AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಮದುವೆ ಆಗಿಹೋಗಿದೆ ಅಂತ ಎಲ್ಲರೂ ಹೇಳ್ತಾ ಇದಾರೆ ಎಂದ ಅರವಿಂದ್​ ಕೆಪಿ; ದಿವ್ಯಾ ರಿಯಾಕ್ಷನ್​ ಹೇಗಿತ್ತು?

ಸೆಲೆಬ್ರಿಟಿ ಪಟ್ಟ ಸಿಕ್ಕ ನಂತರದಲ್ಲಿ ಅದರ ಜೊತೆಜೊತೆಗೆ ವದಂತಿಗಳು ಹಾಗೂ ಸುಳ್ಳುಸುದ್ದಿಗಳೂ ಅಂಟಿಕೊಳ್ಳುತ್ತವೆ. ಮದುವೆ ವಿಚಾರ, ಪ್ರೀತಿ ವಿಚಾರ, ಕೌಟುಂಬಿಕ ವಿಚಾರದಲ್ಲಿ ಒಂದಷ್ಟು ಸುದ್ದಿಗಳು ಹುಟ್ಟಿಕೊಳ್ಳುತ್ತವೆ. ನ

ನನ್ನ ಮದುವೆ ಆಗಿಹೋಗಿದೆ ಅಂತ ಎಲ್ಲರೂ ಹೇಳ್ತಾ ಇದಾರೆ ಎಂದ ಅರವಿಂದ್​ ಕೆಪಿ; ದಿವ್ಯಾ ರಿಯಾಕ್ಷನ್​ ಹೇಗಿತ್ತು?
ಅರವಿಂದ್​ ಕೆಪಿ-ದಿವ್ಯಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 10, 2021 | 2:03 PM

ಅರವಿಂದ್​ ಕೆ.ಪಿ. ಹಾಗೂ ದಿವ್ಯಾ ಉರುಡುಗ ಬಿಗ್​ ಬಾಸ್ ಕನ್ನಡ ಸೀಸನ್​ 8ರಲ್ಲಿ ತುಂಬಾನೇ ಕ್ಲೋಸ್​ ಆದರು. ಅರವಿಂದ್​ ಅವರ ಕಾರ್ಯಕ್ಷೇತ್ರವೇ ಬೇರೆ, ದಿವ್ಯಾ ಅವರ ಕಾರ್ಯಕ್ಷೇತ್ರವೇ ಬೇರೆ. ಆದರೂ ಇಬ್ಬರೂ ಒಂದು ಕಡೆ ಸೇರೋಕೆ ವೇದಿಕೆ ಮಾಡಿಕೊಟ್ಟಿದ್ದು ಬಿಗ್​ ಬಾಸ್​. ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಬೆಳೆದು ನಂತರ ಪ್ರೀತಿ ಹುಟ್ಟಿತ್ತು. ಇದನ್ನು ಇಬ್ಬರೂ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಆದರೆ, ಮದುವೆ ವಿವಾರದಲ್ಲಿ ಮಾತ್ರ ಇವರು ಮೌನ ತಾಳಿದ್ದಾರೆ. ಎಲ್ಲಿಯೂ ಅವರು ಗುಟ್ಟುಬಿಟ್ಟುಕೊಟ್ಟಿಲ್ಲ. ಆದರೆ, ಇವರ ಮದುವೆ ಆಗಿಯೇ ಹೋಗಿದೆ ಎನ್ನುವ ಗಾಸಿಪ್​ ಹರಿದಾಡುತ್ತಿದೆಯಂತೆ. ಈ ಬಗ್ಗೆ ಅರವಿಂದ್​ ಹೇಳಿಕೊಂಡಿದ್ದಾರೆ.

ಸೆಲೆಬ್ರಿಟಿ ಪಟ್ಟ ಸಿಕ್ಕ ನಂತರದಲ್ಲಿ ಅದರ ಜೊತೆಜೊತೆಗೆ ವದಂತಿಗಳು ಹಾಗೂ ಸುಳ್ಳುಸುದ್ದಿಗಳೂ ಅಂಟಿಕೊಳ್ಳುತ್ತವೆ. ಮದುವೆ ವಿಚಾರ, ಪ್ರೀತಿ ವಿಚಾರ, ಕೌಟುಂಬಿಕ ವಿಚಾರದಲ್ಲಿ ಒಂದಷ್ಟು ಸುದ್ದಿಗಳು ಹುಟ್ಟಿಕೊಳ್ಳುತ್ತವೆ. ನಟ-ನಟಿಯರಿಗೆ ಅದನ್ನು ನಿಭಾಯಿಸಿಕೊಂಡು ಹೋಗೋದು ಅನಿವಾರ್ಯ. ಈಗ ಅರವಿಂದ್​ ಅವರಿಗೂ ಅದೇ ರೀತಿ ಆಗಿದೆ.

ಅರವಿಂದ್​ ಅವರು ಕಲರ್ಸ್​ ಕನ್ನಡದ ಕಲರ್​​ಫುಲ್​ ವೇದಿಕೆ ಅನುಬಂಧಕ್ಕೆ ಆಗಮಿಸಿದ್ದಾರೆ. ದಿವ್ಯಾ ಉರುಡುಗ ಕೂಡ ಇವರಿಗೆ ಜೊತೆಯಾಗಿದ್ದಾರೆ. ಮೂರು ದಿನಗಳ ಕಾಲ ನಡೆದ ಈ ಕಾರ್ಯಕ್ರಮದ ಶೂಟಿಂಗ್​​ ಈಗಾಲೇ ಪೂರ್ಣಗೊಂಡಿದ್ದು, ಮುಂದಿನ ವಾರಾಂತ್ಯದಲ್ಲಿ ಪ್ರಸಾರವಾಗಲಿದೆ. ಈ ಪ್ರೋಮೋಗಳನ್ನು ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಳ್ಳುತ್ತಿದೆ.

ಅರವಿಂದ್ ಕೆ.ಪಿ. ಹಾಗೂ ದಿವ್ಯಾ ಉರುಡುಗ ಅವರು ಅನುಬಂಧ ಅವಾರ್ಡ್ಸ್​​ನಲ್ಲಿ ಆಯೋಜಿಸಿದ್ದ ಕೆಂಪು ಹಾಸಿನ ಮೇಲೆ ನಡೆದಿದ್ದಾರೆ. ಈ ವೇಳೆ ಅವರಿಗೆ ಪ್ರಶ್ನೆ ಒಂದು ಎದುರಾಯಿತು. ಅರವಿಂದ್​ ಅವರು ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನುವ ಸುದ್ದಿ ಇದೆ ಹೌದಾ ಎಂದು ನಿರೂಪಕಿ ಕೇಳಿದರು. ಹಾಗೇ ಹೇಳೋದಾದ್ರೆ ನನ್ನ ಮದುವೆ ಕೂಡ ಆಗಿದೆ ಎಂದು ಎಲ್ಲರೂ ಹೇಳ್ತಾ ಇದಾರೆ ಎಂದರು ಅರವಿಂದ್​.  ಈ ಮೂಲಕ ಈ ಸುದ್ದಿ ಫೇಕ್​ ಎಂದರು. ಅರವಿಂದ್ ಹೀಗೆ ಹೇಳುತ್ತಿದ್ದಂತೆ ದಿವ್ಯಾ ನಕ್ಕರು.

ಇದನ್ನೂ ಓದಿ: ‘ಮದುವೆ ಯಾವಾಗ’ ಎನ್ನುವ ಪ್ರಶ್ನೆಗೆ ದಿವ್ಯಾ ಉರುಡುಗ ಪಕ್ಕದಲ್ಲೇ ನಿಂತು ಉತ್ತರಿಸಿದ ಅರವಿಂದ್​ ಕೆಪಿ

ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ