AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆಜಾನ್​ ಸಂಸ್ಥೆಯಿಂದ ಚೀನಾಗೆ ಶಾಕ್​: ಭಾರತದಲ್ಲೇ ಡಿವೈಸ್​ ಉತ್ಪಾದನೆ!

ಭಾರತದಲ್ಲೇ ವಸ್ತುಗಳನ್ನು ಉತ್ಪಾದನೆ ಮಾಡುವ ನಿರ್ಧಾರದಿಂದ ಭಾರತದ ಆರ್ಥಿಕತೆಗೆ ಉತ್ತೇಜನ ಸಿಗಲಿದೆ. ಭಾರತದಲ್ಲಿ ಉದ್ಯೋಗ ಸೃಷ್ಟಿ ಆಗಲಿದೆ ಎನ್ನುವುದು ಅಮೆಜಾನ್​ ಸಂಸ್ಥೆಯ ಅಭಿಪ್ರಾಯ.

ಅಮೆಜಾನ್​ ಸಂಸ್ಥೆಯಿಂದ ಚೀನಾಗೆ ಶಾಕ್​: ಭಾರತದಲ್ಲೇ ಡಿವೈಸ್​ ಉತ್ಪಾದನೆ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Feb 17, 2021 | 8:53 PM

Share

ಬೆಂಗಳೂರು: ಚೀನಾ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಅಮೆಜಾನ್​ ಸಂಸ್ಥೆ ತನ್ನ ಸಾಧನಗಳನ್ನು ಭಾರತದಲ್ಲೇ ಉತ್ಪಾದನೆ ಮಾಡುವ ನಿರ್ಧಾರಕ್ಕೆ ಬಂದಿದೆ. ಈ ಬೆಳವಣಿಗೆಯಿಂದ ಕೇಂದ್ರ ಸರ್ಕಾರದ ಕನಸಿನ ಯೋಜನೆ ಮೇಕ್​ ಇನ್​ ಇಂಡಿಯಾಗೆ (Make-in-India) ಉತ್ತೇಜನ ಸಿಗಲಿದೆ. ಅಲ್ಲದೆ, ಚೀನಾ ವಸ್ತುಗಳನ್ನುಬಹಿಷ್ಕಾರ ಮಾಡುವ ಭಾರತೀಯರ ಆಂದೋಲನಕ್ಕೂ ಬೆಂಬಲ ಸಿಕ್ಕಂತಾಗುತ್ತಿದೆ.

ಮೊದಲ ಹಂತದಲ್ಲಿ ಸ್ಮಾರ್ಟ್​ ಟಿವಿ ಸ್ಟ್ರೀಮಿಂಗ್​ಗೆ ಬೇಕಾಗುವ ಫೈರ್​ ಟಿವಿ ಸ್ಟಿಕ್​ಗಳನ್ನು ಚೆನ್ನೈನಲ್ಲಿ ಉತ್ಪಾದನೆ ಮಾಡುತ್ತಿದೆ. ವರ್ಷಾಂತ್ಯಕ್ಕೆ ಚೆನ್ನೈನಲ್ಲಿ ಈ ಘಟಕ ಆರಂಭ ಆಗುವ ನಿರೀಕ್ಷೆ ಇದೆ. ಭಾರತಕ್ಕೆ ಬೇಕಾಗುವ ಫೈರ್​ ಟಿವಿ ಸ್ಟಿಕ್​​ಗಳಿಗಾಗಿ ಅಮೆಜಾನ್ ಸಂಸ್ಥೆ​ ಚೀನಾ ಹಾಗೂ ತೈವಾನ್​ ದೇಶದ ಮೇಲೆ ಅವಲಂಬಿತವಾಗಿದೆ. ಇದನ್ನು ಹೋಗಲಾಡಿಸುವ ಉದ್ದೇಶದಿಂದ ಭಾರತದಲ್ಲೇ ಇದರ ಘಟಕ ಆರಂಭಗೊಳ್ಳಲಿದೆ. ಬೇಡಿಕೆ ನೋಡಿಕೊಂಡು ಎಷ್ಟು ಉತ್ಪಾದನೆ ಮಾಡಬೇಕು ಎನ್ನುವುದು ನಿರ್ಧಾರವಾಗುತ್ತದೆ ಎಂದು ಅಮೆಜಾನ್​ ತನ್ನ ಬ್ಲಾಗ್​ನಲ್ಲಿ ತಿಳಿಸಿದೆ.

ಭಾರತದಲ್ಲೇ ವಸ್ತುಗಳನ್ನು ಉತ್ಪಾದನೆ ಮಾಡುವ ನಿರ್ಧಾರದಿಂದ ಭಾರತದ ಆರ್ಥಿಕತೆಗೆ ಉತ್ತೇಜನ ಸಿಗಲಿದೆ. ಭಾರತದಲ್ಲಿ ಉದ್ಯೋಗ ಸೃಷ್ಟಿ ಆಗಲಿದೆ ಎನ್ನುವುದು ಅಮೆಜಾನ್​ ಸಂಸ್ಥೆಯ ಅಭಿಪ್ರಾಯ.

ಅಮೆಜಾನ್​ ನಿರ್ಧಾರವನ್ನು ಸ್ವಾಗತ ಮಾಡಿರುವ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿ ಶಂಕರ್​ ಪ್ರಸಾದ್​, ಪ್ರಧಾನಿ ನರೇಂದ್ರ ಮೋದಿ ಅಧಿಕಾರದ ಅವಧಿಯಲ್ಲಿ ಭಾರತ ದೊಡ್ಡ ದೊಡ್ಡ ಹೂಡಿಕೆಗಳನ್ನು ಪಡೆದಿದೆ. ಅಮೆಜಾನ್​ ಇದಕ್ಕೆ ಹೊಸ ಸೇರ್ಪಡೆ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Explainer | ಅಮೆಜಾನ್ ಸಿಇಒ ಹುದ್ದೆಯಿಂದ ಬಿಜೊಸ್ ಕೆಳಗಿಳಿಯುತ್ತಿರುವುದೇಕೆ? ಇನ್ಮುಂದೆ ಕಂಪನಿ ಮುನ್ನಡೆಸುವವರು ಯಾರು?

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!