶೇಷ. ಇದೊಂದು ರೊಮ್ಯಾಂಟಿಕ್​, ಥ್ರಿಲ್ಲರ್​ ಸಿನಿಮಾ ಎಂದು ಹೇಳಲಾಗಿದ್ದು, ಸದ್ಯ ಶೂಟಿಂಗ್​ ಕೂಡ ಶುರುವಾಗಿದೆ. ಇತ್ತೀಚೆಗಷ್ಟೇ ಪೂಜೆ ಮಾಡುವ ಮೂಲಕ ಸಿನಿಮಾ ಶೂಟಿಂಗ್​ಗೆ ಮುಹೂರ್ತ ಇಡಲಾಗಿತ್ತು.ಅದೂ ಆರ್ಟ್​ ಆಫ್​ ಲಿವಿಂಗ್​ನ ರವಿ ಶಂಕರ್​ ಗುರೂಜಿ ಸಿನಿಮಾಕ್ಕೆ ಚಾಲನೆ ನೀಡಿದ್ದರು. ಇದೀಗ ಸಕಲೇಶ​ಪುರದಲ್ಲಿ ಚಿತ್ರೀಕರಣ ಶುರುವಾಗಿದೆ. ಈ ಬಗ್ಗೆ ನಟ ಅಜಯ್​ ರಾವ್​ ಮತ್ತು ರಚಿತಾ ರಾಮ್​ ತುಂಬ ಎಕ್ಸೈಟ್​ ಆಗಿದ್ದು, ತಮ್ಮ ಅನಿಸಿಕೆಗಳನ್ನು ಮಾಧ್ಯಮಗಳ ಜತೆ ಹಂಚಿಕೊಂಡಿದ್ದಾರೆ.

ನಾನು ರಚಿತಾ ರಾಮ್​ ಜತೆ ಇದೇ ಮೊದಲ ಬಾರಿಗೆ ಸಿನಿಮಾ ಮಾಡುತ್ತಿದ್ದೇನೆ. ಸಿನಿಮಾದ ಮಹತ್ವದ ಭಾಗವನ್ನು ನಾವೀಗ ಸಕಲೇಶ​ಪುರದಲ್ಲಿ ಚಿತ್ರೀಕರಣ ಮಾಡುತ್ತಿದ್ದೇವೆ. ವೈಯಕ್ತಿಕವಾಗಿಯೂ ನನಗೆ ಸಕಲೇಶಪುರ ತುಂಬ ಇಷ್ಟ. ಅದರಲ್ಲೂ ಇಲ್ಲಿನ ಶಾಂತ ವಾತಾವರಣ ನನಗೆ ತುಂಬ ಇಷ್ಟವಾಗುತ್ತದೆ. ನನ್ನ ಹಲವು ಸಿನಿಮಾಗಳನ್ನು ಇಲ್ಲಿ ಚಿತ್ರೀಕರಣ ಮಾಡಲಾಗಿದೆ. ಹಾಗೇ, ನಮ್ಮ ನಿರ್ಮಾಣದ ಕೃಷ್ಣ ಲೀಲಾವನ್ನೂ ಕೂಡ ಇಲ್ಲಿ ಶೂಟಿಂಗ್ ಮಾಡಿದ್ದೇವೆ. ರೊಮ್ಯಾಂಟಿಕ್ ದೃಶ್ಯಗಳ ಚಿತ್ರೀಕರಣಕ್ಕೆ ಇದು ಹೇಳಿ ಮಾಡಿಸಿದ ಸ್ಥಳ ಎಂದು ಅಜಯ್ ರಾವ್ ತಿಳಿಸಿದ್ದಾರೆ.

ನಂತರ ಪ್ರತಿಕ್ರಿಯೆ ನೀಡಿದ ರಚಿತಾ ರಾಮ್​, ಸಕಲೇಶಪುರದಲ್ಲಿ ಇಂದಿನಿಂದ ಚಿತ್ರೀಕರಣ ಶುರು ಮಾಡಿದ್ದೇವೆ. ನಾನು ಸಿನಿಮಾ ಚಿತ್ರೀಕರಣಕ್ಕಾಗಿ ಸಕಲೇಶಪುರಕ್ಕೆ ಬರುತ್ತಿರುವುದು ಇದೇ ಮೊದಲು. ಕರ್ನಾಟಕದ ಅತ್ಯಂತ ಸುಂದರ ಸ್ಥಳಗಳಲ್ಲಿ ಇದೂ ಒಂದು. ಇಲ್ಲಿನ ಹಸಿರು ನನಗೆ ತುಂಬ ಇಷ್ಟವಾಯಿತು. ಸಂಜೆ ಹೊತ್ತಿಗೆ ಅದೆಷ್ಟು ಚಳಿ ಇರುತ್ತದೆ ಎಂದರೆ ನನಗಂತೂ ಸ್ವಿಜರ್​ಲ್ಯಾಂಡ್​ ನೆನಪಾಗುತ್ತದೆ. ನನಗೆ ಇಲ್ಲಿ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿರುವುದು ತುಂಬ ಸಂತೋಷವಾಗುತ್ತಿದೆ ಎಂದಿದ್ದಾರೆ.

ಲವ್​ ಯೂ ರಚ್ಚು ಸಿನಿಮಾವನ್ನು ಶಂಕರ್ ರಾಜ್​ ನಿರ್ದೇಶನ ಮಾಡಿದ್ದು, ಖ್ಯಾತ ನಿರ್ದೇಶಕ ಶಶಾಂಕ್​ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಮಣಿಕಾಂತ್​ ಕದ್ರಿ ಸಂಗೀತ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: ‘ರಾಬರ್ಟ್’ ಸಿನಿಮಾ ರಿಲೀಸ್​ಗೂ ಮುನ್ನ ತಿರುಮಲ ದೇಗುಲಕ್ಕೆ ನಟ ದರ್ಶನ್ ಭೇಟಿ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?