AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google Pay ಬಳಸುವವರೆ ಎಚ್ಚರ! ಕಸ್ಟಮರ್ ಕೇರ್ ಹೆಸರಿನಲ್ಲಿ ನಡೀತಿದೆ ವಂಚನೆ

ಬೆಂಗಳೂರು: ಗೂಗಲ್ ಪೇ ಆ್ಯಪ್ ಯೂಸ್ ಮಾಡೋ ಗ್ರಾಹಕರೇ ಎಚ್ಚರ.. ಎಚ್ಚರ! ಸಮಸ್ಯೆ ಆಯ್ತು ಅಂಥ ಕಸ್ಟಮರ್ ಕೇರ್ ಮೊರೆ ಹೋಗಿದ್ದವನಿಗೆ ಕಾದಿತ್ತು ಶಾಕ್! ಗೂಗಲ್ ಪೇ ಕಸ್ಟಮರ್ ಕೇರ್ ಹೆಸರಿನಲ್ಲಿ ವಂಚನೆ ಮಾಡಲಾಗುತ್ತಿದೆಯಂತೆ. ಬೆಂಗಳೂರಿನ ಗವಿಪುರಂ ನಿವಾಸಿ ಹರೀಶ್​ ವಂಚನೆಗೆ ಒಳಗಾಗಿದ್ದಾರೆ. ಹರೀಶ್​ಗೆ ಗೂಗಲ್​ಪೇಯಲ್ಲಿ ಸಮಸ್ಯೆಯಾದ ಹಿನ್ನೆಲೆಯಲ್ಲಿ ಗೂಗಲ್​ನಲ್ಲಿ ಸರ್ಚ್ ಮಾಡಿದಾಗ ಸಿಕ್ಕ 9901771222 ಕಸ್ಟಮರ್ ಕೇರ್ ನಂಬರ್​ಗೆ ಕರೆ ಮಾಡಿದ್ದರು. ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಂತರ ಮತ್ತೊಂದು 06291766339 ನಂಬರ್​ನಿಂದ ಹರೀಶ್ ಗೆ […]

Google Pay ಬಳಸುವವರೆ ಎಚ್ಚರ! ಕಸ್ಟಮರ್ ಕೇರ್ ಹೆಸರಿನಲ್ಲಿ ನಡೀತಿದೆ ವಂಚನೆ
ಆಯೇಷಾ ಬಾನು
| Edited By: |

Updated on:Jul 30, 2020 | 8:42 PM

Share

ಬೆಂಗಳೂರು: ಗೂಗಲ್ ಪೇ ಆ್ಯಪ್ ಯೂಸ್ ಮಾಡೋ ಗ್ರಾಹಕರೇ ಎಚ್ಚರ.. ಎಚ್ಚರ! ಸಮಸ್ಯೆ ಆಯ್ತು ಅಂಥ ಕಸ್ಟಮರ್ ಕೇರ್ ಮೊರೆ ಹೋಗಿದ್ದವನಿಗೆ ಕಾದಿತ್ತು ಶಾಕ್! ಗೂಗಲ್ ಪೇ ಕಸ್ಟಮರ್ ಕೇರ್ ಹೆಸರಿನಲ್ಲಿ ವಂಚನೆ ಮಾಡಲಾಗುತ್ತಿದೆಯಂತೆ. ಬೆಂಗಳೂರಿನ ಗವಿಪುರಂ ನಿವಾಸಿ ಹರೀಶ್​ ವಂಚನೆಗೆ ಒಳಗಾಗಿದ್ದಾರೆ.

ಹರೀಶ್​ಗೆ ಗೂಗಲ್​ಪೇಯಲ್ಲಿ ಸಮಸ್ಯೆಯಾದ ಹಿನ್ನೆಲೆಯಲ್ಲಿ ಗೂಗಲ್​ನಲ್ಲಿ ಸರ್ಚ್ ಮಾಡಿದಾಗ ಸಿಕ್ಕ 9901771222 ಕಸ್ಟಮರ್ ಕೇರ್ ನಂಬರ್​ಗೆ ಕರೆ ಮಾಡಿದ್ದರು. ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಂತರ ಮತ್ತೊಂದು 06291766339 ನಂಬರ್​ನಿಂದ ಹರೀಶ್ ಗೆ ಕಾಲ್ ಬಂದಿದೆ. ಆ ಕಡೆಯಿಂದ ನಿಮ್ಮ ಗೂಗಲ್ ಪೇ ಸಮಸ್ಯೆ ಆಗಿದೆ ನಾವು ಕೇಳುವ ಡಿಟೇಲ್ಸ್ ನೀಡಿದ್ರೆ ಬಗೆಹರಿಯುತ್ತೆ ಎಂದಿದ್ದಾರೆ.

ಅಪರಿಚಿತ ವ್ಯಕ್ತಿ ಕೇಳ್ತಿದ್ದಂತೆ ಡೆಬಿಟ್ ಕಾರ್ಡ್​ ನಂಬರ್, ಸಿವಿವಿ, ಒಟಿಪಿ ನೀಡಿದ್ದಾರೆ. ಬಳಿಕ ಅಪರಿಚಿತ ವ್ಯಕ್ತಿ ನಿಮ್ಮ ಗೂಗಲ್ ಪೇ ಸರಿ ಆಗಿದೆ. ಈಗ ಓಪನ್ ಮಾಡಿ ಅಂಥ ಕಾಲ್ ಕಟ್ ಮಾಡಿದ್ದಾನೆ. ಕಾಲ್ ಕಟ್ ಮಾಡಿ ನೋಡ್ತಿದ್ದಂತೆ ಅಕೌಂಟ್ ನಲ್ಲಿದ್ದ 24,500 ರೂಪಾಯಿ ಮಂಗಮಾಯವಾಗಿದೆ. ಅಕೌಂಟ್​ನಲ್ಲಿದ್ದ ಹಣ ಇಲ್ಲವಾದ ಬಳಿಕ ಶಾಕ್ ಆಗಿ ಮತ್ತೇ ಅದೇ ನಂಬರ್​ಗೆ ಹರೀಶ್ ಕಾಲ್ ಮಾಡಿದ್ರು. ಆದರೆ ಆ ನಂಬರ್ ಸ್ವಿಚ್ ಆಫ್ ಆಗಿತ್ತು. ಹರೀಶ್ ತಕ್ಷಣ ಪೊಲೀಸರಿಗೆ ದೂರು ನೀಡಿದ್ದಾರೆ. ದಕ್ಷಿಣ ಸಿಇಎನ್ ಠಾಣೆಯಲ್ಲಿ FIR ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Published On - 9:00 am, Wed, 29 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್