AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಜನವರಿ 1ರಿಂದ ಶಾಲಾ-ಕಾಲೇಜು ಆರಂಭ; ಪೋಷಕರ ಒಪ್ಪಿಗೆ ಪತ್ರ ಕಡ್ಡಾಯ: ಶಿಕ್ಷಣ ಸಚಿವ ಸುರೇಶ್​ ಕುಮಾರ್ ಪುನರುಚ್ಚಾರ

ಮಧ್ಯಾಹ್ನ ಬಿಸಿಯೂಟ ನೀಡುವ ಬಗ್ಗೆಯೂ ಸಲಹೆ ಇದೆ. ಆದರೆ ಸದ್ಯಕ್ಕೆ ಬಿಸಿಯೂಟ ನೀಡುವುದಿಲ್ಲ ಎಂದು ಸುರೇಶ್​ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಜನವರಿ 1ರಿಂದ ಶಾಲಾ-ಕಾಲೇಜು ಆರಂಭ; ಪೋಷಕರ ಒಪ್ಪಿಗೆ ಪತ್ರ ಕಡ್ಡಾಯ: ಶಿಕ್ಷಣ ಸಚಿವ ಸುರೇಶ್​ ಕುಮಾರ್ ಪುನರುಚ್ಚಾರ
ಸಚಿವ ಎಸ್​. ಸುರೇಶ್​ ಕುಮಾರ್​
Lakshmi Hegde
| Updated By: ಸಾಧು ಶ್ರೀನಾಥ್​|

Updated on: Dec 23, 2020 | 1:21 PM

Share

ಬೆಂಗಳೂರು: ಜನವರಿ 1ರಿಂದ ಶಾಲಾ-ಕಾಲೇಜುಗಳು ಪ್ರಾರಂಭವಾಗಲಿದೆ.. ಆದರೆ ಕೊವಿಡ್​-19 ನಿಯಂತ್ರಣಾ ನಿಯಮಗಳನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್ ಇಂದು ಹೇಳಿದ್ದಾರೆ.

ತಾಂತ್ರಿಕ ಸಲಹಾ ಸಮಿತಿ ಬಳಿಕ ಸುದ್ದಿಗೋಷ್ಠಿ ನಡೆಸಿದ ಸುರೇಶ್​ ಕುಮಾರ್​, ಒಂದು ತರಗತಿಯಲ್ಲಿ 15 ಮಕ್ಕಳಿಗೆ ಅಷ್ಟೇ ಪಾಠ ಮಾಡಲು ಅವಕಾಶ. ಶಾಲೆ ಪ್ರಾರಂಭ ಮಾಡಲು ಮುಂದಡಿ ಇಟ್ಟಿರುವ ನಮ್ಮ ಜತೆ ಗ್ರಾಮೀಣಾಭಿವೃದ್ಧಿ, ಆರೋಗ್ಯ, ಸಾರಿಗೆ ಇಲಾಖೆಗಳು ಸಹಕರಿಸಬೇಕು ಎಂದಿದ್ದಾರೆ.

ಇನ್ನು ಮಕ್ಕಳಿಗೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂಬುದನ್ನು ಪೋಷಕರು ಬರೆದು, ಸಹಿ ಮಾಡಿಕೊಡಬೇಕು. ಪ್ರತಿ ಜಿಲ್ಲಾಡಳಿತವೂ ಈ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಮಕ್ಕಳು ಪೋಷಕರ ಒಪ್ಪಿಗೆ ಪತ್ರದ ಜತೆಗೇ ಶಾಲೆಗೆ ಬರುವುದು ಕಡ್ಡಾಯ. ಇಲ್ಲದಿದ್ದರೆ ಅವರಿಗೆ ತರಗತಿಗೆ ಪ್ರವೇಶ ಇರುವುದಿಲ್ಲ. ಅವರ ಮೇಲೆ ಜಾಸ್ತಿ ಒತ್ತಡ ಹೇರುವ ಹಾಗಿಲ್ಲ. ಶಾಲೆ ಶುರುವಾದ ಒಂದುವಾರದ ಒಳಗಡೆ ಸಿಲೆಬಸ್​, ಪರೀಕ್ಷೆ ದಿನಾಂಕ ಪ್ರಕಟವಾಗಲಿದೆ. ಡಿಡಿ ಚಂದನದಲ್ಲೂ ಪಠ್ಯಕ್ರಮ ಮುಂದುವರಿಯಲಿದೆ ಎಂದು ಹೇಳಿದರು.

ಬಿಸಿಯೂಟ ಇಲ್ಲ ಮಧ್ಯಾಹ್ನ ಬಿಸಿಯೂಟ ನೀಡುವ ಬಗ್ಗೆಯೂ ಸಲಹೆ ಇದೆ. ಆದರೆ ಸದ್ಯಕ್ಕೆ ಬಿಸಿಯೂಟ ನೀಡುವುದಿಲ್ಲ. ಊಟಕ್ಕೆ ಸೇರುವಾಗ ಮಕ್ಕಳು ಗುಂಪುಗೂಡುತ್ತಾರೆ. ಅದರ ಬದಲು ರೇಷನ್ ನೀಡುವುದಕ್ಕೆ ನಿರ್ಧರಿಸಿದ್ದೇವೆ ಎಂದು ತಿಳಿಸಿದರು.

ಇಂದು ರಾತ್ರಿಯಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ: ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಘೋಷಣೆ

ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ