AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ-ಕಮಲದ ರಾಜಕೀಯ ‘ಗಲಭೆ’ ಮಧ್ಯೆ ಸಿಕ್ಕಿಹಾಕಿಕೊಂಡ್ರಾ ಶಾಸಕ ಅಖಂಡ?

ಬೆಂಗಳೂರು: ಕಾವಲ್​ ಭೈರಸಂದ್ರದ ಗಲಭೆ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ತಿಕ್ಕಾಟ ಆರಂಭವಾಗಿದೆ. ಯಾವುದೇ ಸಂದರ್ಭವನ್ನ ತನ್ನ ರಾಜಕೀಯ ಲಾಭಕ್ಕಾಗಿ ಬಳಸಲು ಹವಣಿಸುವ ಎರಡೂ ಪಕ್ಷಗಳ ರಾಜಕೀಯ ‘ಗಲಭೆ’ಯ ಅಡಕತ್ತರಿಯಲ್ಲಿ ಇದೀಗ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸಿಕ್ಕಾಕಿಕೊಂಡಿರುವಂತೆ ಭಾಸವಾಗುತ್ತಿದೆ. ಎಂಥಾ ಪ್ರಭಾವಿಗಳಿದ್ದರೂ ಅವರಿಗೆ ಶಿಕ್ಷೆ ಆಗಲೇ ಬೇಕೆಂದು ಶಾಸಕ ಶ್ರೀನಿವಾಸಮೂರ್ತಿ ಪಟ್ಟು ಹಿಡಿದಿದ್ದಾರೆ. ಆದರೆ, ತಮ್ಮ ಸ್ವಪಕ್ಷ ಕಾಂಗ್ರೆಸ್​ಪ್ರಭಾವಿಗಳನ್ನ ರಕ್ಷಿಸಲು ಪರೋಕ್ಷ ಪ್ರಯತ್ನ ನಡೆಸುತ್ತಿದೆ ಎಂಬ ಮಾತು ಕೇಳಿಬಂದಿದೆ. ಕಾಂಗ್ರೆಸ್​ ಸತ್ಯ ಶೋಧನಾ ಸಮಿತಿ […]

ಕೈ-ಕಮಲದ ರಾಜಕೀಯ ‘ಗಲಭೆ’ ಮಧ್ಯೆ ಸಿಕ್ಕಿಹಾಕಿಕೊಂಡ್ರಾ ಶಾಸಕ ಅಖಂಡ?
KUSHAL V
| Edited By: |

Updated on: Aug 17, 2020 | 1:45 PM

Share

ಬೆಂಗಳೂರು: ಕಾವಲ್​ ಭೈರಸಂದ್ರದ ಗಲಭೆ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ತಿಕ್ಕಾಟ ಆರಂಭವಾಗಿದೆ. ಯಾವುದೇ ಸಂದರ್ಭವನ್ನ ತನ್ನ ರಾಜಕೀಯ ಲಾಭಕ್ಕಾಗಿ ಬಳಸಲು ಹವಣಿಸುವ ಎರಡೂ ಪಕ್ಷಗಳ ರಾಜಕೀಯ ‘ಗಲಭೆ’ಯ ಅಡಕತ್ತರಿಯಲ್ಲಿ ಇದೀಗ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸಿಕ್ಕಾಕಿಕೊಂಡಿರುವಂತೆ ಭಾಸವಾಗುತ್ತಿದೆ.

ಎಂಥಾ ಪ್ರಭಾವಿಗಳಿದ್ದರೂ ಅವರಿಗೆ ಶಿಕ್ಷೆ ಆಗಲೇ ಬೇಕೆಂದು ಶಾಸಕ ಶ್ರೀನಿವಾಸಮೂರ್ತಿ ಪಟ್ಟು ಹಿಡಿದಿದ್ದಾರೆ. ಆದರೆ, ತಮ್ಮ ಸ್ವಪಕ್ಷ ಕಾಂಗ್ರೆಸ್​ಪ್ರಭಾವಿಗಳನ್ನ ರಕ್ಷಿಸಲು ಪರೋಕ್ಷ ಪ್ರಯತ್ನ ನಡೆಸುತ್ತಿದೆ ಎಂಬ ಮಾತು ಕೇಳಿಬಂದಿದೆ.

ಕಾಂಗ್ರೆಸ್​ ಸತ್ಯ ಶೋಧನಾ ಸಮಿತಿ ವರದಿಯನ್ನ ಆಧರಿಸಿಯೇ ಹೇಳಿಕೆ ಕೊಡಿ ಎಂಬ ಒತ್ತಡವನ್ನ ಶಾಸಕರ ಮೇಲೆ ಹೇರಲಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿದೆ. ಪಕ್ಷದ ನಿಲುವು, ನಿಮ್ಮ ನಿಲುವು ಬೇರೆ ಬೇರೆ ಬೇಡ. ಪಕ್ಷದ ನಿಲುವಿನ ಬಗ್ಗೆ ಸತ್ಯಶೋಧನಾ ಸಮಿತಿ ನಿರ್ಧರಿಸಲಿದೆ. ಆ ಬಳಿಕವೇ ಮುಂದಿನ ರಾಜಕೀಯ ನಿರ್ಧಾರ ತೆಗೆದುಕೊಳ್ಳಿ ಎಂದು ಅಖಂಡ ಶ್ರೀನಿವಾಸ ಮೂರ್ತಿಗೆ ಕಾಂಗ್ರೆಸ್​ ನಾಯಕರ ಒತ್ತಡ ಹೇರುತ್ತಿದ್ದಾರಂತೆ.

ಕಾಂಗ್ರೆಸ್​ ನಾಯಕರ ಪ್ರಕಾರ ಕಾರ್ಪೊರೇಟರ್​ಗಳ ಪಾತ್ರವಿಲ್ಲವಂತೆ. ಆದರೆ, ಶಾಸಕರ ಆಪ್ತರ ಪ್ರಕಾರ ಗಲಭೆಯಲ್ಲಿ ‘ಕೈ’ ಕಾರ್ಪೊರೇಟರ್​ಗಳ ಕೈವಾಡವಿದೆಯಂತೆ. ಹಾಗಾಗಿ, ಈ ಪ್ರಭಾವಿಗಳ ವಿರುದ್ಧ ಶಿಕ್ಷೆ ಕೈಗೊಳ್ಳಲು ಶಾಸಕ ಅಖಂಡ ಶ್ರೀನಿವಾಸ್ ಪಟ್ಟು ಹಿಡಿದಿದ್ದಾರಂತೆ.

ಬಿಜೆಪಿಯದ್ದು ಬೇರೆಯೇ ದೃಷ್ಟಿಕೋನ.. ಆದರೆ, ಬಿಜೆಪಿ ಇಡೀ ಘಟನೆಯನ್ನು ಸಂಪೂರ್ಣವಾಗಿ ಬೇರೆಯದ್ದೇ ಕೋನದಿಂದ ಅವಲೋಕಿಸುತ್ತಿದೆ. ಶಾಸಕನ ಮೇಲೆ ಪ್ರಭಾವ ಬೀರುತ್ತಿರುವ ಬಿಜೆಪಿ ನಾಯಕರು ಸಿಬಿಐ ತನಿಖೆಗೆ ಆಗ್ರಹಿಸಲು ಅಖಂಡ ಶ್ರೀನಿವಾಸ ಮೂರ್ತಿಗೆ ಒತ್ತಡ ಹೇರುತ್ತಿದ್ದಾರಂತೆ.

ಇದಕ್ಕೆ ಒಪ್ಪಿದ ಶಾಸಕ ಬೇಕಿದ್ದರೆ ಡಿಕೆ ಶಿವಕುಮಾರ್​ ಬಳಿಯೂ ಮಾತನಾಡೋದಕ್ಕೆ ಸಿದ್ಧ ಎಂದಿದ್ದಾರಂತೆ. ಆದರೆ, ಸಿಬಿಐ ತನಿಖೆ ಬಗ್ಗೆ ಡಿಕೆಶಿ ಒಲವು ತೋರುತ್ತಿಲ್ಲವಂತೆ. ಹೀಗಾಗಿ, ಕೈ ಕಮಲದ ರಾಜಕೀಯ ಗಲಭೆಯ ಅಡ್ಡಕತ್ತರಿಯಲ್ಲಿ ಶಾಸಕ ಸಿಕ್ಕಾಕೊಂಡು ಪೀಕಲಾಟ ಅನುಭವಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್