AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌಟುಂಬಿಕ‌ ಕಲಹ: ಗಂಡನನ್ನೆ ಕೊಲೆ ಮಾಡಿಸಿದಳಾ ಈ ಐನಾತಿ ಪತ್ನಿ?

ಗಂಡ ಹೆಂಡತಿ ಜಗಳ ಉಂಡು ಮಲಗೊತನಕ ಅನ್ನೋ ಮಾತಿದೆ. ಆದ್ರೆ ಪತಿ ಪತ್ನಿ ನಡುವಿನ ಕಲಹವೊಂದು ಪತಿಯ ಸಾವಿನಲ್ಲಿ ಅಂತ್ಯ ಕಂಡ ಘಟನೆ ನಡೆದಿದೆ. ನಗರದ ಮಹಿಳಾ ಸಮಾಜ ಸಭಾಂಗಣದ ಆವರಣದಲ್ಲಿ ನಡೆದ ಕೊಲೆ ಕೇಸ್​ಗೆ ಟ್ವಿಸ್ಟ್ ಸಿಕ್ಕಿದೆ.

ಕೌಟುಂಬಿಕ‌ ಕಲಹ: ಗಂಡನನ್ನೆ ಕೊಲೆ ಮಾಡಿಸಿದಳಾ ಈ ಐನಾತಿ ಪತ್ನಿ?
ಇಮ್ರಾನ್ ಕೊಲೆಯಾದ ವ್ಯಕ್ತಿ
ಆಯೇಷಾ ಬಾನು
ಆಯೇಷಾ ಬಾನು|

Updated on:Dec 02, 2020 | 9:53 AM

Share

ರಾಯಚೂರು: ಗಂಡ ಹೆಂಡತಿ ಜಗಳ ಉಂಡು ಮಲಗೊತನಕ ಅನ್ನೋ ಮಾತಿದೆ. ಆದ್ರೆ ಪತಿ ಪತ್ನಿ ನಡುವಿನ ಕಲಹವೊಂದು ಪತಿಯ ಸಾವಿನಲ್ಲಿ ಅಂತ್ಯ ಕಂಡ ಘಟನೆ ನಡೆದಿದೆ. ನಗರದ ಮಹಿಳಾ ಸಮಾಜ ಸಭಾಂಗಣದ ಆವರಣದಲ್ಲಿ ನಡೆದ ಕೊಲೆ ಕೇಸ್​ಗೆ ಟ್ವಿಸ್ಟ್ ಸಿಕ್ಕಿದೆ.

ಘಟನೆ ಹಿನ್ನೆಲೆ: ರಾಯಚೂರು ತಾಲೂಕಿನ ದೇವನಪಲ್ಲಿ ಗ್ರಾಮದ ಇಮ್ರಾನ್ (30) ಕೊಲೆಯಾದ ವ್ಯಕ್ತಿ. ಹಲವು ಅನುಮಾನಗಳನ್ನು ಹುಟ್ಟು ಹಾಕಿದ್ದ ಈ ಕೇಸ್​ಗೆ ಸದ್ಯ ಈಗ ಕೌಟುಂಬಿಕ‌ ಕಲಹವೇ ಕಾರಣ ಎಂಬ ಆರೋಪಗಳು ಕೇಳಿ ಬರುತ್ತಿವೆ. ರಾಯಚೂರು ನಗರದ ಶಹಜಹಾನ್ ಎಂಬ ಯುವತಿಯನ್ನು ಇಮ್ರಾನ್ ಪ್ರೀತಿಸಿ ಮದುವೆಯಾಗಿದ್ದ. ಆದ್ರೆ ಮದುವೆಯಾದ ಬಳಿಕ ಇವರಿಬ್ಬರ ನಡುವೆ ನಿರಂತರ ಜಗಳ ನಡೀತಿತ್ತು. ಕಲಹದ ಹಿನ್ನೆಲೆ ಬೇಸತ್ತು ಕಳೆದ 4 ವರ್ಷದಿಂದ ಪತಿ-ಪತ್ನಿ ದೂರಾಗಿದ್ದರು.

ಪತಿ ಇಮ್ರಾನ್ ರಾಯಚೂರಿನಲ್ಲೇ ಬೇರೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಶಹಜಹಾನ್ ಸಂಬಂಧಿಕರು ಇಮ್ರಾನ್ ಮೇಲೆ ಪದೇ ಪದೇ ಹಲ್ಲೆ ನಡೆಸ್ತಿದ್ರು. ಹೀಗಾಗಿ ಇ್ರಮಾನ್ ಈ ಹಿಂದೆ ಪತ್ನಿಯ ಸಂಬಂಧಿಕರ ವಿರುದ್ಧ ಕೇಸ್ ದಾಖಲಿಸಿದ್ದ. ಇದಕ್ಕೆ ಪ್ರತಿಯಾಗಿ ಪತ್ನಿ ಕೂಡ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸಿದ್ದಳು.

ಈ ಎರಡೂ ಕೇಸ್​ಗಳನ್ನ ರಾಜಿ ಸಂಧಾನದ ಮೂಲಕ ಬಗೆ ಹರಿಸಿಕೊಳ್ಳಲು ಇಮ್ರಾನ್ ಮುಂದಾಗಿದ್ದ. ಆದ್ರೆ ಈ ಕೇಸ್ ಬಗೆಹರಿಯುವ ಮುನ್ನವೇ ಇಮ್ರಾನ್ ಭೀಕರವಾಗಿ ಕೊಲೆಯಾಗಿದ್ದಾನೆ. ಪತ್ನಿಯ ಸಂಬಂಧಿಕರಿಂದಲೇ ಈ ಕೃತ್ಯ ನಡೆದಿದೆ ಎಂದು ಮೃತನ ಸಹೋದರಿ ಆರೋಪ ಮಾಡಿದ್ದಾರೆ. ಈ ಬಗ್ಗೆ ಸದರ ಬಜಾರ್ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ಕಬಾಬ್​ ಮೇ ಹಡ್ಡಿ ಆಗ್ತಾನೆ ಅಂತಾ.. ಭಾವಿ ಪತಿಯನ್ನೇ ಕೊಲೆಗೈದ ಖತರ್ನಾಕ್​ ಯುವತಿ ಅಂದರ್​!

Published On - 9:53 am, Wed, 2 December 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ