AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ವೀಟ್​ ಮೂಲಕ ಆಸ್ಟ್ರೇಲಿಯನ್ನರ ಕೆನ್ನೆಗೆ ನಯವಾಗಿಯೇ ಬಾರಿಸಿದ ಆನಂದ್ ಮಹೀಂದ್ರಾ! ಏನದು?

ಇವರು ತಮ್ಮ ಮಾತುಗಳನ್ನು ಹೇಗೆ ತಿನ್ನಲು ಬಯಸುತ್ತಾರೆ? ಬೇಯಿಸಿದ, ಹುರಿದ ದೋಸಾ ಅಥವಾ ಚಪಾತಿಯಲ್ಲಿ ಸುರುಳಿ ಸುತ್ತುಕೊಂಡು ತಿನ್ನುತ್ತಾರಾ ಎಂದು ತಮಾಷೆಯಾಗಿ ಕೇಳಿದ್ದಾರೆ.

ಟ್ವೀಟ್​ ಮೂಲಕ ಆಸ್ಟ್ರೇಲಿಯನ್ನರ ಕೆನ್ನೆಗೆ ನಯವಾಗಿಯೇ ಬಾರಿಸಿದ ಆನಂದ್ ಮಹೀಂದ್ರಾ! ಏನದು?
ಆನಂದ್​ ಮಹೀಂದ್ರಾ
ಪೃಥ್ವಿಶಂಕರ
| Edited By: |

Updated on: Jan 21, 2021 | 12:32 PM

Share

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದ ಐತಿಹಾಸಿಕ ವಿಜಯದ ನಂತರ ಪ್ರಧಾನಿ ಮೋದಿ ಸೇರಿದಂತೆ ಹಲವಾರು ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. ಆದರೆ ಇವುಗಳ ನಡುವೆ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.

ಆನಂದ್​ ಮಹೀಂದ್ರಾ ಭಾರತದ ದೊಡ್ಡ ಉದ್ಯಮಿ. ಆದರೆ ತಮ್ಮ ಸರಳತೆಯಿಂದ ಜಗದ ಗಮನ ಸೆಳೆದವರು. ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಮಹೀಂದ್ರಾ, ಸಾಮಾನ್ಯ ಜನರ ಕಷ್ಟಗಳಿಗೆ ಬಹುಬೇಗನೆ ಸ್ಪಂದಿಸುವ ವ್ಯಕ್ತಿಯಾಗಿದ್ದಾರೆ.

ಮಾಜಿ ಕ್ರಿಕೆಟಿಗರು ಟೀಂ ಇಂಡಿಯಾವನ್ನು ತೆಗಳಲು ಶುರುಮಾಡಿದ್ದರು.. ಆಸಿಸ್​ ಪ್ರವಾಸದಲ್ಲಿದ್ದ ಟೀಂ ಇಂಡಿಯಾ ಆಟಗಾರರು ಗಾಯದ ಸಮಸ್ಯೆಯಿಂದಾಗಿ ಒಬ್ಬೊಬ್ಬರಾಗಿಯೇ ತಂಡದಿಂದ ಹೊರ ನಡೆಯಲು ಪ್ರಾರಂಭಿಸಿದ್ದರು. ಅಲ್ಲದೆ ನಾಯಕ ಕೊಹ್ಲಿ ಸಹ ಪಿತೃತ್ವದ ರಜೆ ಪಡೆದು ಭಾರತಕ್ಕೆ ವಾಪಾಸ್ಸಾಗಿದ್ದರು. ಇದನ್ನು ಗಮನಿಸಿದ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗರು ಟೀಂ ಇಂಡಿಯಾವನ್ನು ತೆಗಳಲು ಶುರು ಮಾಡಿದ್ದರು. ಅವರ ವ್ಯಂಗ್ಯೋಕ್ತಿಗಳು ತೀರಾ ತಳಮಟ್ಟ ತಲುಪಿದ್ದವು. ಹೇಳಬೇಕು ಅಂದ್ರೆ ಕೊಹ್ಲಿ ಇಲ್ಲದ ಟೀಂ ಇಂಡಿಯಾ ಆಸ್ಟ್ರೇಲಿಯಾ ನೆಲದಲ್ಲಿ ಹೀನಾಯವಾಗಿ ಸೋಲಲಿದೆ ಎಂದೇ ಬಿಂಬಿಸಿದ್ದರು.

ಅದರಲ್ಲೂ ಆಸ್ಟ್ರೇಲಿಯಾದ ಕ್ರಿಕೆಟ್ ತಂಡದ ಮಾಜಿ ನಾಯಕರಾದ ಮೈಕೆಲ್ ಕ್ಲಾರ್ಕ್, ರಿಕಿ ಪಾಂಟಿಂಗ್, ಮಾರ್ಕ್ ವಾ, ಆಸ್ಟ್ರೇಲಿಯಾದ ಮಾಜಿ ಕೀಪರ್ ಬ್ರಾಡ್ ಹ್ಯಾಡಿನ್ ಮತ್ತು ಮಾಜಿ ಇಂಗ್ಲೆಂಡ್ ಕ್ರಿಕೆಟ್ ತಂಡದ ನಾಯಕ ಮೈಕೆಲ್ ವಾನ್ ಟೀಂ ಇಂಡಿಯಾವನ್ನು ಇನ್ನಿಲ್ಲದಂತೆ ತೆಗಳಿದರು.

ಅದರಲ್ಲೂ ಆಸಿಸ್​ ನಾಯಕ ಮೈಕೆಲ್ ಕ್ಲಾರ್ಕ್, ಮುಂದಿನ 2 ಟೆಸ್ಟ್​ಗಳಲ್ಲಿ ವಿರಾಟ್​ ಕೊಹ್ಲಿ ಇಲ್ಲದ ಟೀಂ ಇಂಡಿಯಾದ ಬ್ಯಾಟಿಂಗ್​ ವಿಭಾಗವನ್ನು ಊಹೆ ಕೂಡ ಮಾಡಲಾಗದು. ಟೀಂ ಇಂಡಿಯಾ ದೊಡ್ಡ ತೊಂದರೆಯಲ್ಲಿ ಸಿಕ್ಕಿಕೊಂಡಿದೆ ಎಂದು ಟ್ವೀಟ್​ ಮಾಡಿದ್ದರು.

ಟೀಂ ಇಂಡಿಯಾವನ್ನು ವೈಟ್​ವಾಶ್​ ಮಾಡಲು ಒಳ್ಳೆಯ ಅವಕಾಶ ಸಿಕ್ಕಿದೆ ಎಂದೂ ಹೇಳಿದ್ದರು.. ಇದಕ್ಕೂ ಒಂದು ಹೆಜ್ಜೆ ಮುಂದೆ ಹೋಗಿ ಮಾತಾನಾಡಿದ ಆಸಿಸ್​ ಮಾಜಿ ನಾಯಕ ರಿಕಿ ಪಾಂಟಿಂಗ್ ಕೊಹ್ಲಿ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾವನ್ನು ವೈಟ್​ವಾಶ್​ ಮಾಡಲು ಒಳ್ಳೆಯ ಅವಕಾಶ ಸಿಕ್ಕಿದೆ. ಹೀಗಾಗಿ ಮೊದಲ ಟೆಸ್ಟ್​ನ ಹೀನಾಯ ಸೋಲಿನಿಂದ ಟೀಂ ಇಂಡಿಯಾವನ್ನು ಮೇಲೆತ್ತುವವರು ಯಾರೂ ಇಲ್ಲ ಎಂದು ಜರಿದಿದ್ದರು.

ಸರಣಿಯ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ, ಆಸ್ಟ್ರೇಲಿಯಾವನ್ನು ಮೂರು ವಿಕೆಟ್‌ಗಳಿಂದ ಸೋಲಿಸುತ್ತಿದ್ದಂತೆ, ಟೀಂ ಇಂಡಿಯಾವನ್ನು ಟೀಕಿಸಿದವರ ಕೆನ್ನೆಗೆ ನಯವಾಗಿಯೇ ಹೊಡೆಯುವ ಕೆಲಸವನ್ನು ಆನಂದ್ ಮಹೀಂದ್ರಾ ತಮ್ಮ ಟ್ವೀಟ್​ ಮೂಲಕ ಮಾಡಿದ್ದಾರೆ.

ಆನಂದ್​ ಮಹೀಂದ್ರಾ ಟ್ವೀಟ್​ಗೆ ಭಾರಿ ಮೆಚ್ಚುಗೆ.. ಟ್ವಿಟರ್‌ನಲ್ಲಿ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್‌ನ ಮಾಜಿ ಕ್ರಿಕೆಟ್ ಆಟಗಾರರು ನೀಡಿದ ಹೇಳಿಕೆಗಳನ್ನು ಹಂಚಿಕೊಂಡಿರುವ ಮಹೀಂದ್ರಾ, ಇವರು ತಮ್ಮ ಮಾತುಗಳನ್ನು ಹೇಗೆ ತಿನ್ನಲು ಬಯಸುತ್ತಾರೆ? ಬೇಯಿಸಿದ, ಹುರಿದ ದೋಸಾ ಅಥವಾ ಚಪಾತಿಯಲ್ಲಿ ಸುರುಳಿ ಸುತ್ತುಕೊಂಡು ತಿನ್ನುತ್ತಾರಾ ಎಂದು ತಮಾಷೆಯಾಗಿ ಕೇಳಿದ್ದಾರೆ. ಮಹೀಂದ್ರಾ ಅವರ ಈ ಟ್ವೀಟ್​ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

ಧರ್ಮಸ್ಥಳದ ದೇಸಿ ಕಾರ್ ಮುಂದೆ ಟೆಸ್ಲಾದ ಎಲೆಕ್ಟ್ರಿಕ್ ಕಾರೂ ಮಂಡಿಯೂರುವುದೇ! ಕಾಲೆಳೆದ ಆನಂದ್ ಮಹೀಂದ್ರಾ ​

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್