AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ಈಗಲಾದ್ರೂ ನಮ್ಮ ಪರ ನಿಲ್ಲಲಿ -ಅಖಂಡ ಶ್ರೀನಿವಾಸಮೂರ್ತಿ

ಬೆಂಗಳೂರು: ಬೆಂಕಿ ಹಚ್ಚಿಸಿ ತಲೆಮರೆಸಿಕೊಂಡಿದ್ದ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಕೊನೆಗೂ ಅರೆಸ್ಟ್ ಆಗಿದ್ದಾರೆ. ಈ ಸಂಬಂಧ ಮಾತನಾಡಿದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ತಪ್ಪಿತಸ್ಥರು ಯಾರೇ ಇದ್ದರೂ ಅವರಿಗೆ ಶಿಕ್ಷೆಯಾಗಬೇಕು ಎಂದಿದ್ದಾರೆ. ಮಾಧ್ಯಮಗಳು, ಪೊಲೀಸರು ನನಗೆ ನ್ಯಾಯ ಕೊಡಿಸಿದ್ದಾರೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ನನ್ನ ಬೆನ್ನಿಗೆ ನಿಂತಿದೆ. ನಮ್ಮ ಕೆಪಿಸಿಸಿ ಅಧ್ಯಕ್ಷರು ಈಗಲಾದ್ರೂ ನಮ್ಮ ಪರ ನಿಲ್ಲಲಿ. ನನ್ನ ಪರ ಯಾಕೆ ನಿಂತಿಲ್ಲವೆಂದು ಇಂದು ಡಿಕೆ ಶಿವಕುಮಾರ್​ ಅವರಿಗೆ ಕೇಳುತ್ತೇನೆ. ಸಂಪತ್ ರಾಜ್ ಆಸ್ಪತ್ರೆಯಿಂದ […]

ಡಿಕೆ ಶಿವಕುಮಾರ್ ಈಗಲಾದ್ರೂ ನಮ್ಮ ಪರ ನಿಲ್ಲಲಿ -ಅಖಂಡ ಶ್ರೀನಿವಾಸಮೂರ್ತಿ
ಆಯೇಷಾ ಬಾನು
|

Updated on:Nov 17, 2020 | 8:24 AM

Share

ಬೆಂಗಳೂರು: ಬೆಂಕಿ ಹಚ್ಚಿಸಿ ತಲೆಮರೆಸಿಕೊಂಡಿದ್ದ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಕೊನೆಗೂ ಅರೆಸ್ಟ್ ಆಗಿದ್ದಾರೆ. ಈ ಸಂಬಂಧ ಮಾತನಾಡಿದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ತಪ್ಪಿತಸ್ಥರು ಯಾರೇ ಇದ್ದರೂ ಅವರಿಗೆ ಶಿಕ್ಷೆಯಾಗಬೇಕು ಎಂದಿದ್ದಾರೆ.

ಮಾಧ್ಯಮಗಳು, ಪೊಲೀಸರು ನನಗೆ ನ್ಯಾಯ ಕೊಡಿಸಿದ್ದಾರೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ನನ್ನ ಬೆನ್ನಿಗೆ ನಿಂತಿದೆ. ನಮ್ಮ ಕೆಪಿಸಿಸಿ ಅಧ್ಯಕ್ಷರು ಈಗಲಾದ್ರೂ ನಮ್ಮ ಪರ ನಿಲ್ಲಲಿ. ನನ್ನ ಪರ ಯಾಕೆ ನಿಂತಿಲ್ಲವೆಂದು ಇಂದು ಡಿಕೆ ಶಿವಕುಮಾರ್​ ಅವರಿಗೆ ಕೇಳುತ್ತೇನೆ. ಸಂಪತ್ ರಾಜ್ ಆಸ್ಪತ್ರೆಯಿಂದ ಏಕೆ ಓಡಿ ಹೋಗಬೇಕಿತ್ತು.. ಅವರು ತಪ್ಪು ಮಾಡಿದ್ದರಿಂದ ಓಡಿ ಹೋಗಿದ್ದಾರೆ. ನಾನು ಯಾವುದೇ ದ್ವೇಷದ ರಾಜಕಾರಣವನ್ನು ಮಾಡಿಲ್ಲ. ಈ ಹಿಂದೆಯೂ ಮಾಡಿಲ್ಲ, ಇನ್ನುಮುಂದೆಯೂ ಮಾಡಲ್ಲ. ಸಂಪತ್ ರಾಜ್ ನನ್ನ ಜತೆ ಚೆನ್ನಾಗಿಯೇ ಇದ್ದರು. ನನ್ನ ಜತೆಗಿದ್ದು ಇಂತಹ ಕೆಲಸ ಮಾಡುತ್ತಾರೆಂದು ಗೊತ್ತಿರಲಿಲ್ಲ. ಘಟನೆಯ ಬಳಿಕ ಸಂಪತ್ ರಾಜ್‌ರನ್ನ ಭೇಟಿಯಾಗಿಲ್ಲ. ಕಾಂಗ್ರೆಸ್ ಕೂಡ ನಮ್ಮನ್ನು ಕರೆಸಿ ಮಾತನಾಡಿಲ್ಲ ಎಂದು ಹೇಳಿದ್ರು.

ಇನ್ನು ನನಗೆ ನ್ಯಾಯ ಕೊಡಿಸುವುದಾಗಿ ಮಾತ್ರ ಡಿಕೆಶಿ ಹೇಳಿದ್ದಾರೆ. ನನಗೆ ಕಾಂಗ್ರೆಸ್ ಪಕ್ಷ ರಕ್ಷಣೆಗೆ ನಿಂತಿದೆ. ಘಟನೆಯ ಬಗ್ಗೆ ಹೈಕಮಾಂಡ್ ಗಮನಕ್ಕೂ ತರುತ್ತೇನೆ. ಮನೆಗೆ ಬೆಂಕಿ ಹಚ್ಚಿದ್ದರಿಂದ ಎಲ್ಲೋ ಹೊರಗಿರುವಂತಾಗಿದೆ. ರಾಜ್ಯದಲ್ಲಿ ಇಂತಹ ಘಟನೆ ಮರುಕಳಿಸಬಾರದು. ಕಾನೂನು ಪ್ರಕಾರ ಎಲ್ಲಾ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ನನಗೆ ಸಿದ್ದರಾಮಯ್ಯ, ಜಮೀರ್ ಧೈರ್ಯ ತುಂಬುತ್ತಿದ್ದಾರೆ ಎಂದು ಟಿವಿ9ಗೆ ‘ಕೈ’ ಶಾಸಕ ಅಖಂಡ ಶ್ರೀನಿವಾಸಮೂರ್ತಿ ತಮ್ಮ ನೋವನ್ನು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ತಲೆಮರೆಸಿಕೊಂಡು ಓಡಾಡ್ತಿದ್ದ ಸಂಪತ್​ ರಾಜ್ ಕೊನೆಗೂ ಬಂಧನ..

Published On - 8:23 am, Tue, 17 November 20

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು