AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆಜಾನ್​ ಸಂಸ್ಥೆಯಿಂದ ಚೀನಾಗೆ ಶಾಕ್​: ಭಾರತದಲ್ಲೇ ಡಿವೈಸ್​ ಉತ್ಪಾದನೆ!

ಭಾರತದಲ್ಲೇ ವಸ್ತುಗಳನ್ನು ಉತ್ಪಾದನೆ ಮಾಡುವ ನಿರ್ಧಾರದಿಂದ ಭಾರತದ ಆರ್ಥಿಕತೆಗೆ ಉತ್ತೇಜನ ಸಿಗಲಿದೆ. ಭಾರತದಲ್ಲಿ ಉದ್ಯೋಗ ಸೃಷ್ಟಿ ಆಗಲಿದೆ ಎನ್ನುವುದು ಅಮೆಜಾನ್​ ಸಂಸ್ಥೆಯ ಅಭಿಪ್ರಾಯ.

ಅಮೆಜಾನ್​ ಸಂಸ್ಥೆಯಿಂದ ಚೀನಾಗೆ ಶಾಕ್​: ಭಾರತದಲ್ಲೇ ಡಿವೈಸ್​ ಉತ್ಪಾದನೆ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Feb 17, 2021 | 8:53 PM

Share

ಬೆಂಗಳೂರು: ಚೀನಾ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಅಮೆಜಾನ್​ ಸಂಸ್ಥೆ ತನ್ನ ಸಾಧನಗಳನ್ನು ಭಾರತದಲ್ಲೇ ಉತ್ಪಾದನೆ ಮಾಡುವ ನಿರ್ಧಾರಕ್ಕೆ ಬಂದಿದೆ. ಈ ಬೆಳವಣಿಗೆಯಿಂದ ಕೇಂದ್ರ ಸರ್ಕಾರದ ಕನಸಿನ ಯೋಜನೆ ಮೇಕ್​ ಇನ್​ ಇಂಡಿಯಾಗೆ (Make-in-India) ಉತ್ತೇಜನ ಸಿಗಲಿದೆ. ಅಲ್ಲದೆ, ಚೀನಾ ವಸ್ತುಗಳನ್ನುಬಹಿಷ್ಕಾರ ಮಾಡುವ ಭಾರತೀಯರ ಆಂದೋಲನಕ್ಕೂ ಬೆಂಬಲ ಸಿಕ್ಕಂತಾಗುತ್ತಿದೆ.

ಮೊದಲ ಹಂತದಲ್ಲಿ ಸ್ಮಾರ್ಟ್​ ಟಿವಿ ಸ್ಟ್ರೀಮಿಂಗ್​ಗೆ ಬೇಕಾಗುವ ಫೈರ್​ ಟಿವಿ ಸ್ಟಿಕ್​ಗಳನ್ನು ಚೆನ್ನೈನಲ್ಲಿ ಉತ್ಪಾದನೆ ಮಾಡುತ್ತಿದೆ. ವರ್ಷಾಂತ್ಯಕ್ಕೆ ಚೆನ್ನೈನಲ್ಲಿ ಈ ಘಟಕ ಆರಂಭ ಆಗುವ ನಿರೀಕ್ಷೆ ಇದೆ. ಭಾರತಕ್ಕೆ ಬೇಕಾಗುವ ಫೈರ್​ ಟಿವಿ ಸ್ಟಿಕ್​​ಗಳಿಗಾಗಿ ಅಮೆಜಾನ್ ಸಂಸ್ಥೆ​ ಚೀನಾ ಹಾಗೂ ತೈವಾನ್​ ದೇಶದ ಮೇಲೆ ಅವಲಂಬಿತವಾಗಿದೆ. ಇದನ್ನು ಹೋಗಲಾಡಿಸುವ ಉದ್ದೇಶದಿಂದ ಭಾರತದಲ್ಲೇ ಇದರ ಘಟಕ ಆರಂಭಗೊಳ್ಳಲಿದೆ. ಬೇಡಿಕೆ ನೋಡಿಕೊಂಡು ಎಷ್ಟು ಉತ್ಪಾದನೆ ಮಾಡಬೇಕು ಎನ್ನುವುದು ನಿರ್ಧಾರವಾಗುತ್ತದೆ ಎಂದು ಅಮೆಜಾನ್​ ತನ್ನ ಬ್ಲಾಗ್​ನಲ್ಲಿ ತಿಳಿಸಿದೆ.

ಭಾರತದಲ್ಲೇ ವಸ್ತುಗಳನ್ನು ಉತ್ಪಾದನೆ ಮಾಡುವ ನಿರ್ಧಾರದಿಂದ ಭಾರತದ ಆರ್ಥಿಕತೆಗೆ ಉತ್ತೇಜನ ಸಿಗಲಿದೆ. ಭಾರತದಲ್ಲಿ ಉದ್ಯೋಗ ಸೃಷ್ಟಿ ಆಗಲಿದೆ ಎನ್ನುವುದು ಅಮೆಜಾನ್​ ಸಂಸ್ಥೆಯ ಅಭಿಪ್ರಾಯ.

ಅಮೆಜಾನ್​ ನಿರ್ಧಾರವನ್ನು ಸ್ವಾಗತ ಮಾಡಿರುವ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿ ಶಂಕರ್​ ಪ್ರಸಾದ್​, ಪ್ರಧಾನಿ ನರೇಂದ್ರ ಮೋದಿ ಅಧಿಕಾರದ ಅವಧಿಯಲ್ಲಿ ಭಾರತ ದೊಡ್ಡ ದೊಡ್ಡ ಹೂಡಿಕೆಗಳನ್ನು ಪಡೆದಿದೆ. ಅಮೆಜಾನ್​ ಇದಕ್ಕೆ ಹೊಸ ಸೇರ್ಪಡೆ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Explainer | ಅಮೆಜಾನ್ ಸಿಇಒ ಹುದ್ದೆಯಿಂದ ಬಿಜೊಸ್ ಕೆಳಗಿಳಿಯುತ್ತಿರುವುದೇಕೆ? ಇನ್ಮುಂದೆ ಕಂಪನಿ ಮುನ್ನಡೆಸುವವರು ಯಾರು?

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ