AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಧಿ ತೆಗೆಯುವಾಗ ಕುಸಿದ ಪುರಾತನ ಮಂಟಪ: ಒಬ್ಬ ನಿಧಿಗಳ್ಳ ಸ್ಥಳದಲ್ಲೆ ಸಾವು.. ಎಲ್ಲಿ?

ಬೆಂಗಳೂರು: ನಿಧಿ ತೆಗೆಯಲು ಬಂದ ವೇಳೆ ಪುರಾತನ ಕಾಲದ ಮಂಟಪ ಕುಸಿದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ಹೊಸಕೋಟೆಯಲ್ಲಿ ನಡೆದಿದೆ. ಹೊಸಕೋಟೆ ತಾಲೂಕಿನ ಹಿಂಡಿಗನಾಳ ಗ್ರಾಮದಲ್ಲಿ ಕಳೆದ ರಾತ್ರಿ 8 ಜನರ ತಂಡ ನಿಧಿ ತೆಗೆಯಲು ದೇವಸ್ಥಾನದ ಬಳಿ ಬಂದಿದ್ದಾರೆ. ಈ ವೇಳೆ ಭೂಮಿ ಅಗೆತದ ತೀವ್ರತೆಯಿಂದ ಪುರಾತನ ಕಾಲದ ಮಂಟಪ ಕುಸಿದು ಓರ್ವ ಪಟ್ಟಿದ್ದಾನೆ. ಹಿಂಡಿಗನಾಳ ಗ್ರಾಮದ ಸುರೇಶ್ ಸ್ಥಳದಲ್ಲಿಯೇ ಮೃತಪಟ್ಟ ನಿಧಿಗಳನಾಗಿದ್ದು, ಆತನ ಜೊತೆಯಲ್ಲಿದ್ದ ಶ್ರೀನಿವಾಸ್, ಮಂಜುನಾಥ್ ಮತ್ತು ಸಬಾಸಿನ್ […]

ನಿಧಿ ತೆಗೆಯುವಾಗ ಕುಸಿದ ಪುರಾತನ ಮಂಟಪ: ಒಬ್ಬ ನಿಧಿಗಳ್ಳ ಸ್ಥಳದಲ್ಲೆ ಸಾವು.. ಎಲ್ಲಿ?
ಸಾಧು ಶ್ರೀನಾಥ್​
|

Updated on: Aug 07, 2020 | 10:51 AM

Share

ಬೆಂಗಳೂರು: ನಿಧಿ ತೆಗೆಯಲು ಬಂದ ವೇಳೆ ಪುರಾತನ ಕಾಲದ ಮಂಟಪ ಕುಸಿದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ಹೊಸಕೋಟೆಯಲ್ಲಿ ನಡೆದಿದೆ.

ಹೊಸಕೋಟೆ ತಾಲೂಕಿನ ಹಿಂಡಿಗನಾಳ ಗ್ರಾಮದಲ್ಲಿ ಕಳೆದ ರಾತ್ರಿ 8 ಜನರ ತಂಡ ನಿಧಿ ತೆಗೆಯಲು ದೇವಸ್ಥಾನದ ಬಳಿ ಬಂದಿದ್ದಾರೆ. ಈ ವೇಳೆ ಭೂಮಿ ಅಗೆತದ ತೀವ್ರತೆಯಿಂದ ಪುರಾತನ ಕಾಲದ ಮಂಟಪ ಕುಸಿದು ಓರ್ವ ಪಟ್ಟಿದ್ದಾನೆ.

ಹಿಂಡಿಗನಾಳ ಗ್ರಾಮದ ಸುರೇಶ್ ಸ್ಥಳದಲ್ಲಿಯೇ ಮೃತಪಟ್ಟ ನಿಧಿಗಳನಾಗಿದ್ದು, ಆತನ ಜೊತೆಯಲ್ಲಿದ್ದ ಶ್ರೀನಿವಾಸ್, ಮಂಜುನಾಥ್ ಮತ್ತು ಸಬಾಸಿನ್ ಎಂಬುವನಿಗೆ ಗಂಭೀರ ಗಾಯಗಳಾಗಿವೆ.

ಘಟನೆ ಸಂಬವಿಸುತ್ತಿದ್ದಂತೆ ರಕ್ಷಣೆಗಾಗಿ ನಿಧಿಗಳ್ಳರು ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಆಂಬುಲೆನ್ಸ್ ಸಿಬ್ಬಂದಿ ಈ ವಿಚಾರದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಘಟನೆ ತಿಳಿದು ಉಳಿದವರು ಸ್ಥಳದಿಂದ ಪರಾರಿಯಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ನಂದಗುಡಿ ಪೊಲೀಸ್ ಠಾಣೆಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಉಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ