AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌಟುಂಬಿಕ‌ ಕಲಹ: ಗಂಡನನ್ನೆ ಕೊಲೆ ಮಾಡಿಸಿದಳಾ ಈ ಐನಾತಿ ಪತ್ನಿ?

ಗಂಡ ಹೆಂಡತಿ ಜಗಳ ಉಂಡು ಮಲಗೊತನಕ ಅನ್ನೋ ಮಾತಿದೆ. ಆದ್ರೆ ಪತಿ ಪತ್ನಿ ನಡುವಿನ ಕಲಹವೊಂದು ಪತಿಯ ಸಾವಿನಲ್ಲಿ ಅಂತ್ಯ ಕಂಡ ಘಟನೆ ನಡೆದಿದೆ. ನಗರದ ಮಹಿಳಾ ಸಮಾಜ ಸಭಾಂಗಣದ ಆವರಣದಲ್ಲಿ ನಡೆದ ಕೊಲೆ ಕೇಸ್​ಗೆ ಟ್ವಿಸ್ಟ್ ಸಿಕ್ಕಿದೆ.

ಕೌಟುಂಬಿಕ‌ ಕಲಹ: ಗಂಡನನ್ನೆ ಕೊಲೆ ಮಾಡಿಸಿದಳಾ ಈ ಐನಾತಿ ಪತ್ನಿ?
ಇಮ್ರಾನ್ ಕೊಲೆಯಾದ ವ್ಯಕ್ತಿ
ಆಯೇಷಾ ಬಾನು
ಆಯೇಷಾ ಬಾನು|

Updated on:Dec 02, 2020 | 9:53 AM

Share

ರಾಯಚೂರು: ಗಂಡ ಹೆಂಡತಿ ಜಗಳ ಉಂಡು ಮಲಗೊತನಕ ಅನ್ನೋ ಮಾತಿದೆ. ಆದ್ರೆ ಪತಿ ಪತ್ನಿ ನಡುವಿನ ಕಲಹವೊಂದು ಪತಿಯ ಸಾವಿನಲ್ಲಿ ಅಂತ್ಯ ಕಂಡ ಘಟನೆ ನಡೆದಿದೆ. ನಗರದ ಮಹಿಳಾ ಸಮಾಜ ಸಭಾಂಗಣದ ಆವರಣದಲ್ಲಿ ನಡೆದ ಕೊಲೆ ಕೇಸ್​ಗೆ ಟ್ವಿಸ್ಟ್ ಸಿಕ್ಕಿದೆ.

ಘಟನೆ ಹಿನ್ನೆಲೆ: ರಾಯಚೂರು ತಾಲೂಕಿನ ದೇವನಪಲ್ಲಿ ಗ್ರಾಮದ ಇಮ್ರಾನ್ (30) ಕೊಲೆಯಾದ ವ್ಯಕ್ತಿ. ಹಲವು ಅನುಮಾನಗಳನ್ನು ಹುಟ್ಟು ಹಾಕಿದ್ದ ಈ ಕೇಸ್​ಗೆ ಸದ್ಯ ಈಗ ಕೌಟುಂಬಿಕ‌ ಕಲಹವೇ ಕಾರಣ ಎಂಬ ಆರೋಪಗಳು ಕೇಳಿ ಬರುತ್ತಿವೆ. ರಾಯಚೂರು ನಗರದ ಶಹಜಹಾನ್ ಎಂಬ ಯುವತಿಯನ್ನು ಇಮ್ರಾನ್ ಪ್ರೀತಿಸಿ ಮದುವೆಯಾಗಿದ್ದ. ಆದ್ರೆ ಮದುವೆಯಾದ ಬಳಿಕ ಇವರಿಬ್ಬರ ನಡುವೆ ನಿರಂತರ ಜಗಳ ನಡೀತಿತ್ತು. ಕಲಹದ ಹಿನ್ನೆಲೆ ಬೇಸತ್ತು ಕಳೆದ 4 ವರ್ಷದಿಂದ ಪತಿ-ಪತ್ನಿ ದೂರಾಗಿದ್ದರು.

ಪತಿ ಇಮ್ರಾನ್ ರಾಯಚೂರಿನಲ್ಲೇ ಬೇರೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಶಹಜಹಾನ್ ಸಂಬಂಧಿಕರು ಇಮ್ರಾನ್ ಮೇಲೆ ಪದೇ ಪದೇ ಹಲ್ಲೆ ನಡೆಸ್ತಿದ್ರು. ಹೀಗಾಗಿ ಇ್ರಮಾನ್ ಈ ಹಿಂದೆ ಪತ್ನಿಯ ಸಂಬಂಧಿಕರ ವಿರುದ್ಧ ಕೇಸ್ ದಾಖಲಿಸಿದ್ದ. ಇದಕ್ಕೆ ಪ್ರತಿಯಾಗಿ ಪತ್ನಿ ಕೂಡ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸಿದ್ದಳು.

ಈ ಎರಡೂ ಕೇಸ್​ಗಳನ್ನ ರಾಜಿ ಸಂಧಾನದ ಮೂಲಕ ಬಗೆ ಹರಿಸಿಕೊಳ್ಳಲು ಇಮ್ರಾನ್ ಮುಂದಾಗಿದ್ದ. ಆದ್ರೆ ಈ ಕೇಸ್ ಬಗೆಹರಿಯುವ ಮುನ್ನವೇ ಇಮ್ರಾನ್ ಭೀಕರವಾಗಿ ಕೊಲೆಯಾಗಿದ್ದಾನೆ. ಪತ್ನಿಯ ಸಂಬಂಧಿಕರಿಂದಲೇ ಈ ಕೃತ್ಯ ನಡೆದಿದೆ ಎಂದು ಮೃತನ ಸಹೋದರಿ ಆರೋಪ ಮಾಡಿದ್ದಾರೆ. ಈ ಬಗ್ಗೆ ಸದರ ಬಜಾರ್ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ಕಬಾಬ್​ ಮೇ ಹಡ್ಡಿ ಆಗ್ತಾನೆ ಅಂತಾ.. ಭಾವಿ ಪತಿಯನ್ನೇ ಕೊಲೆಗೈದ ಖತರ್ನಾಕ್​ ಯುವತಿ ಅಂದರ್​!

Published On - 9:53 am, Wed, 2 December 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ