AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆಜಾನ್​ ಸಂಸ್ಥೆಯಿಂದ ಚೀನಾಗೆ ಶಾಕ್​: ಭಾರತದಲ್ಲೇ ಡಿವೈಸ್​ ಉತ್ಪಾದನೆ!

ಭಾರತದಲ್ಲೇ ವಸ್ತುಗಳನ್ನು ಉತ್ಪಾದನೆ ಮಾಡುವ ನಿರ್ಧಾರದಿಂದ ಭಾರತದ ಆರ್ಥಿಕತೆಗೆ ಉತ್ತೇಜನ ಸಿಗಲಿದೆ. ಭಾರತದಲ್ಲಿ ಉದ್ಯೋಗ ಸೃಷ್ಟಿ ಆಗಲಿದೆ ಎನ್ನುವುದು ಅಮೆಜಾನ್​ ಸಂಸ್ಥೆಯ ಅಭಿಪ್ರಾಯ.

ಅಮೆಜಾನ್​ ಸಂಸ್ಥೆಯಿಂದ ಚೀನಾಗೆ ಶಾಕ್​: ಭಾರತದಲ್ಲೇ ಡಿವೈಸ್​ ಉತ್ಪಾದನೆ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Feb 17, 2021 | 8:53 PM

Share

ಬೆಂಗಳೂರು: ಚೀನಾ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಅಮೆಜಾನ್​ ಸಂಸ್ಥೆ ತನ್ನ ಸಾಧನಗಳನ್ನು ಭಾರತದಲ್ಲೇ ಉತ್ಪಾದನೆ ಮಾಡುವ ನಿರ್ಧಾರಕ್ಕೆ ಬಂದಿದೆ. ಈ ಬೆಳವಣಿಗೆಯಿಂದ ಕೇಂದ್ರ ಸರ್ಕಾರದ ಕನಸಿನ ಯೋಜನೆ ಮೇಕ್​ ಇನ್​ ಇಂಡಿಯಾಗೆ (Make-in-India) ಉತ್ತೇಜನ ಸಿಗಲಿದೆ. ಅಲ್ಲದೆ, ಚೀನಾ ವಸ್ತುಗಳನ್ನುಬಹಿಷ್ಕಾರ ಮಾಡುವ ಭಾರತೀಯರ ಆಂದೋಲನಕ್ಕೂ ಬೆಂಬಲ ಸಿಕ್ಕಂತಾಗುತ್ತಿದೆ.

ಮೊದಲ ಹಂತದಲ್ಲಿ ಸ್ಮಾರ್ಟ್​ ಟಿವಿ ಸ್ಟ್ರೀಮಿಂಗ್​ಗೆ ಬೇಕಾಗುವ ಫೈರ್​ ಟಿವಿ ಸ್ಟಿಕ್​ಗಳನ್ನು ಚೆನ್ನೈನಲ್ಲಿ ಉತ್ಪಾದನೆ ಮಾಡುತ್ತಿದೆ. ವರ್ಷಾಂತ್ಯಕ್ಕೆ ಚೆನ್ನೈನಲ್ಲಿ ಈ ಘಟಕ ಆರಂಭ ಆಗುವ ನಿರೀಕ್ಷೆ ಇದೆ. ಭಾರತಕ್ಕೆ ಬೇಕಾಗುವ ಫೈರ್​ ಟಿವಿ ಸ್ಟಿಕ್​​ಗಳಿಗಾಗಿ ಅಮೆಜಾನ್ ಸಂಸ್ಥೆ​ ಚೀನಾ ಹಾಗೂ ತೈವಾನ್​ ದೇಶದ ಮೇಲೆ ಅವಲಂಬಿತವಾಗಿದೆ. ಇದನ್ನು ಹೋಗಲಾಡಿಸುವ ಉದ್ದೇಶದಿಂದ ಭಾರತದಲ್ಲೇ ಇದರ ಘಟಕ ಆರಂಭಗೊಳ್ಳಲಿದೆ. ಬೇಡಿಕೆ ನೋಡಿಕೊಂಡು ಎಷ್ಟು ಉತ್ಪಾದನೆ ಮಾಡಬೇಕು ಎನ್ನುವುದು ನಿರ್ಧಾರವಾಗುತ್ತದೆ ಎಂದು ಅಮೆಜಾನ್​ ತನ್ನ ಬ್ಲಾಗ್​ನಲ್ಲಿ ತಿಳಿಸಿದೆ.

ಭಾರತದಲ್ಲೇ ವಸ್ತುಗಳನ್ನು ಉತ್ಪಾದನೆ ಮಾಡುವ ನಿರ್ಧಾರದಿಂದ ಭಾರತದ ಆರ್ಥಿಕತೆಗೆ ಉತ್ತೇಜನ ಸಿಗಲಿದೆ. ಭಾರತದಲ್ಲಿ ಉದ್ಯೋಗ ಸೃಷ್ಟಿ ಆಗಲಿದೆ ಎನ್ನುವುದು ಅಮೆಜಾನ್​ ಸಂಸ್ಥೆಯ ಅಭಿಪ್ರಾಯ.

ಅಮೆಜಾನ್​ ನಿರ್ಧಾರವನ್ನು ಸ್ವಾಗತ ಮಾಡಿರುವ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿ ಶಂಕರ್​ ಪ್ರಸಾದ್​, ಪ್ರಧಾನಿ ನರೇಂದ್ರ ಮೋದಿ ಅಧಿಕಾರದ ಅವಧಿಯಲ್ಲಿ ಭಾರತ ದೊಡ್ಡ ದೊಡ್ಡ ಹೂಡಿಕೆಗಳನ್ನು ಪಡೆದಿದೆ. ಅಮೆಜಾನ್​ ಇದಕ್ಕೆ ಹೊಸ ಸೇರ್ಪಡೆ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Explainer | ಅಮೆಜಾನ್ ಸಿಇಒ ಹುದ್ದೆಯಿಂದ ಬಿಜೊಸ್ ಕೆಳಗಿಳಿಯುತ್ತಿರುವುದೇಕೆ? ಇನ್ಮುಂದೆ ಕಂಪನಿ ಮುನ್ನಡೆಸುವವರು ಯಾರು?

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!