ಅನರ್ಹರ ಜೊತೆ ಇಂದೇ ಮೀಟಿಂಗ್, 15 ಕ್ಷೇತ್ರವನ್ನೂ ಗೆಲ್ತೇವೆ: ಯಡಿಯೂರಪ್ಪ

ಬೆಂಗಳೂರು: ಉಪ ಚುನಾವಣೆಯಲ್ಲಿ ಅನರ್ಹ ಶಾಸಕರ ಸ್ಪರ್ಧೆಗೆ ಸುಪ್ರೀಂಕೋರ್ಟ್​ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಅನರ್ಹ ಶಾಸಕರ ಜತೆ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಬಳಿಕ ಅನರ್ಹ ಶಾಸಕರು ದೆಹಲಿಯಿಂದ ಬೆಂಗಳೂರಿಗೆ ಬಂದ ನಂತರ ಅವರ ಜೊತೆ ಸಿಎಂ ಸಭೆ ನಡೆಸಲಿದ್ದಾರೆ. ಸಿಎಂ ಬಿಎಸ್​ವೈ ನಿರಾಳ: ಸುಪ್ರೀಂಕೋರ್ಟ್​ನಿಂದ ತೀರ್ಪು ಹೊರಬೀಳುತ್ತಿದ್ದಂತೆ ಸಿಎಂ ಯಡಿಯೂರಪ್ಪ ನಿರಾಳರಾಗಿದ್ದಾರೆ. ಸುಪ್ರೀಂ ತೀರ್ಪಿಗೆ ಸಂತಸ ವ್ಯಕ್ತಪಡಿಸಿ, ನಗುಮುಖದಲ್ಲೆ ಜೊತೆ ಇದ್ದವರ ಬಳಿ ಬಿ.ಎಸ್.ಯಡಿಯೂರಪ್ಪ […]

ಅನರ್ಹರ ಜೊತೆ ಇಂದೇ ಮೀಟಿಂಗ್, 15 ಕ್ಷೇತ್ರವನ್ನೂ ಗೆಲ್ತೇವೆ: ಯಡಿಯೂರಪ್ಪ
ಸಾಧು ಶ್ರೀನಾಥ್​

Updated on: Nov 13, 2019 | 12:03 PM

ಬೆಂಗಳೂರು: ಉಪ ಚುನಾವಣೆಯಲ್ಲಿ ಅನರ್ಹ ಶಾಸಕರ ಸ್ಪರ್ಧೆಗೆ ಸುಪ್ರೀಂಕೋರ್ಟ್​ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಅನರ್ಹ ಶಾಸಕರ ಜತೆ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಲಿದ್ದಾರೆ.

ಇಂದು ಮಧ್ಯಾಹ್ನ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಬಳಿಕ ಅನರ್ಹ ಶಾಸಕರು ದೆಹಲಿಯಿಂದ ಬೆಂಗಳೂರಿಗೆ ಬಂದ ನಂತರ ಅವರ ಜೊತೆ ಸಿಎಂ ಸಭೆ ನಡೆಸಲಿದ್ದಾರೆ.

ಸಿಎಂ ಬಿಎಸ್​ವೈ ನಿರಾಳ:
ಸುಪ್ರೀಂಕೋರ್ಟ್​ನಿಂದ ತೀರ್ಪು ಹೊರಬೀಳುತ್ತಿದ್ದಂತೆ ಸಿಎಂ ಯಡಿಯೂರಪ್ಪ ನಿರಾಳರಾಗಿದ್ದಾರೆ. ಸುಪ್ರೀಂ ತೀರ್ಪಿಗೆ ಸಂತಸ ವ್ಯಕ್ತಪಡಿಸಿ, ನಗುಮುಖದಲ್ಲೆ ಜೊತೆ ಇದ್ದವರ ಬಳಿ ಬಿ.ಎಸ್.ಯಡಿಯೂರಪ್ಪ ಮಾತುಕತೆ ನಡೆಸಿದ್ದಾರೆ.

15ಕ್ಕೆ 15 ಕ್ಷೇತ್ರವನ್ನೂ ನಾವು ಗೆಲ್ತೇವೆ
ಇಡೀ ದೇಶ ಸುಪ್ರೀಂಕೋರ್ಟ್ ತೀರ್ಪಿಗೆ ಕಾಯ್ತಿತ್ತು. ಹಿಂದಿನ ಸ್ಪೀಕರ್ ರಮೇಶ್‌ ಕುಮಾರ್ ಸಿದ್ದರಾಮಯ್ಯ ಸೇರಿಕೊಂಡು ಕುತಂತ್ರ, ಷಡ್ಯಂತ್ರ ಮಾಡಿದ್ರು. ಆದ್ರೀಗ 15 ಜನ ಸ್ಪರ್ಧೆ ಮಾಡಬಹುದು ಅಂತಾ ಹೇಳಿದೆ. ಸುಪ್ರೀಂಕೋರ್ಟ್ ಅದೇಶವನ್ನ ಸ್ವಾಗತಿಸುತ್ತೇವೆ. 15ಕ್ಕೆ 15 ಕ್ಷೇತ್ರವನ್ನೂ ನಾವು ಗೆಲ್ತೇವೆ. ನಾಳೆಯಿಂದಲೇ ಎಲ್ಲಾ ಸಚಿವರು, ಮುಖಂಡರು ಜವಾಬ್ದಾರಿ ತಗೊಂಡು ಗೆಲ್ಲಿಸಿಕೊಳ್ಳೋಕೆ ಕೆಲಸ ಮಾಡ್ತೇವೆ ಎಂದು ಡಾಲರ್ಸ್ ಕಾಲೋನಿಯಲ್ಲಿ ಸಿಎಂ ಬಿಎಸ್‌ವೈ ಹೇಳಿದ್ದಾರೆ.

Published On - 11:37 am, Wed, 13 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us