AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾಯದ ಹೊಸ್ತಿಲಲ್ಲಿ.. ಅಮೆರಿಕನ್ನರು!

ಅಮೆರಿಕಾದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದೆ. ನವೆಂಬರ್ ತಿಂಗಳು ಮುಗಿಯಲು ಇನ್ನೂ ಹತ್ತು ದಿನ ಇರುವಾಗಲೇ ವಿಜ್ಞಾನಿಗಳ ತಂಡ ಸ್ಫೋಟಕ ಮಾಹಿತಿಯೊಂದನ್ನು ಹೊರಹಾಕುವ ಮೂಲಕ ಅಪಾಯದ ಮುನ್ಸೂಚನೆ ನೀಡಿದೆ. ಅಮೆರಿಕಾದಲ್ಲಿ ಮಾರ್ಚ್ನಿಂದ ಅಕ್ಟೋಬರ್ ತನಕ ಪ್ರತಿ ತಿಂಗಳು ದಾಖಲಾದ ಸೋಂಕಿತರಿಗಿಂತ ಹೆಚ್ಚು ಸಂಖ್ಯೆಯ ಸೋಂಕಿತರು ನವೆಂಬರ್ನಲ್ಲಿ ಈಗಾಗಲೇ ಕಂಡುಬಂದಿದ್ದಾರೆ. ನವೆಂಬರ್ 1ರಿಂದ 22ರ ನಡುವೆ 3 ಮಿಲಿಯನ್ಗೂ ಅಧಿಕ ಮಂದಿ ಸೋಂಕಿಗೆ ತುತ್ತಾಗಿದ್ದಾರೆ ಎಂದು ಅಮೆರಿಕಾದ ಜಾನ್ಸ್ ಹಾಪ್ಕಿನ್ಸ್ ಯುನಿವರ್ಸಿಟಿ ಮಾಹಿತಿ […]

ಅಪಾಯದ ಹೊಸ್ತಿಲಲ್ಲಿ.. ಅಮೆರಿಕನ್ನರು!
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on:Nov 23, 2020 | 1:23 PM

Share

ಅಮೆರಿಕಾದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದೆ. ನವೆಂಬರ್ ತಿಂಗಳು ಮುಗಿಯಲು ಇನ್ನೂ ಹತ್ತು ದಿನ ಇರುವಾಗಲೇ ವಿಜ್ಞಾನಿಗಳ ತಂಡ ಸ್ಫೋಟಕ ಮಾಹಿತಿಯೊಂದನ್ನು ಹೊರಹಾಕುವ ಮೂಲಕ ಅಪಾಯದ ಮುನ್ಸೂಚನೆ ನೀಡಿದೆ. ಅಮೆರಿಕಾದಲ್ಲಿ ಮಾರ್ಚ್ನಿಂದ ಅಕ್ಟೋಬರ್ ತನಕ ಪ್ರತಿ ತಿಂಗಳು ದಾಖಲಾದ ಸೋಂಕಿತರಿಗಿಂತ ಹೆಚ್ಚು ಸಂಖ್ಯೆಯ ಸೋಂಕಿತರು ನವೆಂಬರ್ನಲ್ಲಿ ಈಗಾಗಲೇ ಕಂಡುಬಂದಿದ್ದಾರೆ.

ನವೆಂಬರ್ 1ರಿಂದ 22ರ ನಡುವೆ 3 ಮಿಲಿಯನ್ಗೂ ಅಧಿಕ ಮಂದಿ ಸೋಂಕಿಗೆ ತುತ್ತಾಗಿದ್ದಾರೆ ಎಂದು ಅಮೆರಿಕಾದ ಜಾನ್ಸ್ ಹಾಪ್ಕಿನ್ಸ್ ಯುನಿವರ್ಸಿಟಿ ಮಾಹಿತಿ ನೀಡಿದೆ. ಪರೀಕ್ಷಾ ಪ್ರಮಾಣ ಹೆಚ್ಚಾಗಿರುವುದು ಇದಕ್ಕೆ ಕಾರಣ ಎಂಬ ಅಭಿಪ್ರಾಯ ಕೇಳಿಬರುತ್ತಿದೆಯಾದರೂ ಒಂದೇ ವಾರದಲ್ಲಿ ಸೋಂಕಿತರ ಸಂಖ್ಯೆ ಶೇಕಡಾ 25ರಷ್ಟು ಹೆಚ್ಚಾಗಿರುವುದು ಮತ್ತು 44 ರಾಜ್ಯಗಳಲ್ಲಿ ಲೆಕ್ಕಾಚಾರಕ್ಕಿಂತ ಶೇಕಡಾ 5ರಷ್ಟು ಅಧಿಕ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗುತ್ತಿರುವುದು ಅಪಾಯಕಾರಿ ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದಂತೆಯೇ ಆಸ್ಪತ್ರೆಗಳಲ್ಲಿ ಬೆಡ್ ಕೊರತೆ ಕಂಡುಬರುತ್ತಿದೆ. ಇದು ವ್ಯವಸ್ಥೆಯ ಮೇಲೆ ಅಧಿಕ ಒತ್ತಡವನ್ನು ಉಂಟುಮಾಡುತ್ತಿದ್ದು ಆರೋಗ್ಯದ ವಿಚಾರದಲ್ಲಿ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ದಟ್ಟವಾಗಿದೆ. ಕೆಲವು ಆಸ್ಪತ್ರೆಯ ಮುಖ್ಯಸ್ಥರು ಸಿಬ್ಬಂದಿಗಳ ಕೊರತೆ ಕುರಿತು ಈಗಾಗಲೇ ಅಮೆರಿಕಾದ ವೈದ್ಯಕೀಯ ಸಂಘಗಳನ್ನು ಎಚ್ಚರಿಸಿದ್ದು ಪರಿಸ್ಥಿತಿ ಹೀಗೇ ಮುಂದುವರೆದಲ್ಲಿ ಅತ್ಯಂತ ಕಟ್ಟ ದಿನಗಳನ್ನು ನೋಡಬೇಕಾಗಬಹುದು ಎಂದಿದ್ದಾರೆ.

ಇದು ಮನೆಯಲ್ಲೇ ಕುಳಿತು ಎಚ್ಚರಿಕೆ ತೆಗೆದುಕೊಳ್ಳಬೇಕಾದ ವರ್ಷವಾಗಿದೆ. ಯಾವುದೇ ಪರಿಸ್ಥಿತಿಯಲ್ಲಿ ನಿಮಗೆ ಸೋಂಕು ತಗುಲಬಹುದು ಅಥವಾ ನೀವು ಇನ್ನೊಬ್ಬರಿಗೆ ಸೋಂಕು ಹರಡಿಸಲು ಕಾರಣವಾಗಬಹುದು ಆದ್ದರಿಂದ ಮೈಮರೆಯುವುದು ಜೀವಕ್ಕೆ ಅಪಾಯ ಎಂದು ತಜ್ಞರು ಪದೇಪದೇ ಜನರನ್ನು ಎಚ್ಚರಿಸುತ್ತಿದ್ದಾರೆ. ಅಮೆರಿಕಾದಲ್ಲಿ ಇದುವರೆಗೂ 12.2 ಮಿಲಿಯನ್ಗೂ ಅಧಿಕ ಮಂದಿ ಸೋಂಕಿಗೆ ತುತ್ತಾಗಿದ್ದು 2,56,000ಕ್ಕೂ ಹೆಚ್ಚು ಜನರನ್ನು ಕೊರೊನಾ ಬಲಿಪಡೆದಿದೆ. ಅಮೆರಿಕನ್ನರಿಗೆ ಲಸಿಕೆ ಲಭ್ಯವಾಗುವ ನಿರೀಕ್ಷೆ ಇದೆಯಾದರೂ ಅದು ನಿರ್ದಿಷ್ಟ ಪ್ರಮಾಣದಲ್ಲಿ ಮಾತ್ರ ಉತ್ಪಾದನೆ ಆಗುವುದರಿಂದ ಅಪಾಯವನ್ನು ನಿರ್ಲಕ್ಷಿಸುವಂತಿಲ್ಲ ಎಂಬುದು ತಜ್ಞರ ಅಂಬೋಣ.

Published On - 1:20 pm, Mon, 23 November 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ