AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಂಗಳು ಹಿಂದೆಯೇ ಅಲ್-ಖೈದಾ ಮುಖ್ಯಸ್ಥ ಅಲ್-ಜವಾಹಿರಿ ನಿಧನ ಹೊಂದಿರುವನೆ? | Al-Qaeda chief Al-Jawahiri is dead: Report

ಅತ್ಯಂತ ಕ್ರೂರ ಉಗ್ರ ಸಂಘಟನೆ ಅಲ್-ಖೈದಾದ ಮುಖ್ಯಸ್ಥ ಅಯ್ಮಾನ್ ಅಲ್-ಜವಾಹಿರಿ (69) ಅಫ್ಘಾನಿಸ್ತಾನದಲ್ಲಿ ತಿಂಗಳ ಹಿಂದೆಯೇ ಮೃತಪಟ್ಟಿದ್ದಾನೆ ಎಂದು ನಂಬಲರ್ಹ ಮೂಲಗಳಿಂದ ಮಾಹಿತಿ ದೊರೆತಿದೆ. ಆದರೆ, ಅಲ್-ಖೈದಾ ಸಂಘಟನೆ ಆತನ ಸಾವನ್ನು ಇನ್ನೂ ದೃಢಪಡಿಸಿಲ್ಲ. ಅಸ್ತಮಾ ಮತ್ತಿತರ ಕಾಯಿಲೆಗಳಿಂದ ಬಳಲುತ್ತಿದ್ದ ಅಲ್–ಜವಾಹಿರಿ ಅಫ್ಘಾನಿಸ್ತಾನದ ಘಜನಿಯಲ್ಲಿ ಮೃತಪಟ್ಟಿದ್ದಾನೆ ಎಂದು ಅರಬ್ ನ್ಯೂಸ್ ಕೂಡ ವರದಿ ಮಾಡಿದೆ. ಅಲ್-ಜವಾಹಿರಿ ಕೊನೆಯಬಾರಿಗೆ ಕಾಣಿಸಿಕೊಂಡಿದ್ದು ಎರಡು ತಿಂಗಳ ಹಿಂದೆ. ಸೆಪ್ಟೆಂಬರ 11ರಂದು ಬಿಡುಗಡೆಯಾಗಿದ್ದ ವಿಡಿಯೊನಲ್ಲಿ ಅವನು ಕಾಣಿಸಿಕೊಂಡಿದ್ದ. ಆ ವಿಡಿಯೊನಲ್ಲಿ ಅಲ್-ಜವಾಹಿರಿ, ಸೆಪ್ಟೆಂಬರ್11, […]

ತಿಂಗಳು ಹಿಂದೆಯೇ ಅಲ್-ಖೈದಾ ಮುಖ್ಯಸ್ಥ ಅಲ್-ಜವಾಹಿರಿ ನಿಧನ ಹೊಂದಿರುವನೆ? | Al-Qaeda chief Al-Jawahiri is dead: Report
ಅರುಣ್​ ಕುಮಾರ್​ ಬೆಳ್ಳಿ
|

Updated on:Nov 20, 2020 | 9:04 PM

Share

ಅತ್ಯಂತ ಕ್ರೂರ ಉಗ್ರ ಸಂಘಟನೆ ಅಲ್-ಖೈದಾದ ಮುಖ್ಯಸ್ಥ ಅಯ್ಮಾನ್ ಅಲ್-ಜವಾಹಿರಿ (69) ಅಫ್ಘಾನಿಸ್ತಾನದಲ್ಲಿ ತಿಂಗಳ ಹಿಂದೆಯೇ ಮೃತಪಟ್ಟಿದ್ದಾನೆ ಎಂದು ನಂಬಲರ್ಹ ಮೂಲಗಳಿಂದ ಮಾಹಿತಿ ದೊರೆತಿದೆ. ಆದರೆ, ಅಲ್-ಖೈದಾ ಸಂಘಟನೆ ಆತನ ಸಾವನ್ನು ಇನ್ನೂ ದೃಢಪಡಿಸಿಲ್ಲ.

ಅಸ್ತಮಾ ಮತ್ತಿತರ ಕಾಯಿಲೆಗಳಿಂದ ಬಳಲುತ್ತಿದ್ದ ಅಲ್ಜವಾಹಿರಿ ಅಫ್ಘಾನಿಸ್ತಾನದ ಘಜನಿಯಲ್ಲಿ ಮೃತಪಟ್ಟಿದ್ದಾನೆ ಎಂದು ಅರಬ್ ನ್ಯೂಸ್ ಕೂಡ ವರದಿ ಮಾಡಿದೆ.

ಅಲ್-ಜವಾಹಿರಿ ಕೊನೆಯಬಾರಿಗೆ ಕಾಣಿಸಿಕೊಂಡಿದ್ದು ಎರಡು ತಿಂಗಳ ಹಿಂದೆ. ಸೆಪ್ಟೆಂಬರ 11ರಂದು ಬಿಡುಗಡೆಯಾಗಿದ್ದ ವಿಡಿಯೊನಲ್ಲಿ ಅವನು ಕಾಣಿಸಿಕೊಂಡಿದ್ದ. ಆ ವಿಡಿಯೊನಲ್ಲಿ ಅಲ್-ಜವಾಹಿರಿ, ಸೆಪ್ಟೆಂಬರ್11, 2001 ರಂದು ಅಮೆರಿಕದ ಮೇಲೆ ಅಲ್-ಖೈದಾ ನಡೆಸಿದ ಭೀಕರ ದಾಳಿ ಬಗ್ಗೆ ಮಾತನಾಡಿದ್ದ. ಅದಾದ ನಂತರ ಮತ್ತೆಲ್ಲೂ ಅವನು ಕಾಣಿಸಿಕೊಂಡಿರಲಿಲ್ಲ.

ಅಲ್ ಖೈದಾ ಮುಖ್ಯಸ್ಥ ಒಸಮಾ ಬಿನ್ ಲಾಡೆನ್​ನನ್ನು 2011ರ ಮೇ ತಿಂಗಳಲ್ಲಿ ಅಮೆರಿಕ ಹತ್ಯೆ ಮಾಡಿದ ನಂತರ ಅಲ್-ಜವಾಹಿರಿ ಸಂಘಟನೆಯ ನೇತೃತ್ವವಹಿಸಿಕೊಂಡಿದ್ದ. ಮೂಲಗಳ ಪ್ರಕಾರ ಅವನು ವೈದ್ಯನೂ ಆಗಿದ್ದ.

ಈಜಿಪ್ಟ್ ಮೂಲದವನಾಗಿದ್ದ ಅಲ್-ಜವಾಹಿರಿ, ಈಜಿಪ್ಷಿಯನ್ ಇಸ್ಲಾಮಿಕ್ ಜಿಹಾದ್ (ಇಐಜೆ) ಎಂಬ ಸಂಘಟನೆಯನ್ನೂ ಹುಟ್ಟುಹಾಕಿದ್ದ.

Published On - 8:55 pm, Fri, 20 November 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ