AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google Pay ಬಳಸುವವರೆ ಎಚ್ಚರ! ಕಸ್ಟಮರ್ ಕೇರ್ ಹೆಸರಿನಲ್ಲಿ ನಡೀತಿದೆ ವಂಚನೆ

ಬೆಂಗಳೂರು: ಗೂಗಲ್ ಪೇ ಆ್ಯಪ್ ಯೂಸ್ ಮಾಡೋ ಗ್ರಾಹಕರೇ ಎಚ್ಚರ.. ಎಚ್ಚರ! ಸಮಸ್ಯೆ ಆಯ್ತು ಅಂಥ ಕಸ್ಟಮರ್ ಕೇರ್ ಮೊರೆ ಹೋಗಿದ್ದವನಿಗೆ ಕಾದಿತ್ತು ಶಾಕ್! ಗೂಗಲ್ ಪೇ ಕಸ್ಟಮರ್ ಕೇರ್ ಹೆಸರಿನಲ್ಲಿ ವಂಚನೆ ಮಾಡಲಾಗುತ್ತಿದೆಯಂತೆ. ಬೆಂಗಳೂರಿನ ಗವಿಪುರಂ ನಿವಾಸಿ ಹರೀಶ್​ ವಂಚನೆಗೆ ಒಳಗಾಗಿದ್ದಾರೆ. ಹರೀಶ್​ಗೆ ಗೂಗಲ್​ಪೇಯಲ್ಲಿ ಸಮಸ್ಯೆಯಾದ ಹಿನ್ನೆಲೆಯಲ್ಲಿ ಗೂಗಲ್​ನಲ್ಲಿ ಸರ್ಚ್ ಮಾಡಿದಾಗ ಸಿಕ್ಕ 9901771222 ಕಸ್ಟಮರ್ ಕೇರ್ ನಂಬರ್​ಗೆ ಕರೆ ಮಾಡಿದ್ದರು. ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಂತರ ಮತ್ತೊಂದು 06291766339 ನಂಬರ್​ನಿಂದ ಹರೀಶ್ ಗೆ […]

Google Pay ಬಳಸುವವರೆ ಎಚ್ಚರ! ಕಸ್ಟಮರ್ ಕೇರ್ ಹೆಸರಿನಲ್ಲಿ ನಡೀತಿದೆ ವಂಚನೆ
ಆಯೇಷಾ ಬಾನು
| Edited By: |

Updated on:Jul 30, 2020 | 8:42 PM

Share

ಬೆಂಗಳೂರು: ಗೂಗಲ್ ಪೇ ಆ್ಯಪ್ ಯೂಸ್ ಮಾಡೋ ಗ್ರಾಹಕರೇ ಎಚ್ಚರ.. ಎಚ್ಚರ! ಸಮಸ್ಯೆ ಆಯ್ತು ಅಂಥ ಕಸ್ಟಮರ್ ಕೇರ್ ಮೊರೆ ಹೋಗಿದ್ದವನಿಗೆ ಕಾದಿತ್ತು ಶಾಕ್! ಗೂಗಲ್ ಪೇ ಕಸ್ಟಮರ್ ಕೇರ್ ಹೆಸರಿನಲ್ಲಿ ವಂಚನೆ ಮಾಡಲಾಗುತ್ತಿದೆಯಂತೆ. ಬೆಂಗಳೂರಿನ ಗವಿಪುರಂ ನಿವಾಸಿ ಹರೀಶ್​ ವಂಚನೆಗೆ ಒಳಗಾಗಿದ್ದಾರೆ.

ಹರೀಶ್​ಗೆ ಗೂಗಲ್​ಪೇಯಲ್ಲಿ ಸಮಸ್ಯೆಯಾದ ಹಿನ್ನೆಲೆಯಲ್ಲಿ ಗೂಗಲ್​ನಲ್ಲಿ ಸರ್ಚ್ ಮಾಡಿದಾಗ ಸಿಕ್ಕ 9901771222 ಕಸ್ಟಮರ್ ಕೇರ್ ನಂಬರ್​ಗೆ ಕರೆ ಮಾಡಿದ್ದರು. ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಂತರ ಮತ್ತೊಂದು 06291766339 ನಂಬರ್​ನಿಂದ ಹರೀಶ್ ಗೆ ಕಾಲ್ ಬಂದಿದೆ. ಆ ಕಡೆಯಿಂದ ನಿಮ್ಮ ಗೂಗಲ್ ಪೇ ಸಮಸ್ಯೆ ಆಗಿದೆ ನಾವು ಕೇಳುವ ಡಿಟೇಲ್ಸ್ ನೀಡಿದ್ರೆ ಬಗೆಹರಿಯುತ್ತೆ ಎಂದಿದ್ದಾರೆ.

ಅಪರಿಚಿತ ವ್ಯಕ್ತಿ ಕೇಳ್ತಿದ್ದಂತೆ ಡೆಬಿಟ್ ಕಾರ್ಡ್​ ನಂಬರ್, ಸಿವಿವಿ, ಒಟಿಪಿ ನೀಡಿದ್ದಾರೆ. ಬಳಿಕ ಅಪರಿಚಿತ ವ್ಯಕ್ತಿ ನಿಮ್ಮ ಗೂಗಲ್ ಪೇ ಸರಿ ಆಗಿದೆ. ಈಗ ಓಪನ್ ಮಾಡಿ ಅಂಥ ಕಾಲ್ ಕಟ್ ಮಾಡಿದ್ದಾನೆ. ಕಾಲ್ ಕಟ್ ಮಾಡಿ ನೋಡ್ತಿದ್ದಂತೆ ಅಕೌಂಟ್ ನಲ್ಲಿದ್ದ 24,500 ರೂಪಾಯಿ ಮಂಗಮಾಯವಾಗಿದೆ. ಅಕೌಂಟ್​ನಲ್ಲಿದ್ದ ಹಣ ಇಲ್ಲವಾದ ಬಳಿಕ ಶಾಕ್ ಆಗಿ ಮತ್ತೇ ಅದೇ ನಂಬರ್​ಗೆ ಹರೀಶ್ ಕಾಲ್ ಮಾಡಿದ್ರು. ಆದರೆ ಆ ನಂಬರ್ ಸ್ವಿಚ್ ಆಫ್ ಆಗಿತ್ತು. ಹರೀಶ್ ತಕ್ಷಣ ಪೊಲೀಸರಿಗೆ ದೂರು ನೀಡಿದ್ದಾರೆ. ದಕ್ಷಿಣ ಸಿಇಎನ್ ಠಾಣೆಯಲ್ಲಿ FIR ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Published On - 9:00 am, Wed, 29 July 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!