AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡ ಮಕ್ಕಳ ಹಸಿವು ನೀಗಿಸುತ್ತಿದ್ದ ಅಕ್ಷಯ ಪಾತ್ರೆಯಲ್ಲಿ ನಡೀತಾ ಅವ್ಯವಹಾರ? ಸ್ವತಂತ್ರ ಟ್ರಸ್ಟಿಗಳ ರಾಜೀನಾಮೆ..

ಹಸಿವು ನೀಗಿಸೋ ದೊಡ್ಡ ಸಂಸ್ಥೆಯೊಂದಿಗೆ ಖ್ಯಾತಿ ಪಡೆದಿದ್ದ ಅಕ್ಷಯ ಪಾತ್ರೆ ಇದೀಗ ವಿವಾದದ ಕೇಂದ್ರಬಿಂದುವಾಗಿದೆ. ಅಕ್ಷಯ ಪಾತ್ರೆ ಟ್ರಸ್ಟ್‌ನಲ್ಲಿ ಹಣಕಾಸಿನ ಅವ್ಯವಹಾರ ಹಾಗೂ ಅಕ್ಷಯ ಪಾತ್ರೆ ಹೆಸರಿನಲ್ಲಿ ಸರ್ಕಾರ ಅನುದಾನ ದುರಪಯೋಗ ಮಾಡಿಕೊಳ್ಳಲಾಗ್ತಿದೆಯಂತೆ.

ಬಡ ಮಕ್ಕಳ ಹಸಿವು ನೀಗಿಸುತ್ತಿದ್ದ ಅಕ್ಷಯ ಪಾತ್ರೆಯಲ್ಲಿ ನಡೀತಾ ಅವ್ಯವಹಾರ? ಸ್ವತಂತ್ರ ಟ್ರಸ್ಟಿಗಳ ರಾಜೀನಾಮೆ..
ಆಯೇಷಾ ಬಾನು
|

Updated on: Nov 26, 2020 | 8:21 AM

Share

ಬೆಂಗಳೂರು: ಅಕ್ಷಯ ಪಾತ್ರೆ.. ಕಡಿಮೆ ದುಡ್ಡಲ್ಲಿ ಬಡ ಮಕ್ಕಳ ಹಸಿವು ನೀಗಿಸೋ ಕೆಲ್ಸ ಮಾಡ್ತಿರೋ ಈ ಟ್ರಸ್ಟ್‌ ಇದೀಗ ವಿವಾದಕ್ಕೆ ಕಾರಣವಾಗಿದೆ. ಕಾರಣ ಅಕ್ಷಯ ಪಾತ್ರೆಯ ಸ್ವತಂತ್ರ ಟ್ರಸ್ಟಿಗಳಾದ ಮೋಹನ್ ದಾಸ್ ಪೈ, ವಿ. ಬಾಲಕೃಷ್ಣನ್. ಅಭಯ್ ಜೈನ್, ರಾಜ್‌ ಕುಂದ್ರಾ ಇದೀಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡೋದ್ರ ಜತೆಗೆ ಅಕ್ಷಯ ಪಾತ್ರೆಯ ಚೇರ್ಮನ್‌ ಮಧು ಪಂಡಿತ್‌ ದಾಸ್ ಕಾರ್ಯವೈಖರಿ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಜೊತೆಗೆ ಅಕ್ಷಯ ಪಾತ್ರೆಯಲ್ಲಿ ಸಾರ್ವಜನಿಕರ ದುಡ್ಡು ದುರುಪಯೋಗ ಮಾಡಲಾಗ್ತಿದೆ ಅನ್ನೋ ಗಂಭೀರ ಆರೋಪ ಕೇಳಿಬಂದಿದೆ.

ಅಕ್ಷಯ ಪಾತ್ರೆ ಸ್ವತಂತ್ರ ಟ್ರಸ್ಟಿಗಳ ರಾಜೀನಾಮೆ! ಹೌದು.. ಸಾರ್ವಜನಿಕರಿಂದ ಹಣ ಸಂಗ್ರಹಣೆ ಹಾಗೂ ಐಟಿ ಬಿಟಿ ಕಂಪನಿಗಳಿಂದ ಸಿಎಸ್ಆರ್ ಫಂಡ್ ಪಡೆದು ಕಡಿಮೆ ದುಡ್ಡಲ್ಲಿ ಊಟ ಹಂಚುವ ಕೆಲ್ಸ ಮಾಡ್ತಿರೋ ಅಕ್ಷಯ ಪಾತ್ರೆ ವಿರುದ್ಧ ಅವ್ಯವಹಾರದ ಆರೋಪ ಕೇಳಿ ಬಂದಿದೆ. ಜೊತೆಗೆ ಅಕ್ಷಯ ಪಾತ್ರೆಯ ಚೇರ್ಮನ್ ಮಧು ಪಂಡಿತ್ ದಾಸ್ ವಿರುದ್ಧ ಐವರು ಸ್ವತಂತ್ರ ಟ್ರಸ್ಟಿಗಳು ಅಸಮಧಾನ ವ್ಯಕ್ತಪಡಿಸಿದ್ದು, ಮಧು ಪಂಡಿತ್ ದಾಸ್ ರಾಜೀನಾಮೆಗೆ ಒತ್ತಡ ಹಾಕಲಾಗ್ತಿದೆ.

ಅಕ್ಷಯ ಪಾತ್ರೆಗೆ ಸರ್ಕಾರದಿಂದ ಅಗತ್ಯ ಧಾನ್ಯಗಳನ್ನ ನೀಡಲಾಗ್ತಿದೆ. ಅಕ್ಕಿ, ಬೆಳೆ ಸೇರಿದಂತೆ ಇತರೆ ಪದಾರ್ಥಗಳನ್ನ ಉಚಿತವಾಗಿ ಕಳುಹಿಸಿ ಕೊಡಲಾಗ್ತಿದೆ. ಆದ್ರೆ ಆ ಪದಾರ್ಥದಲ್ಲಿ ಅಕ್ಷಯ ಪಾತ್ರೆ ಅಡುಗೆ ಮಾಡಿ ಅದನ್ನ ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಿಕೊಂಡು ಹಣ ಮಾಡುತ್ತಿದೆ. ಜೊತೆಗೆ ಇದಕ್ಕೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ಇಟ್ಟಿಲ್ಲ ಎಂದು ಆರೋಪ ಕೇಳಿ ಬಂದಿದೆ. ಜೊತೆಗೆ ಅಕ್ಷಯ್ ಪಾತ್ರೆಗೆ ಬರುವ ಅನುದಾನಗಳನ್ನ ಚೇರ್ಮನ್ ಮಧು ಪಂಡಿತ್ ದಾಸ್ ಇಸ್ಕಾನ್ ದೇವಸ್ಥಾನಕ್ಕೆ ಬಳಕೆ ಮಾಡಿಕೊಳ್ತಿದ್ದಾರಂತೆ.

ಜೈಪುರ್ ಹಾಗೂ ಇತರ ಭಾಗದಲ್ಲಿ ನಡೆಯುವ ದೇವಸ್ಥಾನದ ಕಾಮಗಾರಿಗಳಿಗೆ ಅಕ್ಷಯ ಪಾತ್ರೆ ಟ್ರಸ್ಟ್ ಮುಖಾಂತರ ಬಿಲ್ ಪಾವತಿ ಮಾಡ್ತಿದ್ದಾರಂತೆ. ಜೊತೆಗೆ ಲೆಕ್ಕ ಪರಿಶೋಧಕರು ಕೆಲ ಅವ್ಯವಹಾರದ ಬಗ್ಗೆಯೂ ಧ್ವನಿ ಎತ್ತಿದ್ದು, ಅದನ್ನೂ ಹತ್ತಿಕ್ಕೋ ಕೆಲ್ಸ ಮಾಡಲಾಗ್ತಿದೆ ಅಂತಾ ಟ್ರಸ್ಟಿಗಳು ಬೇಸರ ವ್ಯಕ್ತಪಡಿಸಿ ರಾಜೀನಾಮೆ ನೀಡಿದ್ದಾರೆ. ಅದಕ್ಕೆ ಈಗ ಅಕ್ಷಯ ಪಾತ್ರೆ ಮುಖ್ಯಸ್ಥ ಮಧು ದಾಸ್ ಪಂಡಿತ್ ರಾಜೀನಾಮೆ ನೀಡಿ ತನಿಖೆಗೆ ಅವಕಾಶ ನೀಡಬೇಕು ಅಂತಾ ಒತ್ತಾಯಗಳು ಕೇಳಿ ಬರ್ತಿದೆ.

ಇನ್ನೂ ಈ ಬಗ್ಗೆ ಇಸ್ಕಾನ್​ನಿಂದ ಸ್ಪಷ್ಟನೆ ಸಿಕ್ಕಿಲ್ಲ, ಕೇವಲ ಪತ್ರಿಕಾ ಪ್ರಕಟನೆ ನೀಡಿರುವ ಇಸ್ಕಾನ್, ಟ್ರಸ್ಟಿಗಳ ರಾಜೀನಾಮೆ ನೀಡಿರುವ ಬಗ್ಗೆ ಒಪ್ಪಿಕೊಂಡಿದ್ದು, ತನಿಖೆಗೆ ಸಮಿತಿ ರಚಿಸಲಾಗಿದೆ ಅಂತಾ ಹೇಳಿದೆ.ಸದ್ಯ ಇಸ್ಕಾನ್​ನ ಅಕ್ಷಯ್ ಪಾತ್ರಾ ವಿವಾದದ ಕೇಂದ್ರ ಬಿಂದುವಾಗಿದ್ದು ಅಕ್ಷಯ ಪಾತ್ರೆ ಚೇರ್ಮನ್ ವಿರುದ್ಧ ಸ್ವತಂತ್ರ ಟ್ರಸ್ಟಿಗಳು ಕಿಡಿಕಾರಿದ್ದಾರೆ. ಜೊತೆಗೆ ರಾಜೀನಾಮೆ ನೀಡಿ ಟ್ರಸ್ಟ್‌ನಿಂದ ಹೊರಗೆ ಬಂದಿದ್ದಾರೆ.

Follow Us
ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ
ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!