ಠಾಣೆಯ ಬಳಿ ಮರಕ್ಕೆ ನೇಣು ಹಾಕಿಕೊಂಡು KSRP ಅಧಿಕಾರಿ ಆತ್ಮಹತ್ಯೆ

ಉಡುಪಿ: ಕರ್ತವ್ಯ ನಿರ್ವಹಿಸುವ ಅಮಾಸೆಬೈಲು ಠಾಣೆಯ ಸಮೀಪವೇ ಪೊಲೀಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೆಎಸ್​ಆರ್​ಪಿ(IRB) ಸಿಬ್ಬಂದಿ ಮಲ್ಲಿಕಾರ್ಜುನ್ ಗುಬ್ಬಿ (56) ನೇಣಿಗೆ ಶರಣಾಗಿದ್ದಾರೆ. ಪೊಲೀಸ್ ಠಾಣೆಯ ಬಳಿಯೇ ಮರಕ್ಕೆ ನೇಣು ಬಿಗಿದುಕೊಂಡು ಮಲ್ಲಿಕಾರ್ಜುನ್ ಗುಬ್ಬಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹ ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೇಲ್ನೋಟಕ್ಕೆ ಅನಾರೋಗ್ಯದಿಂದ ಮನನೊಂದು ಆತ್ಮಹತ್ಯೆಗೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಕಲಬುರಗಿಯ ನೌರುಗಂಜ್ ನಿವಾಸಿ ಮಲ್ಲಿಕಾರ್ಜುನ್ ಗುಬ್ಬಿ, ಮೇ 16ರಂದು ನಕ್ಸಲ್ ಪೀಡಿತ ಅಮಾಸೆಬೈಲು ಪೊಲೀಸ್ ಠಾಣೆಗೆ ಭದ್ರತೆಗಾಗಿ […]

ಠಾಣೆಯ ಬಳಿ ಮರಕ್ಕೆ ನೇಣು ಹಾಕಿಕೊಂಡು KSRP ಅಧಿಕಾರಿ ಆತ್ಮಹತ್ಯೆ
ಸಾಧು ಶ್ರೀನಾಥ್​

Updated on: May 30, 2020 | 2:05 AM

ಉಡುಪಿ: ಕರ್ತವ್ಯ ನಿರ್ವಹಿಸುವ ಅಮಾಸೆಬೈಲು ಠಾಣೆಯ ಸಮೀಪವೇ ಪೊಲೀಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೆಎಸ್​ಆರ್​ಪಿ(IRB) ಸಿಬ್ಬಂದಿ ಮಲ್ಲಿಕಾರ್ಜುನ್ ಗುಬ್ಬಿ (56) ನೇಣಿಗೆ ಶರಣಾಗಿದ್ದಾರೆ.

ಪೊಲೀಸ್ ಠಾಣೆಯ ಬಳಿಯೇ ಮರಕ್ಕೆ ನೇಣು ಬಿಗಿದುಕೊಂಡು ಮಲ್ಲಿಕಾರ್ಜುನ್ ಗುಬ್ಬಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹ ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೇಲ್ನೋಟಕ್ಕೆ ಅನಾರೋಗ್ಯದಿಂದ ಮನನೊಂದು ಆತ್ಮಹತ್ಯೆಗೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.

ಕಲಬುರಗಿಯ ನೌರುಗಂಜ್ ನಿವಾಸಿ ಮಲ್ಲಿಕಾರ್ಜುನ್ ಗುಬ್ಬಿ, ಮೇ 16ರಂದು ನಕ್ಸಲ್ ಪೀಡಿತ ಅಮಾಸೆಬೈಲು ಪೊಲೀಸ್ ಠಾಣೆಗೆ ಭದ್ರತೆಗಾಗಿ ನಿಯೋಜನೆಗೊಂಡಿದ್ದರು. 3 ತಿಂಗಳ‌ ಹಿಂದೆ ಕೊಪ್ಪಳದ ಮುನಿರಾಬಾದ್​ಗೆ ವರ್ಗಾವಣೆಗೊಂಡಿದ್ದರು. ಶನಿವಾರ ಮುನಿರಾಬಾದ್​ಗೆ ಮಲ್ಲಿಕಾರ್ಜುನ್‌ ತೆರಳಬೇಕಿತ್ತು.

Published On - 11:22 am, Fri, 29 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us