AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Apple iPhone 12: ಆಪಲ್ ಐಫೋನ್ 12ರ ಜೋಡಣೆ ಭಾರತದಲ್ಲೇ ಆರಂಭ

ಆಪಲ್ ಕಂಪೆನಿಯು ಐಫೋನ್ 12ರ ಉತ್ಪಾದನೆಯನ್ನು ಭಾರತದಲ್ಲೇ ಆರಂಭಿಸಿದೆ ಎಂದು ಕಂಪೆನಿಯ ಮೂಲಗಳು ತಿಳಿಸಿವೆ. ಈ ಬಗ್ಗೆ ಕೇಂದ್ರ ಸಚಿವರಾದ ರವಿಶಂಕರ್ ಪ್ರಸಾದ್ ಸಂತಸ ವ್ಯಕ್ತಪಡಿಸಿದ್ದಾರೆ.

Apple iPhone 12: ಆಪಲ್ ಐಫೋನ್ 12ರ ಜೋಡಣೆ ಭಾರತದಲ್ಲೇ ಆರಂಭ
ಪ್ರಾತಿನಿಧಿಕ ಚಿತ್ರ
Srinivas Mata
| Edited By: |

Updated on: Mar 11, 2021 | 7:06 PM

Share

ಆಪಲ್ ಕಂಪೆನಿಯು ಐಫೋನ್ 12ರ ಜೋಡಣೆಯನ್ನು ಭಾರತದಲ್ಲಿ ಆರಂಭಿಸಿದೆ. ಅಮೆರಿಕದ ತಂತ್ರಜ್ಞಾನ ದೈತ್ಯ ಕಂಪೆನಿ ಆಪಲ್ ಈ ಬಗ್ಗೆ ಮಾತನಾಡಿ, ವಿಶ್ವದ ಎರಡನೇ ಅತಿದೊಡ್ಡ ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ಉತ್ಪಾದನೆ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದೇವೆ ಎಂದು ಹೇಳಿದೆ. “ಐಫೋನ್ 12ರ ಉತ್ಪಾದನೆಯನ್ನು ನಮ್ಮ ಸ್ಥಳೀಯ ಗ್ರಾಹಕರಿಗಾಗಿ ಭಾರತದಲ್ಲಿ ಶುರು ಮಾಡುತ್ತಿರುವುದಕ್ಕೆ ನಮಗೆ ಹೆಮ್ಮೆ ಆಗುತ್ತಿದೆ,” ಎಂದು ಕಂಪೆನಿ ಗುರುವಾರ ನೀಡಿರುವ ಹೇಳಿಕೆಯಲ್ಲಿ ತಿಳಿಸಿದೆ. ಆದರೆ ಸ್ಮಾರ್ಟ್​ಫೋನ್ ತಯಾರಿಸುವ ಸರಬರಾಜುದಾರರ ಹೆಸರನ್ನು ಹೇಳಿಲ್ಲ.

ಆ್ಯಪಲ್ ತೈವಾನ್ ಮೂಲದ ಒಪ್ಪಂದ ಉತ್ಪಾದಕ ಸಂಸ್ಥೆ ಫಾಕ್ಸ್​ಕಾನ್ ಜತೆಗೆ ಸಹಿ ಹಾಕಿದ್ದು, ದಕ್ಷಿಣ ತಮಿಳುನಾಡಿನಲ್ಲಿ ಇರುವ ಘಟಕದಲ್ಲಿ ಉತ್ಪಾದನೆ ಮಾಡಲಾಗುತ್ತದೆ ಎಂದು ಈ ಸಂಗತಿ ಬಗ್ಗೆ ಮಾಹಿತಿ ಇರುವ ಎರಡು ಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ಫಾಕ್ಸ್​ಕಾನ್ ತಕ್ಷಣವೇ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಿರ್ದಿಷ್ಟ ಗ್ರಾಹಕರ ಕೆಲಸದ ವಿಚಾರವಾಗಿ ಏನನ್ನೂ ಹೇಳುವುದಿಲ್ಲ ಎಂದು ಈಗಾಗಲೇ ಫಾಕ್ಸ್​ಕಾನ್ ತಿಳಿಸಿದೆ.

ಆಪಲ್ ಕಂಪೆನಿಯು ಉತ್ಪಾದನೆಯ ಕೆಲವು ಭಾಗಗಳನ್ನು ಚೀನಾದಿಂದ ಇತರ ಮಾರುಕಟ್ಟೆಗೆ ಸ್ಥಳಾಂತರ ಮಾಡುತ್ತಿದೆ. ಅಮೆರಿಕ ಹಾಗೂ ಚೀನಾ ಮಧ್ಯದ ವಾಣಿಜ್ಯ ಸಮರದ ಕಾರಣಕ್ಕೆ ಈ ನಿರ್ಧಾರ ಮಾಡಬೇಕಿದೆ. ಇನ್ನು ಈ ಸಂಗತಿಗಳ ಬಗ್ಗೆ ಮಾಹಿತಿ ಇರುವವರು ತಿಳಿಸಿದ ಪ್ರಕಾರ, ನವೆಂಬರ್​ನಲ್ಲಿ ಐಪ್ಯಾಡ್ ಹಾಗೂ ಮ್ಯಾಕ್​​ಬುಕ್ ಜೋಡಣೆ ಘಟಕವನ್ನು ಚೀನಾದಿಂದ ವಿಯೆಟ್ನಾಂಗೆ ಸ್ಥಳಾಂತರ ಮಾಡಲಾಗಿದೆ. 2017ರಿಂದ ತೈವಾನ್ ಸರಬರಾಜುದಾರ ಕಂಪೆನಿ ವಿಸ್ಟ್ರಾನ್ ಕೂಡ ಭಾರತದಲ್ಲಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಐಫೋನ್ ಜೋಡಣೆ ಕಾರ್ಯ ದೊಡ್ಡ ಮಟ್ಟದಲ್ಲೇ ನಡೆಯುತ್ತಿದೆ.

ಫಾಕ್ಸ್​ಕಾನ್, ವಿಸ್ಟ್ರಾನ್ ಹಾಗೂ ಪೆಗಟ್ರಾನ್ ಈ ಮೂರು ಸೇರಿ ಇನ್ನು ಐದು ವರ್ಷದಲ್ಲಿ 900 ಮಿಲಿಯನ್ ಅಮೆರಿಕನ್ ಡಾಲರ್ ಮೌಲ್ಯದ ಐಫೋನ್ ಅನ್ನು ಭಾರತದಲ್ಲಿ ತಯಾರಿಸುವುದಕ್ಕೆ ಬದ್ಧವಾಗಿದೆ. ಭಾರತ ಸರ್ಕಾರವು 6.7 ಬಿಲಿಯನ್ ಯುಎಸ್​ಡಿ ಸ್ಮಾರ್ಟ್​ಫೋನ್ ರಫ್ತಿನ ಗುರಿ ಹಾಕಿಕೊಂಡಿದೆ. ಆಪಲ್​ನ ಐಪ್ಯಾಡ್ ಟ್ಯಾಬ್ಲೆಟ್ ಜೋಡಣೆಯನ್ನು ಸಹ ಭಾರತಕ್ಕೆ ತರುವುದಕ್ಕೆ ಆಪಲ್ ಯೋಜನೆ ರೂಪಿಸಿದೆ ಎಂದು ಕಳೆದ ತಿಂಗಳು ಮಾಧ್ಯಮವೊಂದು ವರದಿ ಮಾಡಿತ್ತು. ಉತ್ಪಾದನಾ ವಲಯದಲ್ಲಿ ಭಾರತವು ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಇದರಿಂದ ದೊಡ್ಡ ಸಂಖ್ಯೆಯಲ್ಲಿ ಉದ್ಯೋಗ ಸೃಷ್ಟಿ ಆಗಲಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ಇದನ್ನೂ ಓದಿ: Apple Spring Event: ಆಪಲ್ ಕಂಪೆನಿಯಿಂದ ಮಾರ್ಚ್ 23ಕ್ಕೆ ಹೊಸ ಉತ್ಪನ್ನಗಳ ಬಿಡುಗಡೆ ನಿರೀಕ್ಷೆ

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ