AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ಹೆಂಡ ಆಮಿಷ ತೋರಿಸಲ್ಲ.. ಪಕ್ಷ ಭೇದ ಮರೆತು ಗ್ರಾಮ ದೇವರ ಮುಂದೆ ಸಾಮೂಹಿಕ ಪ್ರಮಾಣ ಮಾಡಿದ ಅಭ್ಯರ್ಥಿಗಳು

ಎಲ್ಲಾ ಪಕ್ಷದ ಅಭ್ಯರ್ಥಿಗಳು ಭೇದಭಾವ ಮರೆತು ಪ್ರತಿಜ್ಞೆ ಮಾಡಿರುವುದು ಗ್ರಾಮಸ್ಥರಿಗೆ ಸಂತಸ ತಂದಿದೆ. ಸೋತರೂ, ಗೆದ್ದರೂ ಮತದಾರರೊಂದಿಗೆ ಸಂಬಂಧ ಹಾಳುಮಾಡಿಕೊಳ್ಳದೇ ಮೊದಲಿನಂತೆಯೇ ಇರಿ ಎಂದು ಊರಿನವರು ಸಲಹೆ ನೀಡಿದ್ದಾರೆ.

ಹಣ ಹೆಂಡ ಆಮಿಷ ತೋರಿಸಲ್ಲ.. ಪಕ್ಷ ಭೇದ ಮರೆತು ಗ್ರಾಮ ದೇವರ ಮುಂದೆ ಸಾಮೂಹಿಕ ಪ್ರಮಾಣ ಮಾಡಿದ ಅಭ್ಯರ್ಥಿಗಳು
ಗ್ರಾಮ ದೇಗುಲದಲ್ಲಿ ಪ್ರತಿಜ್ಞೆ ಸ್ವೀಕರಿಸಿದ ಅಭ್ಯರ್ಥಿಗಳು
Skanda
| Edited By: |

Updated on:Dec 21, 2020 | 6:15 PM

Share

ಶಿವಮೊಗ್ಗ: ಚುನಾವಣೆ ಬಂದರೆ ಹಣ ಹೆಂಡದ ಹೊಳೆ ಹರಿಯುತ್ತದೆ ಎಂಬ ಮಾತು ಸಾರ್ವಕಾಲಿಕ ಸತ್ಯ ಎನ್ನುವ ದುಃಸ್ಥಿತಿಗೆ ನಮ್ಮ ದೇಶ ಬಂದು ನಿಂತಿದೆ. ಹಣ, ಹೆಂಡ ಹಂಚಿ ಜನರಿಗೆ ಆಮಿಷ ತೋರಿಸಿ ವೋಟು ಗಿಟ್ಟಿಸಿಕೊಳ್ಳುವವರ ನಡುವೆ ಪ್ರಾಮಾಣಿಕತೆ ಎಂದು ಹೋದರೆ ಸೋಲು ನಿಶ್ಚಿತ ಎನ್ನುವ ಪರಿಸ್ಥಿತಿ ಇದೆ.

ಇದಕ್ಕೆ ಅಪವಾದ ಎಂಬಂತೆ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಹೋಬಳಿಯ ದೋಣಿಹಕ್ಲು ಮತ್ತು ಹೊಸೂರು-ಗುಡ್ಡೇಕೇರಿ ಗ್ರಾಮ ಪಂಚಾಯತಿ ಅಭ್ಯರ್ಥಿಗಳು ಪಕ್ಷಭೇದ ಮರೆತು ಹಣ, ಹೆಂಡ ಹಂಚದೆ ಪ್ರಾಮಾಣಿಕವಾಗಿ ಚುನಾವಣೆ ಎದುರಿಸುವ ಪ್ರತಿಜ್ಞೆ ತೊಟ್ಟು ಇತರರಿಗೆ ಮಾದರಿಯಾಗಿದ್ದಾರೆ.

ಹಣ, ಹೆಂಡ ಅಥವಾ ಯಾವುದೇ ರೀತಿಯ ಆಮಿಷ ತೋರದೆ ಚುನಾವಣೆ ಎದುರಿಸುತ್ತೇವೆ. ಯಾವ ಕಾರಣಕ್ಕೂ ಅಡ್ಡದಾರಿ ತುಳಿಯುವುದಿಲ್ಲ. ನಮ್ಮ ಪ್ರಾಮಾಣಿಕ ಪ್ರಯತ್ನದಿಂದಷ್ಟೇ ಮತಯಾಚಿಸುತ್ತೇವೆ ಎಂದು ಎರಡೂ ಬೂತ್​ಗಳ ಒಟ್ಟು 8 ಅಭ್ಯರ್ಥಿಗಳು ಹೊಸೂರು ಗ್ರಾಮದ ಈಶ್ವರ ದೇವಸ್ಥಾನಕ್ಕೆ ಒಂದಾಗಿ ಹೋಗಿ ದೇವರ ಮುಂದೆ ನಿಂತು ಪ್ರಸಾದ ಸ್ವೀಕರಿಸಿ ವಾಗ್ದಾನ ನೀಡಿದ್ದಾರೆ.

ಎಲ್ಲಾ ಪಕ್ಷದ ಅಭ್ಯರ್ಥಿಗಳು ಭೇದಭಾವ ಮರೆತು ಪ್ರತಿಜ್ಞೆ ಮಾಡಿರುವುದು ಗ್ರಾಮಸ್ಥರಿಗೆ ಸಂತಸ ತಂದಿದೆ. ಸೋತರೂ, ಗೆದ್ದರೂ ಮತದಾರರೊಂದಿಗೆ ಸಂಬಂಧ ಹಾಳು ಮಾಡಿಕೊಳ್ಳದೇ ಮೊದಲಿನಂತೆಯೇ ಇರಿ ಎಂದು ಊರಿನವರು ಸಲಹೆ ನೀಡಿದ್ದಾರೆ.

ಈ ಹಿಂದೆಯೂ ಬೇರೆ ಬೇರೆ ಚುನಾವಣೆ ಸಂದರ್ಭದಲ್ಲಿ ಊರಿನ ಎಲ್ಲಾ ಪಕ್ಷದವರು ಒಂದಾಗಿ ಹಣ ಹಂಚದೇ ಊರಿನ ರಸ್ತೆ, ಶಾಲೆ ಹಾಗೂ ಇನ್ನಿತರ ಅಭಿವೃದ್ಧಿ ಕಾರ್ಯಗಳಿಗೆ ಶ್ರಮ ಹಾಕುವ ನಿರ್ಧಾರ ಮಾಡಿ ಮನಗೆದ್ದಿದ್ದರು.

ಸ್ಥಳೀಯ ಸಂಸ್ಥೆ ಚುನಾವಣೆ: ಕಲಬುರಗಿಯಲ್ಲಿ ಒಂದೇ ಕುಟುಂಬದ ನಾಲ್ವರ ಸ್ಪರ್ಧೆ

Published On - 5:05 pm, Mon, 21 December 20

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ