‘ಅಂಬುಲೆನ್ಸ್ ಸಿಬ್ಬಂದಿ ನಿರ್ಲಕ್ಷ್ಯತನದಿಂದ ನಮ್ಮ ತಾಯಿ ಕಾಣೆಯಾಗಿದ್ದಾರೆ, ಹುಡ್ಕಿಕೊಡಿ’

ದಾವಣಗೆರೆ:ಕೊರೊನಾ ಸೋಂಕಿನಿಂದ ಗುಣಮುಖರಾದ ವೃದ್ಧೆಯನ್ನು ಮನೆಗೆ ತಲುಪಿಸದೆ, ಆಸ್ಪತ್ರೆಯ ಸಿಬ್ಬಂದಿ ರಸ್ತೆಯಲ್ಲಿಯೇ ಬಿಟ್ಟುಹೋಗಿರುವ ಘಟನೆ ಇಂದು ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆ ಹರಿಹರ ನಗರದ ಶ್ರೀಕಾಂತ್ ಟಾಕೀಸ್ ಬಳಿಯ ಬಾಂಗ್ಲಾ ಬಡಾವಣೆಯ 65 ವರ್ಷದ ವೃದ್ಧೆಯೊಬ್ಬರಿಗೆ ಕೆಲ ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಆಗಿತ್ತು, ಹೀಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ವೃದ್ಧೆಯನ್ನು ಅಂಬುಲೆನ್ಸ್ ಮುಖಾಂತರ ಮನೆಗೆ ವಾಪಸ್ ಕಳಿಸುವ ವ್ಯವಸ್ಥೆ ಮಾಡಿದ್ದಾರೆ. ಆದ್ರೆ ವೃದ್ಧೆಯನ್ನು ಅಂಬುಲೆನ್ಸ್ ನಲ್ಲಿ […]

‘ಅಂಬುಲೆನ್ಸ್ ಸಿಬ್ಬಂದಿ ನಿರ್ಲಕ್ಷ್ಯತನದಿಂದ ನಮ್ಮ ತಾಯಿ ಕಾಣೆಯಾಗಿದ್ದಾರೆ, ಹುಡ್ಕಿಕೊಡಿ’
ಸಾಧು ಶ್ರೀನಾಥ್​

Updated on: Jul 30, 2020 | 12:01 PM

ದಾವಣಗೆರೆ:ಕೊರೊನಾ ಸೋಂಕಿನಿಂದ ಗುಣಮುಖರಾದ ವೃದ್ಧೆಯನ್ನು ಮನೆಗೆ ತಲುಪಿಸದೆ, ಆಸ್ಪತ್ರೆಯ ಸಿಬ್ಬಂದಿ ರಸ್ತೆಯಲ್ಲಿಯೇ ಬಿಟ್ಟುಹೋಗಿರುವ ಘಟನೆ ಇಂದು ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲೆ ಹರಿಹರ ನಗರದ ಶ್ರೀಕಾಂತ್ ಟಾಕೀಸ್ ಬಳಿಯ ಬಾಂಗ್ಲಾ ಬಡಾವಣೆಯ 65 ವರ್ಷದ ವೃದ್ಧೆಯೊಬ್ಬರಿಗೆ ಕೆಲ ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಆಗಿತ್ತು, ಹೀಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ವೃದ್ಧೆಯನ್ನು ಅಂಬುಲೆನ್ಸ್ ಮುಖಾಂತರ ಮನೆಗೆ ವಾಪಸ್ ಕಳಿಸುವ ವ್ಯವಸ್ಥೆ ಮಾಡಿದ್ದಾರೆ.

ಆದ್ರೆ ವೃದ್ಧೆಯನ್ನು ಅಂಬುಲೆನ್ಸ್ ನಲ್ಲಿ ಕರೆತಂದ ಆಸ್ಪತ್ರೆಯ ಸಿಬ್ಬಂದಿ, ಅವರನ್ನು ಮನೆಯ ಹತ್ತಿರ ಬಿಟ್ಟುಹೋಗದೆ ರಸ್ತೆಯಲ್ಲಿಯೇ ಬಿಟ್ಟು ಹೋಗಿದ್ದಾರೆ. ಹೀಗಾಗಿ ವೃದ್ಧೆಗೆ ಮನೆಗೆ ಹೋಗುವ ದಾರಿ ತಿಳಿದಿಲ್ಲ.

ಅದುವರೆಗೂ ಮನೆಗೆ ಬಾರದ ವೃದ್ಧೆಯನ್ನು ಆಕೆಯ ಮಗ ನಾಗರಾಜ್ ಅವರು ಹುಡುಕುತ್ತಿದ್ದು, ಎಷ್ಟೇ ಹುಡುಕಿದರು ವೃದ್ಧೆ ಕಾಣಿಸದ ಕಾರಣ ಇಂದು ಹರಿಹರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆಸ್ಪತ್ರೆಯ ಅಂಬುಲೆನ್ಸ್ ಸಿಬ್ಬಂದಿಯ ನಿರ್ಲಕ್ಷ್ಯತನದಿಂದ ನಮ್ಮ ತಾಯಿ ಕಾಣೆಯಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

Published On - 11:33 am, Thu, 30 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us