
ಮೈಸೂರು: ಸಂಸ್ಕೃತ ಪಾಠ ಶಾಲೆಯ ಕಾರ್ಯದರ್ಶಿ ಕೊಲೆ ಕೇಸ್ಗೆ ಸಂಬಂಧಿಸಿದಂತೆ ಖ್ಯಾತ ಗಾಯಕಿ ಅನನ್ಯಾ ಭಟ್ ತಂದೆ ವಿಶ್ವನಾಥ ಭಟ್ (52) ಬಂಧನವಾಗಿದೆ. ಸಂಸ್ಕೃತ ಪಾಠ ಶಾಲೆಯ ಕಾರ್ಯದರ್ಶಿಯಾಗಿದ್ದ ನಿವೃತ್ತ ಪ್ರೊಫೆಸರ್ ಪರಶಿವಮೂರ್ತಿ ಕೊಲೆ ಕೇಸ್ನಲ್ಲಿ ವಿಶ್ವನಾಥ ಭಟ್ ಅರೆಸ್ಟ್ ಆಗಿದ್ದಾರೆ.
ಪರಶಿವಮೂರ್ತಿ ಪ್ರತಿ ತಿಂಗಳು ಕಮಿಷನ್ಗಾಗಿ ವಿಶ್ವನಾಥ ಭಟ್ರನ್ನು ಪೀಡಿಸುತ್ತಿದ್ದರು ಎಂದು ಹೇಳಲಾಗಿದೆ. ಜೊತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ಸಹ ನೀಡುತ್ತಿದ್ದರಂತೆ. ಇದರಿಂದ ಮನನೊಂದು ಅನನ್ಯಾ ಭಟ್ ತಂದೆ ವಿಶ್ವನಾಥ್ ಭಟ್ರಿಂದ ಕೊಲೆಗೆ ಸುಪಾರಿ ನೀಡಲಾಗಿತ್ತು ಎಂದು ಹೇಳಲಾಗಿದೆ.
ಸಂಸ್ಕೃತ ಪಾಠಶಾಲೆ ಕಾರ್ಯದರ್ಶಿ ಕೊಲೆ ಕೇಸ್: ಮೈಸೂರು ಪೊಲೀಸರ ಭರ್ಜರಿ ಬೇಟೆ, ಗಾಯಕಿ ಅನನ್ಯಾ ಭಟ್ ತಂದೆ ಸೆರೆ
Published On - 1:18 pm, Wed, 28 October 20