AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಂಗಳು ಹಿಂದೆಯೇ ಅಲ್-ಖೈದಾ ಮುಖ್ಯಸ್ಥ ಅಲ್-ಜವಾಹಿರಿ ನಿಧನ ಹೊಂದಿರುವನೆ? | Al-Qaeda chief Al-Jawahiri is dead: Report

ಅತ್ಯಂತ ಕ್ರೂರ ಉಗ್ರ ಸಂಘಟನೆ ಅಲ್-ಖೈದಾದ ಮುಖ್ಯಸ್ಥ ಅಯ್ಮಾನ್ ಅಲ್-ಜವಾಹಿರಿ (69) ಅಫ್ಘಾನಿಸ್ತಾನದಲ್ಲಿ ತಿಂಗಳ ಹಿಂದೆಯೇ ಮೃತಪಟ್ಟಿದ್ದಾನೆ ಎಂದು ನಂಬಲರ್ಹ ಮೂಲಗಳಿಂದ ಮಾಹಿತಿ ದೊರೆತಿದೆ. ಆದರೆ, ಅಲ್-ಖೈದಾ ಸಂಘಟನೆ ಆತನ ಸಾವನ್ನು ಇನ್ನೂ ದೃಢಪಡಿಸಿಲ್ಲ. ಅಸ್ತಮಾ ಮತ್ತಿತರ ಕಾಯಿಲೆಗಳಿಂದ ಬಳಲುತ್ತಿದ್ದ ಅಲ್–ಜವಾಹಿರಿ ಅಫ್ಘಾನಿಸ್ತಾನದ ಘಜನಿಯಲ್ಲಿ ಮೃತಪಟ್ಟಿದ್ದಾನೆ ಎಂದು ಅರಬ್ ನ್ಯೂಸ್ ಕೂಡ ವರದಿ ಮಾಡಿದೆ. ಅಲ್-ಜವಾಹಿರಿ ಕೊನೆಯಬಾರಿಗೆ ಕಾಣಿಸಿಕೊಂಡಿದ್ದು ಎರಡು ತಿಂಗಳ ಹಿಂದೆ. ಸೆಪ್ಟೆಂಬರ 11ರಂದು ಬಿಡುಗಡೆಯಾಗಿದ್ದ ವಿಡಿಯೊನಲ್ಲಿ ಅವನು ಕಾಣಿಸಿಕೊಂಡಿದ್ದ. ಆ ವಿಡಿಯೊನಲ್ಲಿ ಅಲ್-ಜವಾಹಿರಿ, ಸೆಪ್ಟೆಂಬರ್11, […]

ತಿಂಗಳು ಹಿಂದೆಯೇ ಅಲ್-ಖೈದಾ ಮುಖ್ಯಸ್ಥ ಅಲ್-ಜವಾಹಿರಿ ನಿಧನ ಹೊಂದಿರುವನೆ? | Al-Qaeda chief Al-Jawahiri is dead: Report
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Nov 20, 2020 | 9:04 PM

Share

ಅತ್ಯಂತ ಕ್ರೂರ ಉಗ್ರ ಸಂಘಟನೆ ಅಲ್-ಖೈದಾದ ಮುಖ್ಯಸ್ಥ ಅಯ್ಮಾನ್ ಅಲ್-ಜವಾಹಿರಿ (69) ಅಫ್ಘಾನಿಸ್ತಾನದಲ್ಲಿ ತಿಂಗಳ ಹಿಂದೆಯೇ ಮೃತಪಟ್ಟಿದ್ದಾನೆ ಎಂದು ನಂಬಲರ್ಹ ಮೂಲಗಳಿಂದ ಮಾಹಿತಿ ದೊರೆತಿದೆ. ಆದರೆ, ಅಲ್-ಖೈದಾ ಸಂಘಟನೆ ಆತನ ಸಾವನ್ನು ಇನ್ನೂ ದೃಢಪಡಿಸಿಲ್ಲ.

ಅಸ್ತಮಾ ಮತ್ತಿತರ ಕಾಯಿಲೆಗಳಿಂದ ಬಳಲುತ್ತಿದ್ದ ಅಲ್ಜವಾಹಿರಿ ಅಫ್ಘಾನಿಸ್ತಾನದ ಘಜನಿಯಲ್ಲಿ ಮೃತಪಟ್ಟಿದ್ದಾನೆ ಎಂದು ಅರಬ್ ನ್ಯೂಸ್ ಕೂಡ ವರದಿ ಮಾಡಿದೆ.

ಅಲ್-ಜವಾಹಿರಿ ಕೊನೆಯಬಾರಿಗೆ ಕಾಣಿಸಿಕೊಂಡಿದ್ದು ಎರಡು ತಿಂಗಳ ಹಿಂದೆ. ಸೆಪ್ಟೆಂಬರ 11ರಂದು ಬಿಡುಗಡೆಯಾಗಿದ್ದ ವಿಡಿಯೊನಲ್ಲಿ ಅವನು ಕಾಣಿಸಿಕೊಂಡಿದ್ದ. ಆ ವಿಡಿಯೊನಲ್ಲಿ ಅಲ್-ಜವಾಹಿರಿ, ಸೆಪ್ಟೆಂಬರ್11, 2001 ರಂದು ಅಮೆರಿಕದ ಮೇಲೆ ಅಲ್-ಖೈದಾ ನಡೆಸಿದ ಭೀಕರ ದಾಳಿ ಬಗ್ಗೆ ಮಾತನಾಡಿದ್ದ. ಅದಾದ ನಂತರ ಮತ್ತೆಲ್ಲೂ ಅವನು ಕಾಣಿಸಿಕೊಂಡಿರಲಿಲ್ಲ.

ಅಲ್ ಖೈದಾ ಮುಖ್ಯಸ್ಥ ಒಸಮಾ ಬಿನ್ ಲಾಡೆನ್​ನನ್ನು 2011ರ ಮೇ ತಿಂಗಳಲ್ಲಿ ಅಮೆರಿಕ ಹತ್ಯೆ ಮಾಡಿದ ನಂತರ ಅಲ್-ಜವಾಹಿರಿ ಸಂಘಟನೆಯ ನೇತೃತ್ವವಹಿಸಿಕೊಂಡಿದ್ದ. ಮೂಲಗಳ ಪ್ರಕಾರ ಅವನು ವೈದ್ಯನೂ ಆಗಿದ್ದ.

ಈಜಿಪ್ಟ್ ಮೂಲದವನಾಗಿದ್ದ ಅಲ್-ಜವಾಹಿರಿ, ಈಜಿಪ್ಷಿಯನ್ ಇಸ್ಲಾಮಿಕ್ ಜಿಹಾದ್ (ಇಐಜೆ) ಎಂಬ ಸಂಘಟನೆಯನ್ನೂ ಹುಟ್ಟುಹಾಕಿದ್ದ.

Published On - 8:55 pm, Fri, 20 November 20

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ