ನಿನ್ನೆ ಚಕ್ಕರ್, ಇಂದು ಹಾಜರ್: ಪಣಂಬೂರು ಠಾಣೆಗೆ ಬಂದ ಅನುಶ್ರೀ

ಮಂಗಳೂರು: ಡ್ರಗ್ಸ್​ ಕೇಸ್​ನಲ್ಲಿ ಸಿಸಿಬಿಯಿಂದ ನೋಟಿಸ್ ಬಂದಿರುವ ಹಿನ್ನೆಲೆಯಲ್ಲಿ ನಟಿ, ನಿರೂಪಕಿ ಅನುಶ್ರೀ ಇಂದು ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. ನಿನ್ನೆಯೇ ಅನುಶ್ರೀ ವಿಚಾರಣೆಗೆ ಹಾಜರಾಗಬೇಕಿತ್ತು.ಅದಕ್ಕೆಂದೇ ನಿನ್ನೆ ಬೆಳಗಿನ ಜಾವಲ್ಲಿ ಬೆಂಗಳೂರಿನಿಂದ ಹೊರಟಿದ್ದರು. ಆದ್ರೆ ಮಂಗಳೂರು ತಲುಪಿದ ಮೇಲೆ ನಿನ್ನೆ ವಿಚಾರಣೆಗೆ ಹಾಜರಾಗದೆ ಇಂದು ಬೆಳಗ್ಗೆಯೇ ತನಿಖಾಧಿಕಾರಿಗಳ ಎದುರು ಉಪಸ್ಥಿತರಾಗಿದ್ದಾರೆ. ಡಿಸಿಪಿ ವಿನಯ್ ಗಾಂವ್ಕರ್ ಕೂಡ ಕಚೇರಿಗೆ ಆಗಮಿಸಿದ್ದಾರೆ. ಪಣಂಬೂರಿನಲ್ಲಿರುವ ಉತ್ತರ ಎಸಿಪಿ ಕಚೇರಿಯಲ್ಲಿ ಎಸಿಪಿ ಬೆಳ್ಳಿಯಪ್ಪ ನೇತೃತ್ವದ ತಂಡದಿಂದ ನಿರೂಪಕಿ ಅನುಶ್ರೀ ವಿಚಾರಣೆ‌ ನಡೆಯುತ್ತಿದೆ. ಇನ್ನು, ತನಿಖಾ […]

ನಿನ್ನೆ ಚಕ್ಕರ್, ಇಂದು ಹಾಜರ್: ಪಣಂಬೂರು ಠಾಣೆಗೆ ಬಂದ ಅನುಶ್ರೀ
ಸಾಧು ಶ್ರೀನಾಥ್​

Updated on: Sep 26, 2020 | 9:52 AM

ಮಂಗಳೂರು: ಡ್ರಗ್ಸ್​ ಕೇಸ್​ನಲ್ಲಿ ಸಿಸಿಬಿಯಿಂದ ನೋಟಿಸ್ ಬಂದಿರುವ ಹಿನ್ನೆಲೆಯಲ್ಲಿ ನಟಿ, ನಿರೂಪಕಿ ಅನುಶ್ರೀ ಇಂದು ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. ನಿನ್ನೆಯೇ ಅನುಶ್ರೀ ವಿಚಾರಣೆಗೆ ಹಾಜರಾಗಬೇಕಿತ್ತು.ಅದಕ್ಕೆಂದೇ ನಿನ್ನೆ ಬೆಳಗಿನ ಜಾವಲ್ಲಿ ಬೆಂಗಳೂರಿನಿಂದ ಹೊರಟಿದ್ದರು. ಆದ್ರೆ ಮಂಗಳೂರು ತಲುಪಿದ ಮೇಲೆ ನಿನ್ನೆ ವಿಚಾರಣೆಗೆ ಹಾಜರಾಗದೆ ಇಂದು ಬೆಳಗ್ಗೆಯೇ ತನಿಖಾಧಿಕಾರಿಗಳ ಎದುರು ಉಪಸ್ಥಿತರಾಗಿದ್ದಾರೆ. ಡಿಸಿಪಿ ವಿನಯ್ ಗಾಂವ್ಕರ್ ಕೂಡ ಕಚೇರಿಗೆ ಆಗಮಿಸಿದ್ದಾರೆ.

ಪಣಂಬೂರಿನಲ್ಲಿರುವ ಉತ್ತರ ಎಸಿಪಿ ಕಚೇರಿಯಲ್ಲಿ ಎಸಿಪಿ ಬೆಳ್ಳಿಯಪ್ಪ ನೇತೃತ್ವದ ತಂಡದಿಂದ ನಿರೂಪಕಿ ಅನುಶ್ರೀ ವಿಚಾರಣೆ‌ ನಡೆಯುತ್ತಿದೆ. ಇನ್ನು, ತನಿಖಾ ಕೊಠಡಿಗೆ ಕರೆದುಕೊಂಡು ಹೋಗುವ ಮುನ್ನ.. ಎಂಟ್ರೆನ್ಸ್ ನಲ್ಲಿ ಟಿವಿ9 ವೀಕ್ಷಣೆ ಮಾಡಿದ ಅನುಶ್ರೀ. ಪೊಲೀಸ್ ಠಾಣೆಯಲ್ಲಿ ಹಾಕಿದ್ದ ಟಿವಿ ನೋಡಿ ಅನುಶ್ರೀ ಒಳ ಹೋದರು.


Published On - 9:36 am, Sat, 26 September 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us