AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹದ ನಡುವೆ ಜೀವನ್ಮರಣ ಹೋರಾಟ, ನಾಲ್ಕುದಿನಗಳಿಂದ ಮರವೇರಿದ ಕೋತಿಯ ಪರದಾಟ

ಕಲಬುರಗಿ: ಪ್ರವಾಹದ ಅಬ್ಬರಕ್ಕೆ ಉತ್ತರ ಕರ್ನಾಟಕದ ಪರಿಸ್ಥಿತಿ ತತ್ತರಿಸಿದೆ. ನೆರೆಯಿಂದಾಗಿ ಜನ ಬೀದಿಗೆ ಬಿದ್ದಿದ್ದಾರೆ. ನೆರೆಯಿಂದಾಗಿ ಕೋಟ್ಯಾಂತರ ರೂ ಬೆಲೆ ಬಾಡುವ ಆಸ್ತಿ ಪಾಸ್ತಿ ಹಾನಿಯಾಗಿದೆ. ಜನರ ನೋವುಗಳೇ ಬಂದು ಕಡೆಯಾದ್ರೆ ಪ್ರವಾಹದಲ್ಲಿ ಮೂಕ ಪ್ರಾಣಿಗಳ ರೋದನೆ ಕೇಳೋರೆ ಇಲ್ಲ. ತಮ್ಮ ಮಾಲೀಕನಿಂದ ದೂರವಾಗಿ ಊಟ ಆಶ್ರಯವಿಲ್ಲದೆ ಪರಿತಪಿಸುತ್ತಿವೆ. ಮರವೇರಿ ಕುಳಿತ ಕೋತಿ ಮರಿ: ಪ್ರವಾಹಕ್ಕೆ ತತ್ತರಿಸಿರುವ ಕೋತಿ ಮರಿ ಕಳೆದ 4ದಿನದಿಂದ ಅಫಜಲಪುರ ಪಟ್ಟಣದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪಕ್ಕದಲ್ಲಿರುವ ಮರವೇರಿ ಕುಳಿತುಕೊಂಡಿದೆ. ಆಹಾರ […]

ಪ್ರವಾಹದ ನಡುವೆ ಜೀವನ್ಮರಣ ಹೋರಾಟ, ನಾಲ್ಕುದಿನಗಳಿಂದ ಮರವೇರಿದ ಕೋತಿಯ ಪರದಾಟ
ಆಯೇಷಾ ಬಾನು
|

Updated on: Oct 18, 2020 | 3:38 PM

Share

ಕಲಬುರಗಿ: ಪ್ರವಾಹದ ಅಬ್ಬರಕ್ಕೆ ಉತ್ತರ ಕರ್ನಾಟಕದ ಪರಿಸ್ಥಿತಿ ತತ್ತರಿಸಿದೆ. ನೆರೆಯಿಂದಾಗಿ ಜನ ಬೀದಿಗೆ ಬಿದ್ದಿದ್ದಾರೆ. ನೆರೆಯಿಂದಾಗಿ ಕೋಟ್ಯಾಂತರ ರೂ ಬೆಲೆ ಬಾಡುವ ಆಸ್ತಿ ಪಾಸ್ತಿ ಹಾನಿಯಾಗಿದೆ. ಜನರ ನೋವುಗಳೇ ಬಂದು ಕಡೆಯಾದ್ರೆ ಪ್ರವಾಹದಲ್ಲಿ ಮೂಕ ಪ್ರಾಣಿಗಳ ರೋದನೆ ಕೇಳೋರೆ ಇಲ್ಲ. ತಮ್ಮ ಮಾಲೀಕನಿಂದ ದೂರವಾಗಿ ಊಟ ಆಶ್ರಯವಿಲ್ಲದೆ ಪರಿತಪಿಸುತ್ತಿವೆ.

ಮರವೇರಿ ಕುಳಿತ ಕೋತಿ ಮರಿ: ಪ್ರವಾಹಕ್ಕೆ ತತ್ತರಿಸಿರುವ ಕೋತಿ ಮರಿ ಕಳೆದ 4ದಿನದಿಂದ ಅಫಜಲಪುರ ಪಟ್ಟಣದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪಕ್ಕದಲ್ಲಿರುವ ಮರವೇರಿ ಕುಳಿತುಕೊಂಡಿದೆ. ಆಹಾರ ಇಲ್ಲದೆ, ನೀರು ಸಿಗದೆ ಪರದಾಡುತ್ತಿದೆ. ನಾಲ್ಕು ದಿನ ಕಳೆದರೂ ಅರಣ್ಯ ಇಲಾಖೆ ಅಧಿಕಾರಿಗಳು ಕೋತಿ ರಕ್ಷಣೆಗೆ ಮುಂದಾಗಿಲ್ಲ. ಹೀಗಾಗಿ ಮಂಗನನ್ನು ರಕ್ಷಿಸಲು ಯಾವುದೇ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಜೈ ಭೀಮ್ ನಗರ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

2ದಿನದ ಹಿಂದೆ ಕೋತಿ ಮರಿ ಜೊತೆ ತಾಯಿ ಮರಿ ಸಹ ಇತ್ತು ಆದರೆ ಈಗ ಕೇವಲ ಕೋತಿಮರಿ ಮಾತ್ರ ಉಳಿದುಕೊಂಡಿದೆ. ಇನ್ನು ಅಫಜಲಪುರ ತಾಲೂಕಿನ ಘೋಳನೂರು ಗ್ರಾಮದಲ್ಲಿ ಭೀಮಾ ನದಿ ಪ್ರವಾಹದಲ್ಲಿ ಸಿಲುಕಿದ್ದ ನಾಯಿಯನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಜೀವ ಪಣಕ್ಕಿಟ್ಟು ಎದೆಯಾಳದ ನೀರಲ್ಲಿ ಹೋಗಿ ನಾಯಿಯ ಜೀವ ಉಳಿಸಿದ್ದಾರೆ.

ಮುಳ್ಳಿನ ಗುಡ್ಡದಲ್ಲಿ ಸಿಲುಕಿಕೊಂಡಿವೆ 120ಕ್ಕೂ ಹೆಚ್ಚು ಜಾನುವಾರುಗಳು: ರಾಯಚೂರಿನಲ್ಲಿ ತಾಲೂಕಿನ ಕಾಡ್ಲೂರು, ಗುರ್ಜಾಪುರ ಗ್ರಾಮ ಮತ್ತು ಯಾದಗಿರ ಜಿಲ್ಲೆ ವಡಗೇರ ತಾಲೂಕಿನ ರೈತರ ಜಾನುವಾರುಗಳು ಪ್ರವಾಹದಲ್ಲಿ ಸಿಲುಕಿಕೊಂಡಿವೆ. ಕೃಷ್ಣ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಗುರ್ಜಾಪುರದ ನದಿ ದಂಡೆಯ ಮುಳ್ಳಿನ ಗುಡ್ಡದಲ್ಲಿರುವ 120ಕ್ಕೂ ಹೆಚ್ಚು ಜಾನುವಾರುಗಳು ಪ್ರವಾಹದಲ್ಲಿ ಸಿಲುಕಿಕೊಂಡಿವೆ. ಜಾನುವಾರು ರಕ್ಷಣೆ ಮಾಡುವಂತೆ ರೈತರು ಆಗ್ರಹಿಸಿದ್ದಾರೆ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?