AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ-ಕಮಲದ ರಾಜಕೀಯ ‘ಗಲಭೆ’ ಮಧ್ಯೆ ಸಿಕ್ಕಿಹಾಕಿಕೊಂಡ್ರಾ ಶಾಸಕ ಅಖಂಡ?

ಬೆಂಗಳೂರು: ಕಾವಲ್​ ಭೈರಸಂದ್ರದ ಗಲಭೆ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ತಿಕ್ಕಾಟ ಆರಂಭವಾಗಿದೆ. ಯಾವುದೇ ಸಂದರ್ಭವನ್ನ ತನ್ನ ರಾಜಕೀಯ ಲಾಭಕ್ಕಾಗಿ ಬಳಸಲು ಹವಣಿಸುವ ಎರಡೂ ಪಕ್ಷಗಳ ರಾಜಕೀಯ ‘ಗಲಭೆ’ಯ ಅಡಕತ್ತರಿಯಲ್ಲಿ ಇದೀಗ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸಿಕ್ಕಾಕಿಕೊಂಡಿರುವಂತೆ ಭಾಸವಾಗುತ್ತಿದೆ. ಎಂಥಾ ಪ್ರಭಾವಿಗಳಿದ್ದರೂ ಅವರಿಗೆ ಶಿಕ್ಷೆ ಆಗಲೇ ಬೇಕೆಂದು ಶಾಸಕ ಶ್ರೀನಿವಾಸಮೂರ್ತಿ ಪಟ್ಟು ಹಿಡಿದಿದ್ದಾರೆ. ಆದರೆ, ತಮ್ಮ ಸ್ವಪಕ್ಷ ಕಾಂಗ್ರೆಸ್​ಪ್ರಭಾವಿಗಳನ್ನ ರಕ್ಷಿಸಲು ಪರೋಕ್ಷ ಪ್ರಯತ್ನ ನಡೆಸುತ್ತಿದೆ ಎಂಬ ಮಾತು ಕೇಳಿಬಂದಿದೆ. ಕಾಂಗ್ರೆಸ್​ ಸತ್ಯ ಶೋಧನಾ ಸಮಿತಿ […]

ಕೈ-ಕಮಲದ ರಾಜಕೀಯ ‘ಗಲಭೆ’ ಮಧ್ಯೆ ಸಿಕ್ಕಿಹಾಕಿಕೊಂಡ್ರಾ ಶಾಸಕ ಅಖಂಡ?
KUSHAL V
| Edited By: |

Updated on: Aug 17, 2020 | 1:45 PM

Share

ಬೆಂಗಳೂರು: ಕಾವಲ್​ ಭೈರಸಂದ್ರದ ಗಲಭೆ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ತಿಕ್ಕಾಟ ಆರಂಭವಾಗಿದೆ. ಯಾವುದೇ ಸಂದರ್ಭವನ್ನ ತನ್ನ ರಾಜಕೀಯ ಲಾಭಕ್ಕಾಗಿ ಬಳಸಲು ಹವಣಿಸುವ ಎರಡೂ ಪಕ್ಷಗಳ ರಾಜಕೀಯ ‘ಗಲಭೆ’ಯ ಅಡಕತ್ತರಿಯಲ್ಲಿ ಇದೀಗ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸಿಕ್ಕಾಕಿಕೊಂಡಿರುವಂತೆ ಭಾಸವಾಗುತ್ತಿದೆ.

ಎಂಥಾ ಪ್ರಭಾವಿಗಳಿದ್ದರೂ ಅವರಿಗೆ ಶಿಕ್ಷೆ ಆಗಲೇ ಬೇಕೆಂದು ಶಾಸಕ ಶ್ರೀನಿವಾಸಮೂರ್ತಿ ಪಟ್ಟು ಹಿಡಿದಿದ್ದಾರೆ. ಆದರೆ, ತಮ್ಮ ಸ್ವಪಕ್ಷ ಕಾಂಗ್ರೆಸ್​ಪ್ರಭಾವಿಗಳನ್ನ ರಕ್ಷಿಸಲು ಪರೋಕ್ಷ ಪ್ರಯತ್ನ ನಡೆಸುತ್ತಿದೆ ಎಂಬ ಮಾತು ಕೇಳಿಬಂದಿದೆ.

ಕಾಂಗ್ರೆಸ್​ ಸತ್ಯ ಶೋಧನಾ ಸಮಿತಿ ವರದಿಯನ್ನ ಆಧರಿಸಿಯೇ ಹೇಳಿಕೆ ಕೊಡಿ ಎಂಬ ಒತ್ತಡವನ್ನ ಶಾಸಕರ ಮೇಲೆ ಹೇರಲಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿದೆ. ಪಕ್ಷದ ನಿಲುವು, ನಿಮ್ಮ ನಿಲುವು ಬೇರೆ ಬೇರೆ ಬೇಡ. ಪಕ್ಷದ ನಿಲುವಿನ ಬಗ್ಗೆ ಸತ್ಯಶೋಧನಾ ಸಮಿತಿ ನಿರ್ಧರಿಸಲಿದೆ. ಆ ಬಳಿಕವೇ ಮುಂದಿನ ರಾಜಕೀಯ ನಿರ್ಧಾರ ತೆಗೆದುಕೊಳ್ಳಿ ಎಂದು ಅಖಂಡ ಶ್ರೀನಿವಾಸ ಮೂರ್ತಿಗೆ ಕಾಂಗ್ರೆಸ್​ ನಾಯಕರ ಒತ್ತಡ ಹೇರುತ್ತಿದ್ದಾರಂತೆ.

ಕಾಂಗ್ರೆಸ್​ ನಾಯಕರ ಪ್ರಕಾರ ಕಾರ್ಪೊರೇಟರ್​ಗಳ ಪಾತ್ರವಿಲ್ಲವಂತೆ. ಆದರೆ, ಶಾಸಕರ ಆಪ್ತರ ಪ್ರಕಾರ ಗಲಭೆಯಲ್ಲಿ ‘ಕೈ’ ಕಾರ್ಪೊರೇಟರ್​ಗಳ ಕೈವಾಡವಿದೆಯಂತೆ. ಹಾಗಾಗಿ, ಈ ಪ್ರಭಾವಿಗಳ ವಿರುದ್ಧ ಶಿಕ್ಷೆ ಕೈಗೊಳ್ಳಲು ಶಾಸಕ ಅಖಂಡ ಶ್ರೀನಿವಾಸ್ ಪಟ್ಟು ಹಿಡಿದಿದ್ದಾರಂತೆ.

ಬಿಜೆಪಿಯದ್ದು ಬೇರೆಯೇ ದೃಷ್ಟಿಕೋನ.. ಆದರೆ, ಬಿಜೆಪಿ ಇಡೀ ಘಟನೆಯನ್ನು ಸಂಪೂರ್ಣವಾಗಿ ಬೇರೆಯದ್ದೇ ಕೋನದಿಂದ ಅವಲೋಕಿಸುತ್ತಿದೆ. ಶಾಸಕನ ಮೇಲೆ ಪ್ರಭಾವ ಬೀರುತ್ತಿರುವ ಬಿಜೆಪಿ ನಾಯಕರು ಸಿಬಿಐ ತನಿಖೆಗೆ ಆಗ್ರಹಿಸಲು ಅಖಂಡ ಶ್ರೀನಿವಾಸ ಮೂರ್ತಿಗೆ ಒತ್ತಡ ಹೇರುತ್ತಿದ್ದಾರಂತೆ.

ಇದಕ್ಕೆ ಒಪ್ಪಿದ ಶಾಸಕ ಬೇಕಿದ್ದರೆ ಡಿಕೆ ಶಿವಕುಮಾರ್​ ಬಳಿಯೂ ಮಾತನಾಡೋದಕ್ಕೆ ಸಿದ್ಧ ಎಂದಿದ್ದಾರಂತೆ. ಆದರೆ, ಸಿಬಿಐ ತನಿಖೆ ಬಗ್ಗೆ ಡಿಕೆಶಿ ಒಲವು ತೋರುತ್ತಿಲ್ಲವಂತೆ. ಹೀಗಾಗಿ, ಕೈ ಕಮಲದ ರಾಜಕೀಯ ಗಲಭೆಯ ಅಡ್ಡಕತ್ತರಿಯಲ್ಲಿ ಶಾಸಕ ಸಿಕ್ಕಾಕೊಂಡು ಪೀಕಲಾಟ ಅನುಭವಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್