AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಂಬುಲೆನ್ಸ್ ಸಿಬ್ಬಂದಿ ನಿರ್ಲಕ್ಷ್ಯತನದಿಂದ ನಮ್ಮ ತಾಯಿ ಕಾಣೆಯಾಗಿದ್ದಾರೆ, ಹುಡ್ಕಿಕೊಡಿ’

ದಾವಣಗೆರೆ:ಕೊರೊನಾ ಸೋಂಕಿನಿಂದ ಗುಣಮುಖರಾದ ವೃದ್ಧೆಯನ್ನು ಮನೆಗೆ ತಲುಪಿಸದೆ, ಆಸ್ಪತ್ರೆಯ ಸಿಬ್ಬಂದಿ ರಸ್ತೆಯಲ್ಲಿಯೇ ಬಿಟ್ಟುಹೋಗಿರುವ ಘಟನೆ ಇಂದು ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆ ಹರಿಹರ ನಗರದ ಶ್ರೀಕಾಂತ್ ಟಾಕೀಸ್ ಬಳಿಯ ಬಾಂಗ್ಲಾ ಬಡಾವಣೆಯ 65 ವರ್ಷದ ವೃದ್ಧೆಯೊಬ್ಬರಿಗೆ ಕೆಲ ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಆಗಿತ್ತು, ಹೀಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ವೃದ್ಧೆಯನ್ನು ಅಂಬುಲೆನ್ಸ್ ಮುಖಾಂತರ ಮನೆಗೆ ವಾಪಸ್ ಕಳಿಸುವ ವ್ಯವಸ್ಥೆ ಮಾಡಿದ್ದಾರೆ. ಆದ್ರೆ ವೃದ್ಧೆಯನ್ನು ಅಂಬುಲೆನ್ಸ್ ನಲ್ಲಿ […]

‘ಅಂಬುಲೆನ್ಸ್ ಸಿಬ್ಬಂದಿ ನಿರ್ಲಕ್ಷ್ಯತನದಿಂದ ನಮ್ಮ ತಾಯಿ ಕಾಣೆಯಾಗಿದ್ದಾರೆ, ಹುಡ್ಕಿಕೊಡಿ’
ಸಾಧು ಶ್ರೀನಾಥ್​
|

Updated on:Jul 30, 2020 | 12:01 PM

Share

ದಾವಣಗೆರೆ:ಕೊರೊನಾ ಸೋಂಕಿನಿಂದ ಗುಣಮುಖರಾದ ವೃದ್ಧೆಯನ್ನು ಮನೆಗೆ ತಲುಪಿಸದೆ, ಆಸ್ಪತ್ರೆಯ ಸಿಬ್ಬಂದಿ ರಸ್ತೆಯಲ್ಲಿಯೇ ಬಿಟ್ಟುಹೋಗಿರುವ ಘಟನೆ ಇಂದು ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲೆ ಹರಿಹರ ನಗರದ ಶ್ರೀಕಾಂತ್ ಟಾಕೀಸ್ ಬಳಿಯ ಬಾಂಗ್ಲಾ ಬಡಾವಣೆಯ 65 ವರ್ಷದ ವೃದ್ಧೆಯೊಬ್ಬರಿಗೆ ಕೆಲ ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಆಗಿತ್ತು, ಹೀಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ವೃದ್ಧೆಯನ್ನು ಅಂಬುಲೆನ್ಸ್ ಮುಖಾಂತರ ಮನೆಗೆ ವಾಪಸ್ ಕಳಿಸುವ ವ್ಯವಸ್ಥೆ ಮಾಡಿದ್ದಾರೆ.

ಆದ್ರೆ ವೃದ್ಧೆಯನ್ನು ಅಂಬುಲೆನ್ಸ್ ನಲ್ಲಿ ಕರೆತಂದ ಆಸ್ಪತ್ರೆಯ ಸಿಬ್ಬಂದಿ, ಅವರನ್ನು ಮನೆಯ ಹತ್ತಿರ ಬಿಟ್ಟುಹೋಗದೆ ರಸ್ತೆಯಲ್ಲಿಯೇ ಬಿಟ್ಟು ಹೋಗಿದ್ದಾರೆ. ಹೀಗಾಗಿ ವೃದ್ಧೆಗೆ ಮನೆಗೆ ಹೋಗುವ ದಾರಿ ತಿಳಿದಿಲ್ಲ.

ಅದುವರೆಗೂ ಮನೆಗೆ ಬಾರದ ವೃದ್ಧೆಯನ್ನು ಆಕೆಯ ಮಗ ನಾಗರಾಜ್ ಅವರು ಹುಡುಕುತ್ತಿದ್ದು, ಎಷ್ಟೇ ಹುಡುಕಿದರು ವೃದ್ಧೆ ಕಾಣಿಸದ ಕಾರಣ ಇಂದು ಹರಿಹರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆಸ್ಪತ್ರೆಯ ಅಂಬುಲೆನ್ಸ್ ಸಿಬ್ಬಂದಿಯ ನಿರ್ಲಕ್ಷ್ಯತನದಿಂದ ನಮ್ಮ ತಾಯಿ ಕಾಣೆಯಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

Published On - 11:33 am, Thu, 30 July 20

Follow Us
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು