ಪತ್ನಿಯನ್ನು ಬೆಂಕಿ ಹಚ್ಚಿ ಕೊಲೆ ಮಾಡಿದ್ದ ಅಪರಾಧಿಗೆ 8 ವರ್ಷಗಳ ಬಳಿಕ ಜೀವಾವಧಿ ಶಿಕ್ಷೆ

2014ರಲ್ಲಿ ಹೆಂಡತಿ ಜಬೀನಾಳನ್ನು ಮೌಲಾ ಕೊಲೆ ಮಾಡಿದ್ದ. ತನಗೆ ಕುಡಿಯಲು ಹಣ ನೀಡದ ಕಾರಣ ಹೆಂಡತಿಗೆ ಸೀಮೆಎಣ್ಣೆ ಸುರಿದು ಅಮಾನವೀಯವಾಗಿ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದ. ಈಗ ಈತನಿಗೆ ನ್ಯಾಯಾಧೀಶರಾದ ಸೈಯದ್ ಬಲಿಗೂರ್ ರೆಹಮಾನ್ ರವರು ಜೀವಾವಧಿ ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದ್ದಾರೆ.

ಪತ್ನಿಯನ್ನು ಬೆಂಕಿ ಹಚ್ಚಿ ಕೊಲೆ ಮಾಡಿದ್ದ ಅಪರಾಧಿಗೆ 8 ವರ್ಷಗಳ ಬಳಿಕ ಜೀವಾವಧಿ ಶಿಕ್ಷೆ
ನ್ಯಾಯಾಧೀಶ ಸೈಯದ್ ಬಲಿಗೂರ್ ರೆಹಮಾನ್

Updated on: Mar 17, 2021 | 12:46 PM

ಆನೇಕಲ್: ತನ್ನ ಹೆಂಡತಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ನೀಡಿ ಆನೇಕಲ್‌ನ 3ನೇ ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಮೌಲಾ(45) ಪತ್ನಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ಜೀವಾವಧಿ ಶಿಕ್ಷೆಗೊಳಗಾದ ಆರೋಪಿ. 2014ರಲ್ಲಿ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೊಲೆ ಪ್ರಕರಣ ನಡೆದಿತ್ತು. ಸದ್ಯ ಈಗ 8 ವರ್ಷಗಳ ಬಳಿಕ ಇದಕ್ಕೆ ತೀರ್ಪು ಸಿಕ್ಕಿದೆ.

2014ರಲ್ಲಿ ಹೆಂಡತಿ ಜಬೀನಾಳನ್ನು ಮೌಲಾ ಕೊಲೆ ಮಾಡಿದ್ದ. ತನಗೆ ಕುಡಿಯಲು ಹಣ ನೀಡದ ಕಾರಣ ಹೆಂಡತಿಗೆ ಸೀಮೆಎಣ್ಣೆ ಸುರಿದು ಅಮಾನವೀಯವಾಗಿ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದ. ಈಗ ಈತನಿಗೆ ನ್ಯಾಯಾಧೀಶರಾದ ಸೈಯದ್ ಬಲಿಗೂರ್ ರೆಹಮಾನ್ ರವರು ಜೀವಾವಧಿ ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರಿ ಅಭಿಯೋಜಕರಾಗಿ ಗಣೇಶ್ ನಾಯಕ್ ವಾದ ಮಂಡನೆ ಮಾಡಿದ್ದಾರೆ.

ಇದನ್ನೂ ಓದಿ: Husband Kills Wife: ಬಾಯಿಗೆ ಬಟ್ಟೆ ಇಟ್ಟು ಪತ್ನಿ ಕೊಲೆ ಮಾಡಿದ ಪತಿರಾಯ ಅರೆಸ್ಟ್

Published On - 12:45 pm, Wed, 17 March 21

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
Follow Us