AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಲಿಕೆಯಲ್ಲಿ ಶಾಸಕ-ಕಾರ್ಪೊರೇಟರ್ ಮಧ್ಯೆ ಮಾತಿನ ಚಕಮಕಿ, ವಿಷಯ ಏನು?

ಬೆಂಗಳೂರು: ಜೆಡಿಎಸ್ ಶಾಸಕ ಹಾಗೂ ಹಿರಿಯ ಬಿಜೆಪಿ ಕಾರ್ಪೊರೇಟರ್ ನಡುವೆ ಆಂಬ್ಯುಲೆನ್ಸ್​ಗಳ ವಿಷಯದಲ್ಲಿ ಶುರುವಾದ ವಾಗ್ವಾದ, ಹೊಡೆದಾಟದ ಹಂತ ತಲುಪಿದ ಪ್ರಸಂಗ ಬೆಂಗಳೂರು ಮಹಾನಗರ ಪಾಲಿಕೆಯ ಆವರಣದಲ್ಲಿ ಮಂಗಳವಾರದಂದು ನಡೆಯಿತು. ವಾಸ್ತವದಲ್ಲಿ, ವಾದ-ವಿವಾದ ಆರಂಭಗೊಂಡಿದ್ದು ಶಾಸಕ ರಮೇಶ್ ಗೌಡ ಹಾಗೂ ಮೇಯರ್ ಗೌತಮ್ ಕುಮಾರ್ ಮಧ್ಯೆ. ಕೊವಿಡ್ ನಿಯಂತ್ರಣಕ್ಕೆ ಸಂಬಂಧಿಸಿದ ಚರ್ಚೆ ನಡೆಯುತ್ತಿದ್ದಾಗ ರಮೇಶ್, ಸೋಂಕಿತರನ್ನು ಆಸ್ಪತ್ರೆಗೆ ಕರೆದೊಯ್ಯಲು ಪಾಲಿಕೆಯಲ್ಲಿ ಆಂಬುಲೆನ್ಸ್​ಗಳಿಲ್ಲ ಎಂದು ಹೇಳಿದರು. ಆವರ ಆರೋಪದಿಂದ ಕೊಂಚ ಸಂಯಮ ಕಳೆದುಕೊಂಡ ಮೇಯರ್, ಪಾಲಿಕೆಯಲ್ಲಿ 700 ಆಂಬುಲೆನ್ಸ್​ಗಳಿವೆ […]

ಪಾಲಿಕೆಯಲ್ಲಿ ಶಾಸಕ-ಕಾರ್ಪೊರೇಟರ್ ಮಧ್ಯೆ ಮಾತಿನ ಚಕಮಕಿ, ವಿಷಯ ಏನು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 30, 2020 | 3:08 PM

Share

ಬೆಂಗಳೂರು: ಜೆಡಿಎಸ್ ಶಾಸಕ ಹಾಗೂ ಹಿರಿಯ ಬಿಜೆಪಿ ಕಾರ್ಪೊರೇಟರ್ ನಡುವೆ ಆಂಬ್ಯುಲೆನ್ಸ್​ಗಳ ವಿಷಯದಲ್ಲಿ ಶುರುವಾದ ವಾಗ್ವಾದ, ಹೊಡೆದಾಟದ ಹಂತ ತಲುಪಿದ ಪ್ರಸಂಗ ಬೆಂಗಳೂರು ಮಹಾನಗರ ಪಾಲಿಕೆಯ ಆವರಣದಲ್ಲಿ ಮಂಗಳವಾರದಂದು ನಡೆಯಿತು.

ವಾಸ್ತವದಲ್ಲಿ, ವಾದ-ವಿವಾದ ಆರಂಭಗೊಂಡಿದ್ದು ಶಾಸಕ ರಮೇಶ್ ಗೌಡ ಹಾಗೂ ಮೇಯರ್ ಗೌತಮ್ ಕುಮಾರ್ ಮಧ್ಯೆ. ಕೊವಿಡ್ ನಿಯಂತ್ರಣಕ್ಕೆ ಸಂಬಂಧಿಸಿದ ಚರ್ಚೆ ನಡೆಯುತ್ತಿದ್ದಾಗ ರಮೇಶ್, ಸೋಂಕಿತರನ್ನು ಆಸ್ಪತ್ರೆಗೆ ಕರೆದೊಯ್ಯಲು ಪಾಲಿಕೆಯಲ್ಲಿ ಆಂಬುಲೆನ್ಸ್​ಗಳಿಲ್ಲ ಎಂದು ಹೇಳಿದರು. ಆವರ ಆರೋಪದಿಂದ ಕೊಂಚ ಸಂಯಮ ಕಳೆದುಕೊಂಡ ಮೇಯರ್, ಪಾಲಿಕೆಯಲ್ಲಿ 700 ಆಂಬುಲೆನ್ಸ್​ಗಳಿವೆ ಎಂದು ಜೋರು ದನಿಯಲ್ಲಿ ಹೇಳಿದರು.

‘ಸುಮ್ಸುಮ್ನೆ ಓಳು ಬಿಡಬೇಡಿ, ತಂದು ನಿಲ್ಲಿಸಿ ನೋಡೋಣ’ ಎಂದು ರಮೇಶ್ ಗೌಡ ಸವಾಲು ಹಾಕಿದರು. ಗೌಡರ ಮಾತಿನಿಂದ ರೊಚ್ಚಿಗೆದ್ದ ಪಾಲಿಕೆಯ ಹಿರಿಯ ಬಿಜೆಪಿ ಸದಸ್ಯ ಪದ್ಮನಾಭರೆಡ್ಡಿ, ಅವರ ಮೇಲೆ ಏರಿಹೋದರು. ತನ್ನನ್ನು ತಡೆಯಲು ಬಂದವರ ಮೇಲೂ ಕೋಪ ಕಾರಿದರು. ಅವರಿಬ್ಬರ ನಡುವೆ ಶುರುವಾದ ಮಾತಿನ ಚಕಮಕಿ ಕೈ-ಕೈ ಮಿಲಾಯಿಸುವ ಹಂತ ಸಹ ತಲುಪಿತ್ತು. ಕೂಡಲೇ ಮಧ್ಯೆ ಪ್ರವೇಶಿಸಿದ ಇತರ ಸದಸ್ಯರು, ಆವೇಶದಿಂದ ಕೂಗಾಡುತ್ತಿದ್ದ ಗೌಡ ಹಾಗೂ ರೆಡ್ಡಿಯನ್ನು ಸಮಾಧಾನಪಡಿಸಿದರು.

Published On - 6:13 pm, Tue, 28 July 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ