AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಳಿಮಾವು ಕೆರೆ ಏರಿ ಒಡೆಯಲು ಬಿಬಿಎಂಪಿ ಉಪಮೇಯರ್ ಕಾರಣ?

ಬೆಂಗಳೂರು: ಹುಳಿಮಾವು ಕೆರೆಯ ಏರಿ ಒಡೆದ ಪ್ರಕರಣಕ್ಕೆ ಇದೀಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ದೇವಸ್ಥಾನದೊಳಗೆ ಬರ್ತಿದ್ದ ಕೆರೆಯ ನೀರು ತಪ್ಪಿಸಲು ಇಡೀ ಊರನ್ನೇ ಮುಳುಗಿಸಿದ್ರಾ? ಹುಳಿಮಾವು ಕೆರೆ ಏರಿ ಒಡೆಯಲು ಉಪಮೇಯರ್ ರಾಮ್ ಮೋಹನ್ ರಾಜ್ ಕಾರಣ? ಎಂಬ ಆರೋಪಗಳು ಕೇಳಿಬರುತ್ತಿವೆ. ದೇಗುಲಕ್ಕೆ ಬರ್ತಿದ್ದ ಕೆರೆ ನೀರು ತಪ್ಪಿಸಲು ಸೂಚನೆ: ಹುಳಿಮಾವು ಕೆರೆ ಏರಿ ಮೇಲೆ ಕಟ್ಟೆ ಗಂಗಮ್ಮ ದೇವಸ್ಥಾನವಿದೆ. ಈ ದೇವಸ್ಥಾನದೊಳಗೆ ಕೆರೆ ನೀರು ಬಂದು ತುಂಬಿಕೊಳ್ಳುತ್ತಿತ್ತು. ಈ ಬಗ್ಗೆ ಸ್ಥಳೀಯ ಶಾಸಕರಿಗೆ ಮತ್ತು ಬಿಬಿಎಂಪಿ […]

ಹುಳಿಮಾವು ಕೆರೆ ಏರಿ ಒಡೆಯಲು ಬಿಬಿಎಂಪಿ ಉಪಮೇಯರ್ ಕಾರಣ?
ಸಾಧು ಶ್ರೀನಾಥ್​
|

Updated on:Nov 27, 2019 | 7:51 AM

Share

ಬೆಂಗಳೂರು: ಹುಳಿಮಾವು ಕೆರೆಯ ಏರಿ ಒಡೆದ ಪ್ರಕರಣಕ್ಕೆ ಇದೀಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ದೇವಸ್ಥಾನದೊಳಗೆ ಬರ್ತಿದ್ದ ಕೆರೆಯ ನೀರು ತಪ್ಪಿಸಲು ಇಡೀ ಊರನ್ನೇ ಮುಳುಗಿಸಿದ್ರಾ? ಹುಳಿಮಾವು ಕೆರೆ ಏರಿ ಒಡೆಯಲು ಉಪಮೇಯರ್ ರಾಮ್ ಮೋಹನ್ ರಾಜ್ ಕಾರಣ? ಎಂಬ ಆರೋಪಗಳು ಕೇಳಿಬರುತ್ತಿವೆ.

ದೇಗುಲಕ್ಕೆ ಬರ್ತಿದ್ದ ಕೆರೆ ನೀರು ತಪ್ಪಿಸಲು ಸೂಚನೆ: ಹುಳಿಮಾವು ಕೆರೆ ಏರಿ ಮೇಲೆ ಕಟ್ಟೆ ಗಂಗಮ್ಮ ದೇವಸ್ಥಾನವಿದೆ. ಈ ದೇವಸ್ಥಾನದೊಳಗೆ ಕೆರೆ ನೀರು ಬಂದು ತುಂಬಿಕೊಳ್ಳುತ್ತಿತ್ತು. ಈ ಬಗ್ಗೆ ಸ್ಥಳೀಯ ಶಾಸಕರಿಗೆ ಮತ್ತು ಬಿಬಿಎಂಪಿ ಉಪಮೇಯರ್​ಗೆ ದೇವಸ್ಥಾನದವರು ದೂರು ನೀಡಿದ್ದರು. ಅದರಂತೆ ಕೆರೆ ನೀರನ್ನ ಹರಿ ಬೀಡುವಂತೆ ಬಿಬಿಎಂಪಿ ಅಧಿಕಾರಿ ಶಿಲ್ಪಾಗೆ ಉಪಮೇಯರ್ ರಾಮ್ ಮೋಹನ್ ರಾಜ್ ಸೂಚಿಸಿದ್ದರು.

ಜೆಸಿಬಿ ಚಾಲಕನ ಎಡವಟ್ಟು! ಆದ್ರೆ, ನೀರು ಹರಿಬಿಡಲು ಪ್ರಾರಂಭದಲ್ಲಿ ಬಿಬಿಎಂಪಿ ಕೆರೆ ವಿಭಾಗದ ಎಂಜಿನಿಯರ್ ಶಿಲ್ಪಾ ಒಪ್ಪಿರಲಿಲ್ಲ. ನಂತರ ಕೆರೆ ಪಕ್ಕದ ರಾಜಕಾಲುವೆಗೆ ಸಣ್ಣದಾಗಿ ಕೆರೆ ನೀರು ಹರಿ ಬಿಡಲು ಶಿಲ್ಪಾ ಒಪ್ಪಿಗೆ ಸೂಚಿಸಿದ್ದಾರೆ. ಅದರಂತೆ ಜೆಸಿಬಿ ಮೂಲಕ ಕೆರೆ ನೀರನ್ನ ಹರಿಬಿಡುವಂತೆ ಉಪಮೇಯರ್ ಸೂಚನೆ ನೀಡಿದ್ದಾರೆ. ಆದ್ರೆ, ಜೆಸಿಬಿ ಚಾಲಕ ಕೆರೆಯ ಏರಿಯನ್ನೇ ಒಡೆದು ಎಡವಟ್ಟು ಮಾಡಿದ್ದಾನೆ. ಇದರಿಂದ ಏರಿ ಒಡೆದು ಇಡೀ ಊರಿಗೇ ಕೆರೆಯ ನೀರು ನುಗ್ಗಿದೆ ಎಂದು ಟಿವಿ9 ಗೆ ಬಿಬಿಎಂಪಿ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Published On - 7:48 am, Wed, 27 November 19

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ