ಕೆ.ಜಿ.ಹಳ್ಳಿ-ಡಿ.ಜೆ.ಹಳ್ಳಿ ಪುಂಡಾಟ: ಕ್ಲೇಮ್ ಕಮಿಷನರ್ ನೇಮಕ ಎಲ್ಲಿವರೆಗೂ ಬಂತು?

ಬೆಂಗಳೂರು:ಡಿ.ಜೆ. ಹಳ್ಳಿ ಹಾಗೂ ಕೆ.ಜಿ. ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಂತಹ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಭೆಯಲ್ಲಿ ಹಾನಿಗೊಳಗಾದ ವಸ್ತುಗಳ ನಷ್ಟವನ್ನು ಅಂದಾಜಿಸಲು ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿಗೆ ಹೊಣೆಗಾರಿಕೆ ನೀಡಲು ಚಿಂತನೆ ನಡೆಸಲಾಗುತ್ತಿದೆ. ಕ್ಲೈಂ ಕಮಿಷನರ್ ಆಗಿ ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿಗಳನ್ನು ನೇಮಿಸಲು ಈ ಹಿಂದೆ ರಾಜ್ಯ ಸರ್ಕಾರ ಹೈಕೋರ್ಟಿಗೆ ಅರ್ಜಿ ಸಲ್ಲಿಸಿತ್ತು. ಹೀಗಾಗಿ ಹೈಕೋರ್ಟ್​ನ ರಿಜಿಸ್ಟ್ರಾರ್ ನಿವೃತ್ತ ನ್ಯಾಯಮೂರ್ತಿಗಳ ಸಮ್ಮತಿ ಕೇಳಿದ್ದಾರೆ. ನಿವೃತ್ತ ನ್ಯಾಯಮೂರ್ತಿಗಳಾದ ನ್ಯಾ. ಕೆ.ಎನ್.ಫಣೀಂದ್ರ ಅಥವಾ ನ್ಯಾ. ಪಿ.ಜಿ.ಎಂ.ಪಾಟೀಲ್ ನೇಮಕ ಮಾಡುವ ಸಾಧ್ಯತೆಗಳಿವೆ. […]

ಕೆ.ಜಿ.ಹಳ್ಳಿ-ಡಿ.ಜೆ.ಹಳ್ಳಿ ಪುಂಡಾಟ: ಕ್ಲೇಮ್ ಕಮಿಷನರ್ ನೇಮಕ ಎಲ್ಲಿವರೆಗೂ ಬಂತು?
ಕರ್ನಾಟಕ ಹೈಕೋರ್ಟ್​
ಸಾಧು ಶ್ರೀನಾಥ್​

Updated on: Aug 25, 2020 | 1:06 PM

ಬೆಂಗಳೂರು:ಡಿ.ಜೆ. ಹಳ್ಳಿ ಹಾಗೂ ಕೆ.ಜಿ. ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಂತಹ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಭೆಯಲ್ಲಿ ಹಾನಿಗೊಳಗಾದ ವಸ್ತುಗಳ ನಷ್ಟವನ್ನು ಅಂದಾಜಿಸಲು ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿಗೆ ಹೊಣೆಗಾರಿಕೆ ನೀಡಲು ಚಿಂತನೆ ನಡೆಸಲಾಗುತ್ತಿದೆ.

ಕ್ಲೈಂ ಕಮಿಷನರ್ ಆಗಿ ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿಗಳನ್ನು ನೇಮಿಸಲು ಈ ಹಿಂದೆ ರಾಜ್ಯ ಸರ್ಕಾರ ಹೈಕೋರ್ಟಿಗೆ ಅರ್ಜಿ ಸಲ್ಲಿಸಿತ್ತು. ಹೀಗಾಗಿ ಹೈಕೋರ್ಟ್​ನ ರಿಜಿಸ್ಟ್ರಾರ್ ನಿವೃತ್ತ ನ್ಯಾಯಮೂರ್ತಿಗಳ ಸಮ್ಮತಿ ಕೇಳಿದ್ದಾರೆ.

ನಿವೃತ್ತ ನ್ಯಾಯಮೂರ್ತಿಗಳಾದ ನ್ಯಾ. ಕೆ.ಎನ್.ಫಣೀಂದ್ರ ಅಥವಾ ನ್ಯಾ. ಪಿ.ಜಿ.ಎಂ.ಪಾಟೀಲ್ ನೇಮಕ ಮಾಡುವ ಸಾಧ್ಯತೆಗಳಿವೆ. ಇದೇ ವೇಳೆ, ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 28 ಕ್ಕೆ ಮುಂದೂಡಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us