ಆರೋಪಿ ಅಮೂಲ್ಯಾಗೆ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು: ನಗರದ ಫ್ರೀಡಂ ಪಾರ್ಕ್​ನಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿ ದೇಶ ದ್ರೋಹ ಅರೋಪದಲ್ಲಿ ಬಂಧನಳಾಗಿದ್ದ ಅಮೂಲ್ಯಾ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಇಂದು ಅಮೂಲ್ಯಾ ನ್ಯಾಯಂಗ ಬಂಧನ ಮುಕ್ತಾಯವಾಗಿತ್ತು ಈ ಹಿನ್ನೆಲೆ ಐದನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿತ್ತು. ವಿಡಿಯೋ ಕಾನ್ಫರೆನ್ಸ್ ಮೂಲಕ ಪರಪ್ಪನ ಅಗ್ರಹಾರದಿಂದಲೇ ಆರೋಪಿ ಅಮೂಲ್ಯಾಳನ್ನು ಹಾಜರು ಪಡಿಸಲಾಗಿದೆ. ಅಮೂಲ್ಯಾ ಪರ ವಕೀಲರು ಬೇಲ್ ಅರ್ಜಿ ಹಿಂಪಡೆದಿದ್ದಾರೆ. ಎಸಿಎಂಎಂ ನ್ಯಾಯಾಲಯ ಮಾರ್ಚ್ 18ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ ಎಂದು ಆದೇಶ […]

ಆರೋಪಿ ಅಮೂಲ್ಯಾಗೆ ನ್ಯಾಯಾಂಗ ಬಂಧನ ವಿಸ್ತರಣೆ
ಸಾಧು ಶ್ರೀನಾಥ್​

Updated on: Mar 05, 2020 | 3:03 PM

ಬೆಂಗಳೂರು: ನಗರದ ಫ್ರೀಡಂ ಪಾರ್ಕ್​ನಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿ ದೇಶ ದ್ರೋಹ ಅರೋಪದಲ್ಲಿ ಬಂಧನಳಾಗಿದ್ದ ಅಮೂಲ್ಯಾ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಇಂದು ಅಮೂಲ್ಯಾ ನ್ಯಾಯಂಗ ಬಂಧನ ಮುಕ್ತಾಯವಾಗಿತ್ತು ಈ ಹಿನ್ನೆಲೆ ಐದನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿತ್ತು.

ವಿಡಿಯೋ ಕಾನ್ಫರೆನ್ಸ್ ಮೂಲಕ ಪರಪ್ಪನ ಅಗ್ರಹಾರದಿಂದಲೇ ಆರೋಪಿ ಅಮೂಲ್ಯಾಳನ್ನು ಹಾಜರು ಪಡಿಸಲಾಗಿದೆ. ಅಮೂಲ್ಯಾ ಪರ ವಕೀಲರು ಬೇಲ್ ಅರ್ಜಿ ಹಿಂಪಡೆದಿದ್ದಾರೆ. ಎಸಿಎಂಎಂ ನ್ಯಾಯಾಲಯ ಮಾರ್ಚ್ 18ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ ಎಂದು ಆದೇಶ ನೀಡಿದೆ.

Published On - 2:34 pm, Thu, 5 March 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us