AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆಜಾನ್​ ಸಂಸ್ಥೆಯಿಂದ ಚೀನಾಗೆ ಶಾಕ್​: ಭಾರತದಲ್ಲೇ ಡಿವೈಸ್​ ಉತ್ಪಾದನೆ!

ಭಾರತದಲ್ಲೇ ವಸ್ತುಗಳನ್ನು ಉತ್ಪಾದನೆ ಮಾಡುವ ನಿರ್ಧಾರದಿಂದ ಭಾರತದ ಆರ್ಥಿಕತೆಗೆ ಉತ್ತೇಜನ ಸಿಗಲಿದೆ. ಭಾರತದಲ್ಲಿ ಉದ್ಯೋಗ ಸೃಷ್ಟಿ ಆಗಲಿದೆ ಎನ್ನುವುದು ಅಮೆಜಾನ್​ ಸಂಸ್ಥೆಯ ಅಭಿಪ್ರಾಯ.

ಅಮೆಜಾನ್​ ಸಂಸ್ಥೆಯಿಂದ ಚೀನಾಗೆ ಶಾಕ್​: ಭಾರತದಲ್ಲೇ ಡಿವೈಸ್​ ಉತ್ಪಾದನೆ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Feb 17, 2021 | 8:53 PM

Share

ಬೆಂಗಳೂರು: ಚೀನಾ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಅಮೆಜಾನ್​ ಸಂಸ್ಥೆ ತನ್ನ ಸಾಧನಗಳನ್ನು ಭಾರತದಲ್ಲೇ ಉತ್ಪಾದನೆ ಮಾಡುವ ನಿರ್ಧಾರಕ್ಕೆ ಬಂದಿದೆ. ಈ ಬೆಳವಣಿಗೆಯಿಂದ ಕೇಂದ್ರ ಸರ್ಕಾರದ ಕನಸಿನ ಯೋಜನೆ ಮೇಕ್​ ಇನ್​ ಇಂಡಿಯಾಗೆ (Make-in-India) ಉತ್ತೇಜನ ಸಿಗಲಿದೆ. ಅಲ್ಲದೆ, ಚೀನಾ ವಸ್ತುಗಳನ್ನುಬಹಿಷ್ಕಾರ ಮಾಡುವ ಭಾರತೀಯರ ಆಂದೋಲನಕ್ಕೂ ಬೆಂಬಲ ಸಿಕ್ಕಂತಾಗುತ್ತಿದೆ.

ಮೊದಲ ಹಂತದಲ್ಲಿ ಸ್ಮಾರ್ಟ್​ ಟಿವಿ ಸ್ಟ್ರೀಮಿಂಗ್​ಗೆ ಬೇಕಾಗುವ ಫೈರ್​ ಟಿವಿ ಸ್ಟಿಕ್​ಗಳನ್ನು ಚೆನ್ನೈನಲ್ಲಿ ಉತ್ಪಾದನೆ ಮಾಡುತ್ತಿದೆ. ವರ್ಷಾಂತ್ಯಕ್ಕೆ ಚೆನ್ನೈನಲ್ಲಿ ಈ ಘಟಕ ಆರಂಭ ಆಗುವ ನಿರೀಕ್ಷೆ ಇದೆ. ಭಾರತಕ್ಕೆ ಬೇಕಾಗುವ ಫೈರ್​ ಟಿವಿ ಸ್ಟಿಕ್​​ಗಳಿಗಾಗಿ ಅಮೆಜಾನ್ ಸಂಸ್ಥೆ​ ಚೀನಾ ಹಾಗೂ ತೈವಾನ್​ ದೇಶದ ಮೇಲೆ ಅವಲಂಬಿತವಾಗಿದೆ. ಇದನ್ನು ಹೋಗಲಾಡಿಸುವ ಉದ್ದೇಶದಿಂದ ಭಾರತದಲ್ಲೇ ಇದರ ಘಟಕ ಆರಂಭಗೊಳ್ಳಲಿದೆ. ಬೇಡಿಕೆ ನೋಡಿಕೊಂಡು ಎಷ್ಟು ಉತ್ಪಾದನೆ ಮಾಡಬೇಕು ಎನ್ನುವುದು ನಿರ್ಧಾರವಾಗುತ್ತದೆ ಎಂದು ಅಮೆಜಾನ್​ ತನ್ನ ಬ್ಲಾಗ್​ನಲ್ಲಿ ತಿಳಿಸಿದೆ.

ಭಾರತದಲ್ಲೇ ವಸ್ತುಗಳನ್ನು ಉತ್ಪಾದನೆ ಮಾಡುವ ನಿರ್ಧಾರದಿಂದ ಭಾರತದ ಆರ್ಥಿಕತೆಗೆ ಉತ್ತೇಜನ ಸಿಗಲಿದೆ. ಭಾರತದಲ್ಲಿ ಉದ್ಯೋಗ ಸೃಷ್ಟಿ ಆಗಲಿದೆ ಎನ್ನುವುದು ಅಮೆಜಾನ್​ ಸಂಸ್ಥೆಯ ಅಭಿಪ್ರಾಯ.

ಅಮೆಜಾನ್​ ನಿರ್ಧಾರವನ್ನು ಸ್ವಾಗತ ಮಾಡಿರುವ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿ ಶಂಕರ್​ ಪ್ರಸಾದ್​, ಪ್ರಧಾನಿ ನರೇಂದ್ರ ಮೋದಿ ಅಧಿಕಾರದ ಅವಧಿಯಲ್ಲಿ ಭಾರತ ದೊಡ್ಡ ದೊಡ್ಡ ಹೂಡಿಕೆಗಳನ್ನು ಪಡೆದಿದೆ. ಅಮೆಜಾನ್​ ಇದಕ್ಕೆ ಹೊಸ ಸೇರ್ಪಡೆ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Explainer | ಅಮೆಜಾನ್ ಸಿಇಒ ಹುದ್ದೆಯಿಂದ ಬಿಜೊಸ್ ಕೆಳಗಿಳಿಯುತ್ತಿರುವುದೇಕೆ? ಇನ್ಮುಂದೆ ಕಂಪನಿ ಮುನ್ನಡೆಸುವವರು ಯಾರು?

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ