AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಂಗಳು ಹಿಂದೆಯೇ ಅಲ್-ಖೈದಾ ಮುಖ್ಯಸ್ಥ ಅಲ್-ಜವಾಹಿರಿ ನಿಧನ ಹೊಂದಿರುವನೆ? | Al-Qaeda chief Al-Jawahiri is dead: Report

ಅತ್ಯಂತ ಕ್ರೂರ ಉಗ್ರ ಸಂಘಟನೆ ಅಲ್-ಖೈದಾದ ಮುಖ್ಯಸ್ಥ ಅಯ್ಮಾನ್ ಅಲ್-ಜವಾಹಿರಿ (69) ಅಫ್ಘಾನಿಸ್ತಾನದಲ್ಲಿ ತಿಂಗಳ ಹಿಂದೆಯೇ ಮೃತಪಟ್ಟಿದ್ದಾನೆ ಎಂದು ನಂಬಲರ್ಹ ಮೂಲಗಳಿಂದ ಮಾಹಿತಿ ದೊರೆತಿದೆ. ಆದರೆ, ಅಲ್-ಖೈದಾ ಸಂಘಟನೆ ಆತನ ಸಾವನ್ನು ಇನ್ನೂ ದೃಢಪಡಿಸಿಲ್ಲ. ಅಸ್ತಮಾ ಮತ್ತಿತರ ಕಾಯಿಲೆಗಳಿಂದ ಬಳಲುತ್ತಿದ್ದ ಅಲ್–ಜವಾಹಿರಿ ಅಫ್ಘಾನಿಸ್ತಾನದ ಘಜನಿಯಲ್ಲಿ ಮೃತಪಟ್ಟಿದ್ದಾನೆ ಎಂದು ಅರಬ್ ನ್ಯೂಸ್ ಕೂಡ ವರದಿ ಮಾಡಿದೆ. ಅಲ್-ಜವಾಹಿರಿ ಕೊನೆಯಬಾರಿಗೆ ಕಾಣಿಸಿಕೊಂಡಿದ್ದು ಎರಡು ತಿಂಗಳ ಹಿಂದೆ. ಸೆಪ್ಟೆಂಬರ 11ರಂದು ಬಿಡುಗಡೆಯಾಗಿದ್ದ ವಿಡಿಯೊನಲ್ಲಿ ಅವನು ಕಾಣಿಸಿಕೊಂಡಿದ್ದ. ಆ ವಿಡಿಯೊನಲ್ಲಿ ಅಲ್-ಜವಾಹಿರಿ, ಸೆಪ್ಟೆಂಬರ್11, […]

ತಿಂಗಳು ಹಿಂದೆಯೇ ಅಲ್-ಖೈದಾ ಮುಖ್ಯಸ್ಥ ಅಲ್-ಜವಾಹಿರಿ ನಿಧನ ಹೊಂದಿರುವನೆ? | Al-Qaeda chief Al-Jawahiri is dead: Report
ಅರುಣ್​ ಕುಮಾರ್​ ಬೆಳ್ಳಿ
|

Updated on:Nov 20, 2020 | 9:04 PM

Share

ಅತ್ಯಂತ ಕ್ರೂರ ಉಗ್ರ ಸಂಘಟನೆ ಅಲ್-ಖೈದಾದ ಮುಖ್ಯಸ್ಥ ಅಯ್ಮಾನ್ ಅಲ್-ಜವಾಹಿರಿ (69) ಅಫ್ಘಾನಿಸ್ತಾನದಲ್ಲಿ ತಿಂಗಳ ಹಿಂದೆಯೇ ಮೃತಪಟ್ಟಿದ್ದಾನೆ ಎಂದು ನಂಬಲರ್ಹ ಮೂಲಗಳಿಂದ ಮಾಹಿತಿ ದೊರೆತಿದೆ. ಆದರೆ, ಅಲ್-ಖೈದಾ ಸಂಘಟನೆ ಆತನ ಸಾವನ್ನು ಇನ್ನೂ ದೃಢಪಡಿಸಿಲ್ಲ.

ಅಸ್ತಮಾ ಮತ್ತಿತರ ಕಾಯಿಲೆಗಳಿಂದ ಬಳಲುತ್ತಿದ್ದ ಅಲ್ಜವಾಹಿರಿ ಅಫ್ಘಾನಿಸ್ತಾನದ ಘಜನಿಯಲ್ಲಿ ಮೃತಪಟ್ಟಿದ್ದಾನೆ ಎಂದು ಅರಬ್ ನ್ಯೂಸ್ ಕೂಡ ವರದಿ ಮಾಡಿದೆ.

ಅಲ್-ಜವಾಹಿರಿ ಕೊನೆಯಬಾರಿಗೆ ಕಾಣಿಸಿಕೊಂಡಿದ್ದು ಎರಡು ತಿಂಗಳ ಹಿಂದೆ. ಸೆಪ್ಟೆಂಬರ 11ರಂದು ಬಿಡುಗಡೆಯಾಗಿದ್ದ ವಿಡಿಯೊನಲ್ಲಿ ಅವನು ಕಾಣಿಸಿಕೊಂಡಿದ್ದ. ಆ ವಿಡಿಯೊನಲ್ಲಿ ಅಲ್-ಜವಾಹಿರಿ, ಸೆಪ್ಟೆಂಬರ್11, 2001 ರಂದು ಅಮೆರಿಕದ ಮೇಲೆ ಅಲ್-ಖೈದಾ ನಡೆಸಿದ ಭೀಕರ ದಾಳಿ ಬಗ್ಗೆ ಮಾತನಾಡಿದ್ದ. ಅದಾದ ನಂತರ ಮತ್ತೆಲ್ಲೂ ಅವನು ಕಾಣಿಸಿಕೊಂಡಿರಲಿಲ್ಲ.

ಅಲ್ ಖೈದಾ ಮುಖ್ಯಸ್ಥ ಒಸಮಾ ಬಿನ್ ಲಾಡೆನ್​ನನ್ನು 2011ರ ಮೇ ತಿಂಗಳಲ್ಲಿ ಅಮೆರಿಕ ಹತ್ಯೆ ಮಾಡಿದ ನಂತರ ಅಲ್-ಜವಾಹಿರಿ ಸಂಘಟನೆಯ ನೇತೃತ್ವವಹಿಸಿಕೊಂಡಿದ್ದ. ಮೂಲಗಳ ಪ್ರಕಾರ ಅವನು ವೈದ್ಯನೂ ಆಗಿದ್ದ.

ಈಜಿಪ್ಟ್ ಮೂಲದವನಾಗಿದ್ದ ಅಲ್-ಜವಾಹಿರಿ, ಈಜಿಪ್ಷಿಯನ್ ಇಸ್ಲಾಮಿಕ್ ಜಿಹಾದ್ (ಇಐಜೆ) ಎಂಬ ಸಂಘಟನೆಯನ್ನೂ ಹುಟ್ಟುಹಾಕಿದ್ದ.

Published On - 8:55 pm, Fri, 20 November 20

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?