AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಂಗಳು ಹಿಂದೆಯೇ ಅಲ್-ಖೈದಾ ಮುಖ್ಯಸ್ಥ ಅಲ್-ಜವಾಹಿರಿ ನಿಧನ ಹೊಂದಿರುವನೆ? | Al-Qaeda chief Al-Jawahiri is dead: Report

ಅತ್ಯಂತ ಕ್ರೂರ ಉಗ್ರ ಸಂಘಟನೆ ಅಲ್-ಖೈದಾದ ಮುಖ್ಯಸ್ಥ ಅಯ್ಮಾನ್ ಅಲ್-ಜವಾಹಿರಿ (69) ಅಫ್ಘಾನಿಸ್ತಾನದಲ್ಲಿ ತಿಂಗಳ ಹಿಂದೆಯೇ ಮೃತಪಟ್ಟಿದ್ದಾನೆ ಎಂದು ನಂಬಲರ್ಹ ಮೂಲಗಳಿಂದ ಮಾಹಿತಿ ದೊರೆತಿದೆ. ಆದರೆ, ಅಲ್-ಖೈದಾ ಸಂಘಟನೆ ಆತನ ಸಾವನ್ನು ಇನ್ನೂ ದೃಢಪಡಿಸಿಲ್ಲ. ಅಸ್ತಮಾ ಮತ್ತಿತರ ಕಾಯಿಲೆಗಳಿಂದ ಬಳಲುತ್ತಿದ್ದ ಅಲ್–ಜವಾಹಿರಿ ಅಫ್ಘಾನಿಸ್ತಾನದ ಘಜನಿಯಲ್ಲಿ ಮೃತಪಟ್ಟಿದ್ದಾನೆ ಎಂದು ಅರಬ್ ನ್ಯೂಸ್ ಕೂಡ ವರದಿ ಮಾಡಿದೆ. ಅಲ್-ಜವಾಹಿರಿ ಕೊನೆಯಬಾರಿಗೆ ಕಾಣಿಸಿಕೊಂಡಿದ್ದು ಎರಡು ತಿಂಗಳ ಹಿಂದೆ. ಸೆಪ್ಟೆಂಬರ 11ರಂದು ಬಿಡುಗಡೆಯಾಗಿದ್ದ ವಿಡಿಯೊನಲ್ಲಿ ಅವನು ಕಾಣಿಸಿಕೊಂಡಿದ್ದ. ಆ ವಿಡಿಯೊನಲ್ಲಿ ಅಲ್-ಜವಾಹಿರಿ, ಸೆಪ್ಟೆಂಬರ್11, […]

ತಿಂಗಳು ಹಿಂದೆಯೇ ಅಲ್-ಖೈದಾ ಮುಖ್ಯಸ್ಥ ಅಲ್-ಜವಾಹಿರಿ ನಿಧನ ಹೊಂದಿರುವನೆ? | Al-Qaeda chief Al-Jawahiri is dead: Report
ಅರುಣ್​ ಕುಮಾರ್​ ಬೆಳ್ಳಿ
|

Updated on:Nov 20, 2020 | 9:04 PM

Share

ಅತ್ಯಂತ ಕ್ರೂರ ಉಗ್ರ ಸಂಘಟನೆ ಅಲ್-ಖೈದಾದ ಮುಖ್ಯಸ್ಥ ಅಯ್ಮಾನ್ ಅಲ್-ಜವಾಹಿರಿ (69) ಅಫ್ಘಾನಿಸ್ತಾನದಲ್ಲಿ ತಿಂಗಳ ಹಿಂದೆಯೇ ಮೃತಪಟ್ಟಿದ್ದಾನೆ ಎಂದು ನಂಬಲರ್ಹ ಮೂಲಗಳಿಂದ ಮಾಹಿತಿ ದೊರೆತಿದೆ. ಆದರೆ, ಅಲ್-ಖೈದಾ ಸಂಘಟನೆ ಆತನ ಸಾವನ್ನು ಇನ್ನೂ ದೃಢಪಡಿಸಿಲ್ಲ.

ಅಸ್ತಮಾ ಮತ್ತಿತರ ಕಾಯಿಲೆಗಳಿಂದ ಬಳಲುತ್ತಿದ್ದ ಅಲ್ಜವಾಹಿರಿ ಅಫ್ಘಾನಿಸ್ತಾನದ ಘಜನಿಯಲ್ಲಿ ಮೃತಪಟ್ಟಿದ್ದಾನೆ ಎಂದು ಅರಬ್ ನ್ಯೂಸ್ ಕೂಡ ವರದಿ ಮಾಡಿದೆ.

ಅಲ್-ಜವಾಹಿರಿ ಕೊನೆಯಬಾರಿಗೆ ಕಾಣಿಸಿಕೊಂಡಿದ್ದು ಎರಡು ತಿಂಗಳ ಹಿಂದೆ. ಸೆಪ್ಟೆಂಬರ 11ರಂದು ಬಿಡುಗಡೆಯಾಗಿದ್ದ ವಿಡಿಯೊನಲ್ಲಿ ಅವನು ಕಾಣಿಸಿಕೊಂಡಿದ್ದ. ಆ ವಿಡಿಯೊನಲ್ಲಿ ಅಲ್-ಜವಾಹಿರಿ, ಸೆಪ್ಟೆಂಬರ್11, 2001 ರಂದು ಅಮೆರಿಕದ ಮೇಲೆ ಅಲ್-ಖೈದಾ ನಡೆಸಿದ ಭೀಕರ ದಾಳಿ ಬಗ್ಗೆ ಮಾತನಾಡಿದ್ದ. ಅದಾದ ನಂತರ ಮತ್ತೆಲ್ಲೂ ಅವನು ಕಾಣಿಸಿಕೊಂಡಿರಲಿಲ್ಲ.

ಅಲ್ ಖೈದಾ ಮುಖ್ಯಸ್ಥ ಒಸಮಾ ಬಿನ್ ಲಾಡೆನ್​ನನ್ನು 2011ರ ಮೇ ತಿಂಗಳಲ್ಲಿ ಅಮೆರಿಕ ಹತ್ಯೆ ಮಾಡಿದ ನಂತರ ಅಲ್-ಜವಾಹಿರಿ ಸಂಘಟನೆಯ ನೇತೃತ್ವವಹಿಸಿಕೊಂಡಿದ್ದ. ಮೂಲಗಳ ಪ್ರಕಾರ ಅವನು ವೈದ್ಯನೂ ಆಗಿದ್ದ.

ಈಜಿಪ್ಟ್ ಮೂಲದವನಾಗಿದ್ದ ಅಲ್-ಜವಾಹಿರಿ, ಈಜಿಪ್ಷಿಯನ್ ಇಸ್ಲಾಮಿಕ್ ಜಿಹಾದ್ (ಇಐಜೆ) ಎಂಬ ಸಂಘಟನೆಯನ್ನೂ ಹುಟ್ಟುಹಾಕಿದ್ದ.

Published On - 8:55 pm, Fri, 20 November 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್