AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌಟುಂಬಿಕ‌ ಕಲಹ: ಗಂಡನನ್ನೆ ಕೊಲೆ ಮಾಡಿಸಿದಳಾ ಈ ಐನಾತಿ ಪತ್ನಿ?

ಗಂಡ ಹೆಂಡತಿ ಜಗಳ ಉಂಡು ಮಲಗೊತನಕ ಅನ್ನೋ ಮಾತಿದೆ. ಆದ್ರೆ ಪತಿ ಪತ್ನಿ ನಡುವಿನ ಕಲಹವೊಂದು ಪತಿಯ ಸಾವಿನಲ್ಲಿ ಅಂತ್ಯ ಕಂಡ ಘಟನೆ ನಡೆದಿದೆ. ನಗರದ ಮಹಿಳಾ ಸಮಾಜ ಸಭಾಂಗಣದ ಆವರಣದಲ್ಲಿ ನಡೆದ ಕೊಲೆ ಕೇಸ್​ಗೆ ಟ್ವಿಸ್ಟ್ ಸಿಕ್ಕಿದೆ.

ಕೌಟುಂಬಿಕ‌ ಕಲಹ: ಗಂಡನನ್ನೆ ಕೊಲೆ ಮಾಡಿಸಿದಳಾ ಈ ಐನಾತಿ ಪತ್ನಿ?
ಇಮ್ರಾನ್ ಕೊಲೆಯಾದ ವ್ಯಕ್ತಿ
ಆಯೇಷಾ ಬಾನು
|

Updated on:Dec 02, 2020 | 9:53 AM

Share

ರಾಯಚೂರು: ಗಂಡ ಹೆಂಡತಿ ಜಗಳ ಉಂಡು ಮಲಗೊತನಕ ಅನ್ನೋ ಮಾತಿದೆ. ಆದ್ರೆ ಪತಿ ಪತ್ನಿ ನಡುವಿನ ಕಲಹವೊಂದು ಪತಿಯ ಸಾವಿನಲ್ಲಿ ಅಂತ್ಯ ಕಂಡ ಘಟನೆ ನಡೆದಿದೆ. ನಗರದ ಮಹಿಳಾ ಸಮಾಜ ಸಭಾಂಗಣದ ಆವರಣದಲ್ಲಿ ನಡೆದ ಕೊಲೆ ಕೇಸ್​ಗೆ ಟ್ವಿಸ್ಟ್ ಸಿಕ್ಕಿದೆ.

ಘಟನೆ ಹಿನ್ನೆಲೆ: ರಾಯಚೂರು ತಾಲೂಕಿನ ದೇವನಪಲ್ಲಿ ಗ್ರಾಮದ ಇಮ್ರಾನ್ (30) ಕೊಲೆಯಾದ ವ್ಯಕ್ತಿ. ಹಲವು ಅನುಮಾನಗಳನ್ನು ಹುಟ್ಟು ಹಾಕಿದ್ದ ಈ ಕೇಸ್​ಗೆ ಸದ್ಯ ಈಗ ಕೌಟುಂಬಿಕ‌ ಕಲಹವೇ ಕಾರಣ ಎಂಬ ಆರೋಪಗಳು ಕೇಳಿ ಬರುತ್ತಿವೆ. ರಾಯಚೂರು ನಗರದ ಶಹಜಹಾನ್ ಎಂಬ ಯುವತಿಯನ್ನು ಇಮ್ರಾನ್ ಪ್ರೀತಿಸಿ ಮದುವೆಯಾಗಿದ್ದ. ಆದ್ರೆ ಮದುವೆಯಾದ ಬಳಿಕ ಇವರಿಬ್ಬರ ನಡುವೆ ನಿರಂತರ ಜಗಳ ನಡೀತಿತ್ತು. ಕಲಹದ ಹಿನ್ನೆಲೆ ಬೇಸತ್ತು ಕಳೆದ 4 ವರ್ಷದಿಂದ ಪತಿ-ಪತ್ನಿ ದೂರಾಗಿದ್ದರು.

ಪತಿ ಇಮ್ರಾನ್ ರಾಯಚೂರಿನಲ್ಲೇ ಬೇರೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಶಹಜಹಾನ್ ಸಂಬಂಧಿಕರು ಇಮ್ರಾನ್ ಮೇಲೆ ಪದೇ ಪದೇ ಹಲ್ಲೆ ನಡೆಸ್ತಿದ್ರು. ಹೀಗಾಗಿ ಇ್ರಮಾನ್ ಈ ಹಿಂದೆ ಪತ್ನಿಯ ಸಂಬಂಧಿಕರ ವಿರುದ್ಧ ಕೇಸ್ ದಾಖಲಿಸಿದ್ದ. ಇದಕ್ಕೆ ಪ್ರತಿಯಾಗಿ ಪತ್ನಿ ಕೂಡ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸಿದ್ದಳು.

ಈ ಎರಡೂ ಕೇಸ್​ಗಳನ್ನ ರಾಜಿ ಸಂಧಾನದ ಮೂಲಕ ಬಗೆ ಹರಿಸಿಕೊಳ್ಳಲು ಇಮ್ರಾನ್ ಮುಂದಾಗಿದ್ದ. ಆದ್ರೆ ಈ ಕೇಸ್ ಬಗೆಹರಿಯುವ ಮುನ್ನವೇ ಇಮ್ರಾನ್ ಭೀಕರವಾಗಿ ಕೊಲೆಯಾಗಿದ್ದಾನೆ. ಪತ್ನಿಯ ಸಂಬಂಧಿಕರಿಂದಲೇ ಈ ಕೃತ್ಯ ನಡೆದಿದೆ ಎಂದು ಮೃತನ ಸಹೋದರಿ ಆರೋಪ ಮಾಡಿದ್ದಾರೆ. ಈ ಬಗ್ಗೆ ಸದರ ಬಜಾರ್ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ಕಬಾಬ್​ ಮೇ ಹಡ್ಡಿ ಆಗ್ತಾನೆ ಅಂತಾ.. ಭಾವಿ ಪತಿಯನ್ನೇ ಕೊಲೆಗೈದ ಖತರ್ನಾಕ್​ ಯುವತಿ ಅಂದರ್​!

Published On - 9:53 am, Wed, 2 December 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ