AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಂಬುಲೆನ್ಸ್ ಸಿಬ್ಬಂದಿ ನಿರ್ಲಕ್ಷ್ಯತನದಿಂದ ನಮ್ಮ ತಾಯಿ ಕಾಣೆಯಾಗಿದ್ದಾರೆ, ಹುಡ್ಕಿಕೊಡಿ’

ದಾವಣಗೆರೆ:ಕೊರೊನಾ ಸೋಂಕಿನಿಂದ ಗುಣಮುಖರಾದ ವೃದ್ಧೆಯನ್ನು ಮನೆಗೆ ತಲುಪಿಸದೆ, ಆಸ್ಪತ್ರೆಯ ಸಿಬ್ಬಂದಿ ರಸ್ತೆಯಲ್ಲಿಯೇ ಬಿಟ್ಟುಹೋಗಿರುವ ಘಟನೆ ಇಂದು ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆ ಹರಿಹರ ನಗರದ ಶ್ರೀಕಾಂತ್ ಟಾಕೀಸ್ ಬಳಿಯ ಬಾಂಗ್ಲಾ ಬಡಾವಣೆಯ 65 ವರ್ಷದ ವೃದ್ಧೆಯೊಬ್ಬರಿಗೆ ಕೆಲ ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಆಗಿತ್ತು, ಹೀಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ವೃದ್ಧೆಯನ್ನು ಅಂಬುಲೆನ್ಸ್ ಮುಖಾಂತರ ಮನೆಗೆ ವಾಪಸ್ ಕಳಿಸುವ ವ್ಯವಸ್ಥೆ ಮಾಡಿದ್ದಾರೆ. ಆದ್ರೆ ವೃದ್ಧೆಯನ್ನು ಅಂಬುಲೆನ್ಸ್ ನಲ್ಲಿ […]

‘ಅಂಬುಲೆನ್ಸ್ ಸಿಬ್ಬಂದಿ ನಿರ್ಲಕ್ಷ್ಯತನದಿಂದ ನಮ್ಮ ತಾಯಿ ಕಾಣೆಯಾಗಿದ್ದಾರೆ, ಹುಡ್ಕಿಕೊಡಿ’
ಸಾಧು ಶ್ರೀನಾಥ್​
|

Updated on:Jul 30, 2020 | 12:01 PM

Share

ದಾವಣಗೆರೆ:ಕೊರೊನಾ ಸೋಂಕಿನಿಂದ ಗುಣಮುಖರಾದ ವೃದ್ಧೆಯನ್ನು ಮನೆಗೆ ತಲುಪಿಸದೆ, ಆಸ್ಪತ್ರೆಯ ಸಿಬ್ಬಂದಿ ರಸ್ತೆಯಲ್ಲಿಯೇ ಬಿಟ್ಟುಹೋಗಿರುವ ಘಟನೆ ಇಂದು ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲೆ ಹರಿಹರ ನಗರದ ಶ್ರೀಕಾಂತ್ ಟಾಕೀಸ್ ಬಳಿಯ ಬಾಂಗ್ಲಾ ಬಡಾವಣೆಯ 65 ವರ್ಷದ ವೃದ್ಧೆಯೊಬ್ಬರಿಗೆ ಕೆಲ ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಆಗಿತ್ತು, ಹೀಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ವೃದ್ಧೆಯನ್ನು ಅಂಬುಲೆನ್ಸ್ ಮುಖಾಂತರ ಮನೆಗೆ ವಾಪಸ್ ಕಳಿಸುವ ವ್ಯವಸ್ಥೆ ಮಾಡಿದ್ದಾರೆ.

ಆದ್ರೆ ವೃದ್ಧೆಯನ್ನು ಅಂಬುಲೆನ್ಸ್ ನಲ್ಲಿ ಕರೆತಂದ ಆಸ್ಪತ್ರೆಯ ಸಿಬ್ಬಂದಿ, ಅವರನ್ನು ಮನೆಯ ಹತ್ತಿರ ಬಿಟ್ಟುಹೋಗದೆ ರಸ್ತೆಯಲ್ಲಿಯೇ ಬಿಟ್ಟು ಹೋಗಿದ್ದಾರೆ. ಹೀಗಾಗಿ ವೃದ್ಧೆಗೆ ಮನೆಗೆ ಹೋಗುವ ದಾರಿ ತಿಳಿದಿಲ್ಲ.

ಅದುವರೆಗೂ ಮನೆಗೆ ಬಾರದ ವೃದ್ಧೆಯನ್ನು ಆಕೆಯ ಮಗ ನಾಗರಾಜ್ ಅವರು ಹುಡುಕುತ್ತಿದ್ದು, ಎಷ್ಟೇ ಹುಡುಕಿದರು ವೃದ್ಧೆ ಕಾಣಿಸದ ಕಾರಣ ಇಂದು ಹರಿಹರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆಸ್ಪತ್ರೆಯ ಅಂಬುಲೆನ್ಸ್ ಸಿಬ್ಬಂದಿಯ ನಿರ್ಲಕ್ಷ್ಯತನದಿಂದ ನಮ್ಮ ತಾಯಿ ಕಾಣೆಯಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

Published On - 11:33 am, Thu, 30 July 20

ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!