AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ಹೆಂಡ ಆಮಿಷ ತೋರಿಸಲ್ಲ.. ಪಕ್ಷ ಭೇದ ಮರೆತು ಗ್ರಾಮ ದೇವರ ಮುಂದೆ ಸಾಮೂಹಿಕ ಪ್ರಮಾಣ ಮಾಡಿದ ಅಭ್ಯರ್ಥಿಗಳು

ಎಲ್ಲಾ ಪಕ್ಷದ ಅಭ್ಯರ್ಥಿಗಳು ಭೇದಭಾವ ಮರೆತು ಪ್ರತಿಜ್ಞೆ ಮಾಡಿರುವುದು ಗ್ರಾಮಸ್ಥರಿಗೆ ಸಂತಸ ತಂದಿದೆ. ಸೋತರೂ, ಗೆದ್ದರೂ ಮತದಾರರೊಂದಿಗೆ ಸಂಬಂಧ ಹಾಳುಮಾಡಿಕೊಳ್ಳದೇ ಮೊದಲಿನಂತೆಯೇ ಇರಿ ಎಂದು ಊರಿನವರು ಸಲಹೆ ನೀಡಿದ್ದಾರೆ.

ಹಣ ಹೆಂಡ ಆಮಿಷ ತೋರಿಸಲ್ಲ.. ಪಕ್ಷ ಭೇದ ಮರೆತು ಗ್ರಾಮ ದೇವರ ಮುಂದೆ ಸಾಮೂಹಿಕ ಪ್ರಮಾಣ ಮಾಡಿದ ಅಭ್ಯರ್ಥಿಗಳು
ಗ್ರಾಮ ದೇಗುಲದಲ್ಲಿ ಪ್ರತಿಜ್ಞೆ ಸ್ವೀಕರಿಸಿದ ಅಭ್ಯರ್ಥಿಗಳು
Skanda
| Edited By: |

Updated on:Dec 21, 2020 | 6:15 PM

Share

ಶಿವಮೊಗ್ಗ: ಚುನಾವಣೆ ಬಂದರೆ ಹಣ ಹೆಂಡದ ಹೊಳೆ ಹರಿಯುತ್ತದೆ ಎಂಬ ಮಾತು ಸಾರ್ವಕಾಲಿಕ ಸತ್ಯ ಎನ್ನುವ ದುಃಸ್ಥಿತಿಗೆ ನಮ್ಮ ದೇಶ ಬಂದು ನಿಂತಿದೆ. ಹಣ, ಹೆಂಡ ಹಂಚಿ ಜನರಿಗೆ ಆಮಿಷ ತೋರಿಸಿ ವೋಟು ಗಿಟ್ಟಿಸಿಕೊಳ್ಳುವವರ ನಡುವೆ ಪ್ರಾಮಾಣಿಕತೆ ಎಂದು ಹೋದರೆ ಸೋಲು ನಿಶ್ಚಿತ ಎನ್ನುವ ಪರಿಸ್ಥಿತಿ ಇದೆ.

ಇದಕ್ಕೆ ಅಪವಾದ ಎಂಬಂತೆ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಹೋಬಳಿಯ ದೋಣಿಹಕ್ಲು ಮತ್ತು ಹೊಸೂರು-ಗುಡ್ಡೇಕೇರಿ ಗ್ರಾಮ ಪಂಚಾಯತಿ ಅಭ್ಯರ್ಥಿಗಳು ಪಕ್ಷಭೇದ ಮರೆತು ಹಣ, ಹೆಂಡ ಹಂಚದೆ ಪ್ರಾಮಾಣಿಕವಾಗಿ ಚುನಾವಣೆ ಎದುರಿಸುವ ಪ್ರತಿಜ್ಞೆ ತೊಟ್ಟು ಇತರರಿಗೆ ಮಾದರಿಯಾಗಿದ್ದಾರೆ.

ಹಣ, ಹೆಂಡ ಅಥವಾ ಯಾವುದೇ ರೀತಿಯ ಆಮಿಷ ತೋರದೆ ಚುನಾವಣೆ ಎದುರಿಸುತ್ತೇವೆ. ಯಾವ ಕಾರಣಕ್ಕೂ ಅಡ್ಡದಾರಿ ತುಳಿಯುವುದಿಲ್ಲ. ನಮ್ಮ ಪ್ರಾಮಾಣಿಕ ಪ್ರಯತ್ನದಿಂದಷ್ಟೇ ಮತಯಾಚಿಸುತ್ತೇವೆ ಎಂದು ಎರಡೂ ಬೂತ್​ಗಳ ಒಟ್ಟು 8 ಅಭ್ಯರ್ಥಿಗಳು ಹೊಸೂರು ಗ್ರಾಮದ ಈಶ್ವರ ದೇವಸ್ಥಾನಕ್ಕೆ ಒಂದಾಗಿ ಹೋಗಿ ದೇವರ ಮುಂದೆ ನಿಂತು ಪ್ರಸಾದ ಸ್ವೀಕರಿಸಿ ವಾಗ್ದಾನ ನೀಡಿದ್ದಾರೆ.

ಎಲ್ಲಾ ಪಕ್ಷದ ಅಭ್ಯರ್ಥಿಗಳು ಭೇದಭಾವ ಮರೆತು ಪ್ರತಿಜ್ಞೆ ಮಾಡಿರುವುದು ಗ್ರಾಮಸ್ಥರಿಗೆ ಸಂತಸ ತಂದಿದೆ. ಸೋತರೂ, ಗೆದ್ದರೂ ಮತದಾರರೊಂದಿಗೆ ಸಂಬಂಧ ಹಾಳು ಮಾಡಿಕೊಳ್ಳದೇ ಮೊದಲಿನಂತೆಯೇ ಇರಿ ಎಂದು ಊರಿನವರು ಸಲಹೆ ನೀಡಿದ್ದಾರೆ.

ಈ ಹಿಂದೆಯೂ ಬೇರೆ ಬೇರೆ ಚುನಾವಣೆ ಸಂದರ್ಭದಲ್ಲಿ ಊರಿನ ಎಲ್ಲಾ ಪಕ್ಷದವರು ಒಂದಾಗಿ ಹಣ ಹಂಚದೇ ಊರಿನ ರಸ್ತೆ, ಶಾಲೆ ಹಾಗೂ ಇನ್ನಿತರ ಅಭಿವೃದ್ಧಿ ಕಾರ್ಯಗಳಿಗೆ ಶ್ರಮ ಹಾಕುವ ನಿರ್ಧಾರ ಮಾಡಿ ಮನಗೆದ್ದಿದ್ದರು.

ಸ್ಥಳೀಯ ಸಂಸ್ಥೆ ಚುನಾವಣೆ: ಕಲಬುರಗಿಯಲ್ಲಿ ಒಂದೇ ಕುಟುಂಬದ ನಾಲ್ವರ ಸ್ಪರ್ಧೆ

Published On - 5:05 pm, Mon, 21 December 20

Follow Us
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್