AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ ಗಲಭೆ: ಮತ್ತೋರ್ವ ಪ್ರಮುಖ ಆರೋಪಿ ವಾಜಿದ್ ಪಾಷಾ ಅಂದರ್

ಬೆಂಗಳೂರು: ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಪ್ರಮುಖ ಆರೋಪಿ ಕೆ.ವಾಜಿದ್ ಪಾಷನನ್ನು ಬಂಧಿಸಲಾಗಿದೆ. ವಾಜಿದ್, ಕರ್ನಾಟಕ ಟಿಪ್ಪು ಟೈಗರ್ ಅಲ್ಫತ್ ಟ್ರಸ್ಟ್‌ ಅಧ್ಯಕ್ಷನಾಗಿದ್ದ. ಜೆಡಿಎಸ್ ಪಕ್ಷದಲ್ಲೂ ಗುರುತಿಸಿಕೊಂಡಿದ್ದ. ಕೆಲವು ದಿನಗಳ ಹಿಂದೆ ಶಾಸಕ ಅಖಂಡ ಶ್ರೀನಿವಾಸ ಕಾಣೆಯಾಗಿದ್ದಾನೆಂದು ಪೋಸ್ಟ್‌ ಹಾಕಿದ್ದ. ಈ ಬಗ್ಗೆ ಅಖಂಡ ಶ್ರೀನಿವಾಸ ಬೆಂಬಲಿಗರು ದೂರು ನೀಡಿದ್ರು. ದೂರಿನ ಬಳಿಕ ಠಾಣೆಗೆ ಕರೆಸಿ ರಾಜಿ ಮಾಡಿಸಿ ಕಳಿಸಲಾಗಿತ್ತು. ವಾಜಿದ್ ಗಲಭೆ ದಿನ ನವೀನ್ ವಿರುದ್ಧ […]

ಡಿಜೆ ಹಳ್ಳಿ ಗಲಭೆ: ಮತ್ತೋರ್ವ ಪ್ರಮುಖ ಆರೋಪಿ ವಾಜಿದ್ ಪಾಷಾ ಅಂದರ್
ಆಯೇಷಾ ಬಾನು
| Edited By: |

Updated on:Aug 17, 2020 | 9:08 AM

Share

ಬೆಂಗಳೂರು: ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಪ್ರಮುಖ ಆರೋಪಿ ಕೆ.ವಾಜಿದ್ ಪಾಷನನ್ನು ಬಂಧಿಸಲಾಗಿದೆ.

ವಾಜಿದ್, ಕರ್ನಾಟಕ ಟಿಪ್ಪು ಟೈಗರ್ ಅಲ್ಫತ್ ಟ್ರಸ್ಟ್‌ ಅಧ್ಯಕ್ಷನಾಗಿದ್ದ. ಜೆಡಿಎಸ್ ಪಕ್ಷದಲ್ಲೂ ಗುರುತಿಸಿಕೊಂಡಿದ್ದ. ಕೆಲವು ದಿನಗಳ ಹಿಂದೆ ಶಾಸಕ ಅಖಂಡ ಶ್ರೀನಿವಾಸ ಕಾಣೆಯಾಗಿದ್ದಾನೆಂದು ಪೋಸ್ಟ್‌ ಹಾಕಿದ್ದ. ಈ ಬಗ್ಗೆ ಅಖಂಡ ಶ್ರೀನಿವಾಸ ಬೆಂಬಲಿಗರು ದೂರು ನೀಡಿದ್ರು. ದೂರಿನ ಬಳಿಕ ಠಾಣೆಗೆ ಕರೆಸಿ ರಾಜಿ ಮಾಡಿಸಿ ಕಳಿಸಲಾಗಿತ್ತು. ವಾಜಿದ್ ಗಲಭೆ ದಿನ ನವೀನ್ ವಿರುದ್ಧ ದೂರು ನೀಡಿದ್ದ ತಂಡದಲ್ಲಿದ್ದ. ನವೀನ್ ವಿರುದ್ಧ ದೂರಿನ ಬಳಿಕ ಪೊಲೀಸರ ವಿರುದ್ಧ ವಾಗ್ದಾಳಿ ನಡೆಸಿದ್ದ.

ನವೀನ್‌ನನ್ನು ಬಂಧಿಸಲು 2 ಗಂಟೆ ಸಮಯ ಕೇಳ್ತಿದ್ದಾರೆ ಪೊಲೀಸರು. ಅದ್ರೆ 2 ಗಂಟೆ ಸಮಯ ಯಾಕೆ ಬೇಕು. ನಮ್ಮವನಾಗಿದ್ರೆ 5 ಸೆಕೆಂಡ್‌ನಲ್ಲಿ ಬಂಧಿಸ್ತಾರೆಂದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ. ಅಸಲಿಗೆ ದೂರು ನೀಡಿದ ನಂತ್ರ ದೂರುನ್ನು ಪರಿಶೀಲನೆ ಮಾಡಿ ಎಫ್​ಐಆರ್ ದಾಖಲಿಸಲು ಎರಡು ಗಂಟೆಗಳ ಕಾಲ ಬೇಕು.

ಎಫ್​ಐಆರ್ ಇಲ್ಲದೆ ಆರೋಪಿಯನ್ನು ಅರೆಸ್ಟ್ ಮಾಡುವುದು ಕಾನೂನು ಬಾಹಿರ. ಈ ಎಲ್ಲಾ ಅಂಶ ಗಮನದಲ್ಲಿಟ್ಟುಕೊಂಡು ಪೊಲೀಸರು ಎರಡು ಗಂಟೆಗಳ ಕಾಲ ಸಮಯ ಕೇಳಿದ್ದರು. ಆದರೆ ವಾಜಿದ್ ಅವರ ವಿರುದ್ಧ ಕೂಗಾಡಿದ್ದ. ವಾಜಿದ್ ಜತೆ ಡಿ.ಜೆ.ಹಳ್ಳಿ ಠಾಣೆಗೆ ಆಗಮಿಸಿದ್ದ ನೂರಾರು ಜನ ಆತನ ಅಣತಿಯಂತೆ ಪೊಲೀಸ್ ಠಾಣೆಯನ್ನ ಧ್ವಂಸಮಾಡಿದ್ದರು. ಸದ್ಯ ವಾಜಿದ್​ನನ್ನು ಬಂಧಿಸಲಾಗಿದ್ದು, ಅವನ ಬೆಂಬಲಿಗರಲ್ಲಿ ನಡುಕ ಶುರುವಾಗಿದೆ.

Published On - 7:38 am, Mon, 17 August 20

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು