ರಾಮ ಸೇತು ವಿಚಾರಕ್ಕೆ ಕೈ ಹಾಕಿದ ಅಮೇಜಾನ್​ ಪ್ರೈಂ! ಅಕ್ಷಯ್​ ಕುಮಾರ್​ ಮೇಲೆ ದೊಡ್ಡ ಜವಾಬ್ದಾರಿ

ಮನರಂಜನೆ ಮಾತ್ರವಲ್ಲದೆ ಅದರ ಜೊತೆಗಿನ ವಿವಾದದ ಕಾರಣಕ್ಕಾಗಿಯೂ ಅಮೇಜಾನ್​ ಪ್ರೈಂ ಆಗಾಗ ಸುದ್ದಿ ಆಗುತ್ತಲೇ ಇರುತ್ತದೆ. ರಾಮ ಸೇತು ವಿಚಾರದಲ್ಲಿ ಈ ಸಂಸ್ಥೆ ಇನ್ನಷ್ಟು ಜಾಗೃತಿ ವಹಿಸಬೇಕಾಗುತ್ತದೆ.

ರಾಮ ಸೇತು ವಿಚಾರಕ್ಕೆ ಕೈ ಹಾಕಿದ ಅಮೇಜಾನ್​ ಪ್ರೈಂ! ಅಕ್ಷಯ್​ ಕುಮಾರ್​ ಮೇಲೆ ದೊಡ್ಡ ಜವಾಬ್ದಾರಿ
ರಾಮ್​ ಸೇತು - ಅಮೇಜಾನ್​ ಪ್ರೈಂ ವಿಡಿಯೋ
Follow us
|

Updated on: Mar 18, 2021 | 8:43 AM

ಓಟಿಟಿ ಪ್ಲಾಟ್​ಫಾರ್ಮ್​ಗಳ ಪ್ರಾಬಲ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಲಾಕ್​ಡೌನ್​ ಬಳಿಕವಂತೂ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಮನೆಯಲ್ಲೇ ಕುಳಿತು ಸಿನಿಮಾ ವೀಕ್ಷಿಸುವ ಹವ್ಯಾಸ ಹೆಚ್ಚು ಮಾಡಿಕೊಂಡಿದ್ದಾರೆ. ವೆಬ್​ ಸಿರೀಸ್​ಗಳ ನಿರ್ಮಾಣದಲ್ಲೂ ಗಣನೀಯ ಏರಿಕೆ ಆಗಿದೆ. ಅಷ್ಟೇ ಅಲ್ಲ, ದೊಡ್ಡ ದೊಡ್ಡ ಸಿನಿಮಾಗಳಿಗೆ ಬಂಡವಾಳ ಹೂಡಲು ಓಟಿಟಿ ಸಂಸ್ಥೆಗಳು ಮುಂದೆ ಬರುತ್ತಿವೆ. ಬಾಲಿವುಡ್​ನ ಬಹುನಿರೀಕ್ಷಿತ ‘ರಾಮ್​ ಸೇತು’ ಚಿತ್ರಕ್ಕೆ ಹಣ ಹೂಡಲು ‘ಅಮೇಜಾನ್​ ಪ್ರೈಂ ವಿಡಿಯೋ’ ಸಜ್ಜಾಗಿದೆ.

ಅಕ್ಷಯ್​ ಕುಮಾರ್​ ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾಗಳಲ್ಲಿ ರಾಮ್​ ಸೇತು ಕೂಡ ಒಂದು. ಕಳೆದ ವರ್ಷ ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಅಕ್ಷಯ್​ ಕುಮಾರ್​ ಈ ಸಿನಿಮಾವನ್ನು ಘೋಷಿಸಿದರು. ಆಗಿನಿಂದಲೇ ‘ರಾಮ್​ ಸೇತು’ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಕೊಂಡಿತು. ಈ ಚಿತ್ರಕ್ಕೆ ಕೇಪ್​ ಆಫ್​ ಗುಡ್​ ಫಿಲ್ಮ್ಸ್​, ಅಬಂಡಾನ್ಷಾ ಎಂಟರ್​ಟೇನ್​ಮೆಂಟ್​ ಮತ್ತು ಲೈಕಾ ಪ್ರೊಡಕ್ಷನ್ಸ್​ನಂತಹ ದೊಡ್ಡ ಸಂಸ್ಥೆಗಳು ಬಂಡವಾಳ ಹೂಡುತ್ತಿವೆ. ಅವುಗಳ ಜೊತೆಗೆ ಈಗ ‘ಅಮೇಜಾನ್​ ಪ್ರೈಂ ವಿಡಿಯೋ’ ಕೂಡ ಕೈ ಜೋಡಿಸುತ್ತಿದೆ.

‘ಅಮೇಜಾನ್​ ಪ್ರೈಂ ವಿಡಿಯೋ’ ನಿರ್ಮಾಣ ಮಾಡುತ್ತಿರುವ ಮೊದಲ ಬಾಲಿವುಡ್​ ಸಿನಿಮಾ ಇದಾಗಲಿದೆ. ಈಗಾಗಲೇ ಅಮೇಜಾನ್​ನಲ್ಲಿ ಬಿಡುಗಡೆಯಾದ ‘ಪಾತಾಳ್​ ಲೋಕ್’, ‘ತಾಂಡವ್​’ ಮುಂತಾದ ವೆಬ್​ ಸಿರೀಸ್​ಗಳಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವಂತಹ ಅಂಶಗಳಿವೆ ಎಂಬ ಆರೋಪ ಕೇಳಿಬಂದಿತ್ತು. ಈಗ ‘ರಾಮ್​ ಸೇತು’ ರೀತಿಯ ಸೂಕ್ಷ್ಮ ಕಥೆಯುಳ್ಳ ಚಿತ್ರವನ್ನು ನಿರ್ಮಾಣ ಮಾಡಲು ಈ ಸಂಸ್ಥೆ ಕೈ ಹಾಕಿದೆ. ಹಾಗಾಗಿ ಇನ್ನಷ್ಟು ಜಾಗೃತಿಯಿಂದ ಸಿನಿಮಾ ಮಾಡಬೇಕಾದ ಹೊಣೆಗಾರಿಕೆ ಇದೆ.

ರಾಮ ಸೇತು ನಿಜವೋ ಅಥವಾ ಕಾಲ್ಪನಿಕವೋ ಎಂಬ ಚರ್ಚೆ ಬಹಳ ಕಾಲದಿಂದಲೂ ನಡೆಯುತ್ತಲೇ ಇದೆ. ಅದೇ ಅಂಶವನ್ನು ಕೇಂದ್ರವಾಗಿಟ್ಟುಕೊಂಡು ಈ ಸಿನಿಮಾ ತಯಾರಾಗುತ್ತಿದೆ. ಒಂದು ವೇಳೆ ಏನಾದರೂ ವಿವಾದ ಮಾಡಿಕೊಂಡರೆ ಅದು ಅಕ್ಷಯ್​ ಕುಮಾರ್​ ವೃತ್ತಿಜೀವನಕ್ಕೆ ತೊಂದರೆ ಆಗಲಿದೆ. ಹಾಗಾಗಿ ಅವರ ಮೇಲೆ ಕೂಡ ಜವಾಬ್ದಾರಿ ಹೆಚ್ಚಿದೆ.

ಜಾಕ್ವಲಿನ್​ ಫರ್ನಾಂಡಿಸ್​ ಮತ್ತು ನುಸ್ರತ್​ ಬರುಚಾ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿಭಾಯಿಸಲಿದ್ದಾರೆ. ಮಾ.18ರಂದು ಅಯೋಧ್ಯದಲ್ಲಿ ‘ರಾಮ್​ ಸೇತು’ ಚಿತ್ರಕ್ಕೆ ಮುಹೂರ್ತ ನೆರವೇರಲಿದೆ. ಅದಕ್ಕಾಗಿ ಅಕ್ಷಯ್​ ಕುಮಾರ್​ ಈಗಾಗಲೇ ಅಯೋಧ್ಯೆ ತಲುಪಿದ್ದಾರೆ. ಅಭಿಷೇಕ್​ ಶರ್ಮಾ ಈ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ.

ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ