AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಂಬುಲೆನ್ಸ್ ಸಿಬ್ಬಂದಿ ನಿರ್ಲಕ್ಷ್ಯತನದಿಂದ ನಮ್ಮ ತಾಯಿ ಕಾಣೆಯಾಗಿದ್ದಾರೆ, ಹುಡ್ಕಿಕೊಡಿ’

ದಾವಣಗೆರೆ:ಕೊರೊನಾ ಸೋಂಕಿನಿಂದ ಗುಣಮುಖರಾದ ವೃದ್ಧೆಯನ್ನು ಮನೆಗೆ ತಲುಪಿಸದೆ, ಆಸ್ಪತ್ರೆಯ ಸಿಬ್ಬಂದಿ ರಸ್ತೆಯಲ್ಲಿಯೇ ಬಿಟ್ಟುಹೋಗಿರುವ ಘಟನೆ ಇಂದು ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆ ಹರಿಹರ ನಗರದ ಶ್ರೀಕಾಂತ್ ಟಾಕೀಸ್ ಬಳಿಯ ಬಾಂಗ್ಲಾ ಬಡಾವಣೆಯ 65 ವರ್ಷದ ವೃದ್ಧೆಯೊಬ್ಬರಿಗೆ ಕೆಲ ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಆಗಿತ್ತು, ಹೀಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ವೃದ್ಧೆಯನ್ನು ಅಂಬುಲೆನ್ಸ್ ಮುಖಾಂತರ ಮನೆಗೆ ವಾಪಸ್ ಕಳಿಸುವ ವ್ಯವಸ್ಥೆ ಮಾಡಿದ್ದಾರೆ. ಆದ್ರೆ ವೃದ್ಧೆಯನ್ನು ಅಂಬುಲೆನ್ಸ್ ನಲ್ಲಿ […]

‘ಅಂಬುಲೆನ್ಸ್ ಸಿಬ್ಬಂದಿ ನಿರ್ಲಕ್ಷ್ಯತನದಿಂದ ನಮ್ಮ ತಾಯಿ ಕಾಣೆಯಾಗಿದ್ದಾರೆ, ಹುಡ್ಕಿಕೊಡಿ’
ಸಾಧು ಶ್ರೀನಾಥ್​
|

Updated on:Jul 30, 2020 | 12:01 PM

Share

ದಾವಣಗೆರೆ:ಕೊರೊನಾ ಸೋಂಕಿನಿಂದ ಗುಣಮುಖರಾದ ವೃದ್ಧೆಯನ್ನು ಮನೆಗೆ ತಲುಪಿಸದೆ, ಆಸ್ಪತ್ರೆಯ ಸಿಬ್ಬಂದಿ ರಸ್ತೆಯಲ್ಲಿಯೇ ಬಿಟ್ಟುಹೋಗಿರುವ ಘಟನೆ ಇಂದು ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲೆ ಹರಿಹರ ನಗರದ ಶ್ರೀಕಾಂತ್ ಟಾಕೀಸ್ ಬಳಿಯ ಬಾಂಗ್ಲಾ ಬಡಾವಣೆಯ 65 ವರ್ಷದ ವೃದ್ಧೆಯೊಬ್ಬರಿಗೆ ಕೆಲ ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಆಗಿತ್ತು, ಹೀಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ವೃದ್ಧೆಯನ್ನು ಅಂಬುಲೆನ್ಸ್ ಮುಖಾಂತರ ಮನೆಗೆ ವಾಪಸ್ ಕಳಿಸುವ ವ್ಯವಸ್ಥೆ ಮಾಡಿದ್ದಾರೆ.

ಆದ್ರೆ ವೃದ್ಧೆಯನ್ನು ಅಂಬುಲೆನ್ಸ್ ನಲ್ಲಿ ಕರೆತಂದ ಆಸ್ಪತ್ರೆಯ ಸಿಬ್ಬಂದಿ, ಅವರನ್ನು ಮನೆಯ ಹತ್ತಿರ ಬಿಟ್ಟುಹೋಗದೆ ರಸ್ತೆಯಲ್ಲಿಯೇ ಬಿಟ್ಟು ಹೋಗಿದ್ದಾರೆ. ಹೀಗಾಗಿ ವೃದ್ಧೆಗೆ ಮನೆಗೆ ಹೋಗುವ ದಾರಿ ತಿಳಿದಿಲ್ಲ.

ಅದುವರೆಗೂ ಮನೆಗೆ ಬಾರದ ವೃದ್ಧೆಯನ್ನು ಆಕೆಯ ಮಗ ನಾಗರಾಜ್ ಅವರು ಹುಡುಕುತ್ತಿದ್ದು, ಎಷ್ಟೇ ಹುಡುಕಿದರು ವೃದ್ಧೆ ಕಾಣಿಸದ ಕಾರಣ ಇಂದು ಹರಿಹರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆಸ್ಪತ್ರೆಯ ಅಂಬುಲೆನ್ಸ್ ಸಿಬ್ಬಂದಿಯ ನಿರ್ಲಕ್ಷ್ಯತನದಿಂದ ನಮ್ಮ ತಾಯಿ ಕಾಣೆಯಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

Published On - 11:33 am, Thu, 30 July 20

ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್
ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ